ಬ್ರೇಕಿಂಗ್ ನ್ಯೂಸ್
08-12-20 05:34 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಡಿ. 8: ಇಡೀ ಜಗತ್ತೇ ಕೊರೋನಾದಿಂದ ನಲುಗುತ್ತಿದೆ. ಭಾರತದಲ್ಲೂ ಕೊರೋನಾ ಅಟ್ಟಹಾಸ ಕಡಿಮೆಯಾಗಿಲ್ಲ. ಇದರ ನಡುವಲ್ಲೇ ಆಂಧ್ರ ಪ್ರದೇಶದ ಎಲೂರಿನಲ್ಲಿ ಮತ್ತೊಂದು ವಿಚಿತ್ರ ಮತ್ತು ನಿಗೂಢ ರೋಗ ಕಾಣಿಸಿಕೊಂಡಿದೆ.
ಆಂಧ್ರ ಪ್ರದೇಶ ಮಾತ್ರವಲ್ಲದೆ ಇಡೀ ದೇಶದಲ್ಲೇ ಆತಂಕ ಸೃಷ್ಟಿಸಿರುವ ಈ ವಿಚಿತ್ರವಾದ ರೋಗದಿಂದ 450ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಈ ರೋಗಕ್ಕೆ ಕೀಟನಾಶಕಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗಿದ್ದ ರಾಸಾಯನಿಕವೇ ಕಾರಣ ಎನ್ನಲಾಗುತ್ತಿದೆ.

ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಎಲೂರಿನಲ್ಲಿ ಕಾಣಿಸಿಕೊಂಡಿರುವ ಈ ನಿಗೂಢ ಕಾಯಿಲೆ ಸಾಂಕ್ರಾಮಿಕವೆಂಬ ಅನುಮಾನವಿದೆ. ಶನಿವಾರ ರಾತ್ರಿಯಿಂದ 450ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ಸೇರಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಒಬ್ಬರು ಬಲಿಯಾಗಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿರುವವರನ್ನು ಎಲೂರಿನಿಂದ ವಿಜಯವಾಡ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇದ್ದಕ್ಕಿದ್ದಂತೆ ಅಸ್ವಸ್ಥರಾದ ಎಲೂರು ಪಟ್ಟಣದ ಜನರು ನಿಗೂಢ ರೋಗದಿಂದ ಬಳಲುತ್ತಿದ್ದಾರೆ. ವಾಂತಿ, ಪ್ರಜ್ಞಾಹೀನತೆಯಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಇನ್ನೂ ಕಡಿಮೆಯಾಗಿಲ್ಲ. ಈ ಮೂರ್ಛೆ ರೋಗದ ಲಕ್ಷಣಗಳು ಸಾಂಕ್ರಾಮಿಕವಾಗಿ ಹರಡುತ್ತಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಒಂದೇ ಬಾರಿಗೆ ಒಂದೇ ರೀತಿಯ ರೋಗ ಲಕ್ಷಣಗಳಿರುವ 450ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಎಲೂರಿನಲ್ಲಿ ಹೆಚ್ಚಾಗಿರುವ ನಿಗೂಢ ರೋಗಕ್ಕೆ ತರಕಾರಿ, ಕೃಷಿ ಉತ್ಪನ್ನಗಳಿಗೆ ಸಿಂಪಡಿಸುವ ಕೀಟನಾಶಕಗಳಲ್ಲಿರುವ ಅಧಿಕ ರಾಸಾಯನಿಕವೇ ಕಾರಣ ಎಂದು ಹೇಳಲಾಗಿದೆ. ರೋಗಿಗಳ ದೇಹದಲ್ಲಿರುವ ರಾಸಾಯನಿಕದ ಅಂಶದ ವರದಿಯಿಂದ ಈ ರೀತಿ ಅಂದಾಜಿಸಲಾಗಿದೆ. ಈ ಕೀಟನಾಶಕಗಳನ್ನು ಸೊಳ್ಳೆ ನಿಯಂತ್ರಣ ಮತ್ತು ಕೃಷಿ ಉತ್ಪನ್ನಗಳ ಕೀಟಗಳನ್ನು ನಿಯಂತ್ರಿಸಲು ಬಳಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಕೀಟನಾಶಕಗಳಲ್ಲಿ ಡಿಡಿಟಿ ಕೂಡ ಸೇರಿದೆ. ಸೊಳ್ಳೆಗಳನ್ನು ನಿಯಂತ್ರಿಸಲು ವಿಪರೀತವಾಗಿ ಡಿಡಿಟಿ ಸಿಂಪಡಣೆ ಮಾಡಿರುವುದರಿಂದ ಈ ರೀತಿ ಸಮಸ್ಯೆ ಉಂಟಾದ ಸಾಧ್ಯತೆಯೂ ಇದೆ ಎನ್ನಲಾಗಿದೆ. ಆದರೆ, ಲ್ಯಾಬೋರೇಟರಿ ವರದಿ ಬಂದ ನಂತರವೇ ಈ ಕುರಿತು ಖಚಿತತೆ ಸಿಗಲಿದೆ.

ಬಾಯಿಯಲ್ಲಿ ನೊರೆ ಬಂದು, ಮೂರ್ಛೆ ಹೋಗುತ್ತಿರುವ ರೋಗಿಗಳಿಂದ ಈ ಕಾಯಿಲೆ ಸಾಂಕ್ರಾಮಿಕವಾಗಿ ಹರಡುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಒಂದೇ ರೀತಿಯ ಸಮಸ್ಯೆಯಿಂದ 450ಕ್ಕೂ ಹೆಚ್ಚು ರೋಗಿಗಳು ಆಸ್ಪತ್ರೆಗೆ ದಾಖಲಾಗಿರುವುದನ್ನು ಆಂಧ್ರ ಪ್ರದೇಶ ಸರ್ಕಾರ ಕೂಡ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಎಲೂರು ಆಸ್ಪತ್ರೆಗಳಿಗೆ ತೆರಳಿ ರೋಗಿಗಳನ್ನು ಭೇಟಿಯಾಗಿದ್ದಾರೆ.
ಇದೇ ರೋಗ ಲಕ್ಷಣಗಳಿಂದ ವಿಜಯವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ 45 ವರ್ಷದ ರೋಗಿಯೊಬ್ಬರು ಭಾನುವಾರ ಸಂಜೆ ಸಾವನ್ನಪ್ಪಿದ್ದಾರೆ. ಇದರಿಂದ ಆತಂಕ ಇನ್ನಷ್ಟು ಹೆಚ್ಚಾಗಿದೆ. ಈ ನಿಗೂಢ ಕಾಯಿಲೆಯಿಂದ ಬಳಲುತ್ತಿರುವವರಲ್ಲಿ ಹೆಚ್ಚಿನವರು ವೃದ್ಧರು ಮತ್ತು ಮಕ್ಕಳು ಎಂಬುದು ಇನ್ನೂ ಆತಂಕಕಾರಿ ಸಂಗತಿ.
The Ministry of Health and Family Welfare is sending a Central team to Eluru in Andhra Pradesh’s West Godavari district, where 340 people have fallen sick due to an unknown disease.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm