ಬ್ರೇಕಿಂಗ್ ನ್ಯೂಸ್
21-08-24 10:27 pm HK News Desk ದೇಶ - ವಿದೇಶ
ಅಮರಾವತಿ, ಆ 21: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟ ಸಂಭವಿಸಿ 17 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 41 ಕಾರ್ಮಿಕರು ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ ಎಂದು ಜಿಲ್ಲಾಧಿಕಾರಿ ವಿಜಯ ಕೃಷ್ಣನ್ ತಿಳಿಸಿದ್ದಾರೆ.
ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಎನ್ಟಿಆರ್ ಆಸ್ಪತ್ರೆಗೆ ರವಾನಿಸಲಾಗಿದೆ.


ಕಾರ್ಮಿಕರು ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕಾರ್ಖಾನೆಯಲ್ಲಿ ನಡೆದ ಸ್ಫೋಟದಿಂದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ದಟ್ಟ ಹೊಗೆ ಆವರಿಸಿದೆ. ಘಟನೆ ಕುರಿತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಮತ್ತು ರಕ್ಷಣಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಇನ್ನೂ ಅವಘಡ ಸಂಭವಿಸಿದ ವೇಳೆ ಕರ್ಖಾನೆ ಘಟಕದಲ್ಲೇ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಸ್ಸೆಂಟಿಯಾ ಫಾರ್ಮಾ ಕಂಪನಿಯಲ್ಲಿ ಸುಮಾರು 1,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಅತಿದೊಡ್ಡ ಫಾರ್ಮಾ ಕಂಪನಿಗಳಲ್ಲಿ ಇದು ಸಹ ಒಂದಾಗಿದೆ ಎಂದು ವರದಿಯಾಗಿದೆ.
ಇನ್ನೂ ಘಟನೆ ಬಳಿಕ ಕಾರ್ಖಾನೆ ಮುಂದೆ ಜಮಾಯಿಸಿದ ಕಾರ್ಮಿಕರು ಮೃತ ಸಂತ್ರಸ್ತರ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ನೀಡಬೇಕು ಹಾಗೂ ರಿಯಾಕ್ಟರ್ ಸ್ಫೋಟಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.
At least 17 people died and 41 were injured after an explosion in Andhra Pradesh's Anakapalle. The explosion took place at the Achutapuram Special Economic Zone.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am