ಬ್ರೇಕಿಂಗ್ ನ್ಯೂಸ್
11-08-24 01:45 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್ 11: ಮೀಸಲಾತಿ ವಿರೋಧಿ ಹೋರಾಟಗಾರರ ಹಿಂಸಾಚಾರ ಅಲ್ಪಸಂಖ್ಯಾತ ಹಿಂದುಗಳ ಮೇಲೆ ತಿರುಗಿದ ಬೆನ್ನಲ್ಲೇ ಬಾಂಗ್ಲಾ ದೇಶದಲ್ಲಿ ಹಿಂದೂ ಸಮುದಾಯದ ಲಕ್ಷಾಂತರ ಮಂದಿ ಬೀದಿಗೆ ಇಳಿದಿದ್ದಾರೆ. ತಮ್ಮ ಮೇಲೆ ಆಗುತ್ತಿರುವ ದೌರ್ಜನ್ಯದ ವಿರುದ್ಧ ಹಿಂದೂಗಳು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದು ನಾವೆಲ್ಲೂ ಹೋಗಲ್ಲ. ನಾವು ಬಾಂಗ್ಲಾದವರೇ. ಬಾಂಗ್ಲಾ ನಮ್ಮ ಹಕ್ಕು ಎಂದು ಘೋಷಣೆ ಕೂಗುತ್ತ ಧರಣಿ ನಡೆಸಿದ್ದಾರೆ.
ಬಾಂಗ್ಲಾ ದೇಶದ ಮಾಜಿ ಪ್ರಧಾನ ಮಂತ್ರಿ ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಶುರುವಾದ ಹಿಂದೂಗಳ ಮೇಲಿನ ಹಿಂಸಾಚಾರ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಹಿಂದೂಗಳು ತಮ್ಮ ಆಕ್ರೋಶ ಹೊರ ಹಾಕುತ್ತಿದ್ಧಾರೆ. ರಾಜಧಾನಿ ಢಾಕಾ ಹಾಗೂ ಚಿತ್ತಗಾಂಗ್ನಲ್ಲಿ ಹಿಂದೂಗಳು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಬಾಂಗ್ಲಾ ದೇಶದಲ್ಲಿ ಢಾಕಾ ಬಳಿಕ ಎರಡನೇ ಅತಿ ದೊಡ್ಡ ನಗರವಾದ ಚಿತ್ತಗಾಂಗ್ನಲ್ಲಿ ಲಕ್ಷಾಂತರ ಮಂದಿ ಹಿಂದೂಗಳು ಒಂದೆಡೆ ಸೇರಿ ಭಾರೀ ಜನಾಂದೋಲನ ನಡೆಸಿದರು.
ಬಾಂಗ್ಲಾ ದೇಶದಾದ್ಯಂತ 52 ಜಿಲ್ಲೆಗಳಲ್ಲಿ ಸುಮಾರು 205 ಕಡೆ ಅಲ್ಪಸಂಖ್ಯಾತ ಹಿಂದುಗಳನ್ನು ಟಾರ್ಗೆಟ್ ಮಾಡಿ ದಾಳಿಗಳು ನಡೆದಿವೆ. ನೂರಾರು ಹಿಂದೂಗಳು ಗಾಯಗೊಂಡಿದ್ದು ಹಲವರು ಸಾವನ್ನಪ್ಪಿದ್ದಾರೆ. ಹಿಂದೂಗಳ ಮನೆ ಹಾಗೂ ಉದ್ಯಮಗಳ ಮೇಲೂ ದಾಳಿ ನಡೆದಿದೆ. ಸಾಕಷ್ಟು ಕಡೆ ಹಿಂದೂ ದೇಗುಲಗಳಿಗೂ ಹಾನಿ ಮಾಡಲಾಗಿದೆ. ಶೇಖ್ ಹಸೀನಾ ಅವರ ಆವಾಮಿ ಲೀಗ್ ಪಕ್ಷದ ನಾಯಕರಾಗಿದ್ದ ಇಬ್ಬರು ಹಿಂದುಗಳನ್ನು ಹತ್ಯೆ ಮಾಡಲಾಗಿದೆ. ಕೆಲವು ದೇಗುಲಗಳ ಮೇಲೆ ದಾಳಿ ನಡೆಸಿ, ಬೆಂಕಿ ಇಟ್ಟಿರುವ ಘಟನೆಗಳೂ ನಡೆದಿವೆ. ಇದೇ ವೇಳೆ, ಸಾವಿರಾರು ಮಂದಿ ಬಾಂಗ್ಲಾ ಬಿಟ್ಟು ಭಾರತಕ್ಕೆ ಬರಲು ಗಡಿಯಲ್ಲಿ ಜಮಾಯಿಸಿರುವ ಘಟನೆಗಳೂ ನಡೆದಿವೆ.
ಇದೀಗ ತಮ್ಮ ಮೇಲಾದ ದೌರ್ಜನ್ಯ ವಿರುದ್ಧ ಹೋರಾಟ ನಡೆಸುತ್ತಿರುವ ಹಿಂದೂ ಸಮುದಾಯ, ತಮ್ಮ ಮೇಲೆ ದಾಳಿ ಮಾಡಿದವರನ್ನು ಗುರುತಿಸಿ ಅವರಿಗೆ ಶಿಕ್ಷೆ ಕೊಡಲು ವಿಶೇಷ ನ್ಯಾಯ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿದ್ದಾರೆ. ಬಾಂಗ್ಲಾ ದೇಶದ ಸಂಸತ್ನಲ್ಲಿ ಶೇ. 10 ರಷ್ಟು ಸ್ಥಾನಗಳನ್ನು ಅಲ್ಪಸಂಖ್ಯಾತ ಹಿಂದೂಗಳಿಗೆ ಮೀಸಲು ಇಡುವಂತೆಯೂ ಆಗ್ರಹಿಸಿದ್ದಾರೆ. ಜೊತೆಯಲ್ಲೇ ಅಲ್ಪಸಂಖ್ಯಾತ ರಕ್ಷಣಾ ಕಾನೂನು ಜಾರಿಗೆ ತರಬೇಕು ಎಂದೂ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಹಿಂದುಗಳ ಮೇಲೆ ದಾಳಿಯಿಂದ ಕಂಗೆಟ್ಟ ಹಂಗಾಮಿ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಿಸ್, ದಾಳಿ ನಿಲ್ಲಿಸದಿದ್ದರೆ ರಾಜಿನಾಮೆ ಕೊಟ್ಟು ಹೋಗುತ್ತೇನೆ ಎಂದು ಹೋರಾಟಗಾರರಿಗೆ ಎಚ್ಚರಿಸಿದ್ದಾರೆ.
Members of at least six Hindu organisations marched to the office of the Assistant High Commissioner of Bangladesh in Guwahati to protest the targeted attacks on minorities during the political turmoil in the neighbouring country. The groups, including Kutumba Surakshya Parishad and Hindu Surakshya Sena, also handed over a memorandum to the representatives of Bangladesh containing a list of demands and requests.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm