ಬ್ರೇಕಿಂಗ್ ನ್ಯೂಸ್
16-08-24 12:07 pm H K News Desk ದೇಶ - ವಿದೇಶ
ನಾಗಪುರ, ಆಗಸ್ಟ್ 16: ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಸಮುದಾಯದ ರಕ್ಷಣೆಯನ್ನು ಭಾರತ ಖಚಿತಪಡಿಸಿಕೊಳ್ಳಬೇಕು. ಆ ಜವಾಬ್ದಾರಿ ಭಾರತಕ್ಕಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್)ದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಮಾಡಿ ಭಾಗವತ್ ಈ ಮಾತುಗಳನ್ನು ಹೇಳಿದ್ದಾರೆ. ಬಾಂಗ್ಲಾ ದೇಶದಲ್ಲಿ ಹಿಂದೂಗಳು ಯಾವುದೇ ಅನ್ಯಾಯ ಮತ್ತು ದೌರ್ಜನ್ಯಗಳನ್ನು ಎದುರಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಭಾರತದ್ದಾಗಿದೆ. ಅಲ್ಲಿನ ಹಿಂದುಗಳ ರಕ್ಷಣೆಯನ್ನು ಭಾರತ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದರು.
ಮುಂಬರುವ ಪೀಳಿಗೆಯು 'ಸ್ವತಂತ್ರ'(ಸ್ವಾತಂತ್ರ್ಯ) ಪದದ 'ಸ್ವಾ'ವನ್ನು ರಕ್ಷಿಸುವ ಕರ್ತವ್ಯ ಹೊಂದಿದೆ. ಏಕೆಂದರೆ ಜಗತ್ತಿನಲ್ಲಿ ಯಾವಾಗಲೂ ಇತರ ದೇಶಗಳ ಮೇಲೆ ಪ್ರಾಬಲ್ಯ ಸಾಧಿಸಲು ಬಯಸುವ ಜನ ಇರುತ್ತಾರೆ. ಹೀಗಾಗಿ ನಾವು ಜಾಗರೂಕರಾಗಿರಬೇಕು ಮತ್ತು ಅವರಿಂದ ನಮ್ಮನ್ನು ರಕ್ಷಿಸಿಕೊಳ್ಳಬೇಕು ಎಂದರು.
ಪರಿಸ್ಥಿತಿ ಎಲ್ಲ ಕಾಲದಲ್ಲೂ ಒಂದೇ ರೀತಿ ಇರುವುದಿಲ್ಲ. ನಾವು ಈಗ ನೆರೆಯ ದೇಶದ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ಅಲ್ಲಿ ಸಾಕಷ್ಟು ಹಿಂಸಾಚಾರಗಳು ನಡೆಯುತ್ತಿವೆ. ಹಿಂದುಗಳು ವಿನಾಕಾರಣ ಟಾರ್ಗೆಟ್ ಆಗುತ್ತಿದ್ದಾರೆ. ಅಲ್ಲಿ ವಾಸಿಸುವ ಹಿಂದೂಗಳು ಯಾವುದೇ ಕಾರಣವಿಲ್ಲದೆ ಹಿಂಸಾಚಾರದ ಪರಿಣಾಮ ಎದುರಿಸುತ್ತಿದ್ದಾರೆ ಎಂದು ಭಾಗವತ್ ಹೇಳಿದ್ದಾರೆ.
ಭಾರತವು ಇತರರಿಗೆ ಸಹಾಯ ಮಾಡುವ ಸಂಪ್ರದಾಯವನ್ನು ಹೊಂದಿದೆ. ಕಳೆದ ಕೆಲವು ವರ್ಷಗಳಲ್ಲಿ ಭಾರತವು ಯಾರ ಮೇಲೂ ದಾಳಿ ಮಾಡಿಲ್ಲ. ಆದರೆ ತೊಂದರೆಯಲ್ಲಿರುವವರಿಗೆ ಅವರು ನಮ್ಮೊಂದಿಗೆ ಹೇಗೆ ವರ್ತಿಸುತ್ತಾರೆ ಎಂಬುದನ್ನು ಲೆಕ್ಕಿಸದೆ ಸಹಾಯ ಮಾಡಿದೆ ಎಂದು ಭಾಗವತ್ ನೆನಪಿಸಿದರು.
Rashtriya Swayamsewak Sangh (RSS) chief Mohan Bhagwat on Thursday (August 15) said that Hindus are being subjected to violence for no reason in Bangladesh and added that that India has the responsibility to ensure they do not face any atrocities.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am