ಬ್ರೇಕಿಂಗ್ ನ್ಯೂಸ್
18-08-24 12:06 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.18: ಮುಸ್ಲಿಮರಿಗೆ ಏಕರೂಪ ಅಥವಾ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ. ಷರಿಯಾ ಕಾನೂನಿನೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೇಳಿದೆ.
ಪ್ರಧಾನ ಮಂತ್ರಿಗಳು ಜಾತ್ಯತೀತ ನಾಗರಿಕ ಸಂಹಿತೆಗಾಗಿ ಕರೆ ನೀಡಿರುವುದನ್ನು ಪರಿಗಣಿಸುತ್ತೇವೆ. ಆದರೆ ಧಾರ್ಮಿಕ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮುಸ್ಲಿಂ ವೈಯಕ್ತಿಕ ಕಾನೂನಿನೊಂದಿಗೆ ಎಂದಿಗೂ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಹೀಗಾಗಿ ಜಾತ್ಯತೀತ ನಾಗರಿಕ ಸಂಹಿತೆ ಸ್ವೀಕಾರಾರ್ಹವಲ್ಲ ಎಂದು ಮಂಡಳಿ ವಕ್ತಾರ ಡಾ. ಎಸ್ಕ್ಯೂಆರ್ ಇಲ್ಯಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಧರ್ಮದ ಆಧಾರದ ಮೇಲೆ ವೈಯಕ್ತಿಕ ಕಾನೂನುಗಳನ್ನು ಕೋಮುವಾದ ಎಂದು ಕರೆಯುವುದನ್ನು ಒಪ್ಪುವುದಿಲ್ಲ. ಮತ್ತು ಜಾತ್ಯತೀತ ನಾಗರಿಕ ಸಂಹಿತೆಯ ಮೂಲಕ ಅವುಗಳನ್ನು ಬದಲಿಸುವ ಪ್ರಧಾನಿಯವರು ಮಾಡಿರುವ ಘೋಷಣೆ ಬಗ್ಗೆ ನಮಗೆ ಆತಂಕವಿದೆ ಎಂದು ಹೇಳಿದ್ದಾರೆ. ಆಯಾ ಸಮುದಾಯಗಳ ಕೌಟುಂಬಿಕ ಕಾನೂನುಗಳು ತಮ್ಮದೇ ಆದ ಧಾರ್ಮಿಕ ಮತ್ತು ಹಳೆಯ ಸಂಪ್ರದಾಯಗಳನ್ನು ಆಧರಿಸಿವೆ. ಆದ್ದರಿಂದ, ಅವುಗಳನ್ನು ಬದಲಿಸುವುದು ಮತ್ತು ಎಲ್ಲರಿಗೂ ಜಾತ್ಯತೀತ ನೆಪದಲ್ಲಿ ಕಾನೂನು ಹೇರುವುದು, ಆ ರೀತಿಯ ಜಾತ್ಯತೀತವಾದ ಸೃಷ್ಟಿಸಲು ಪ್ರಯತ್ನಿಸುವುದು ಧರ್ಮದ ನಿರಾಕರಣೆ ಮತ್ತು ಪಾಶ್ಚಿಮಾತ್ಯರ ಅನುಕರಣೆಯಾಗಿದೆ ಎಂದಿದ್ದಾರೆ.
The All India Muslim Personal Law Board said on Saturday that a uniform or secular civil code will not be acceptable to Muslims as they will not compromise with Sharia law.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm