ಬ್ರೇಕಿಂಗ್ ನ್ಯೂಸ್
23-08-24 04:27 pm HK News Desk ದೇಶ - ವಿದೇಶ
ಮುಂಬೈ, ಆ 23: ಸ್ವಾತಂತ್ರ್ಯ ದಿನಾಚರಣೆಯಂದು ಠಾಣೆಯನ್ನು ಸಂಪೂರ್ಣವಾಗಿ ಅಲಂಕರಿಸಿ ಮೈಕ್ ಸೆಟ್ ಹಾಕಿ ಬಾಲಿವುಡ್ ಹಾಡೊಂದಕ್ಕೆ ಕುಣಿದು ಕುಪ್ಪಳಿಸಿದ್ದ ಇಬ್ಬರು ಪುರುಷ ಹಾಗೂ ಇಬ್ಬರು ಮಹಿಳಾ ಪೊಲೀಸರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿರಿಯ ಅಧಿಕಾರಿಗಳು ನಾಲ್ವರು ಪೊಲೀಸರನ್ನು ಅಮಾನತು ಮಾಡಿದ್ದಾರೆ
ಈ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದ್ದು ಅಲ್ಲಿನ ಗಾಂಧಿಭಾಗ್ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಠಾಣೆ ಮುಂಭಾಗ ತ್ರಿವರ್ಣ ಧ್ವಜದ ಬಲೂನ್ ಗಳನ್ನು ಹಾಕಲಾಗಿದ್ದು, ಆಕರ್ಷಕವಾಗಿ ಕಾಣುವಂತೆ ಮಾಡಲಾಗಿತ್ತು. ಇಷ್ಟೇ ಆಗಿದ್ದರೆ ಪರವಾಗಿಲ್ಲ ಆದರೆ ಮೈಕ್ ಸೆಟ್ ಕೂಡ ಹಾಕಿಸಲಾಗಿದ್ದು, ನಾಲ್ವರು ಪೊಲೀಸರಿಗೆ ನೃತ್ಯ ಮಾಡದೆ ಸುಮ್ಮನೆ ಕುಳಿತುಕೊಳ್ಳಲು ಆಗಿಲ್ಲ.
ಹೀಗಾಗಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಅಭಿನಯದ ಹಾಡು ‘ಹೋ ಕೈಕೇ ಪಾನುಬರಸ ವಾಲಾ’ ಹಾಡು ಪ್ಲೇ ಆಗುತ್ತಿದ್ದಂತೆ ಗಾಂಧಿಬಾಗ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಸಂಜಯ್ ಪಟ್ನಾಕರ್, ಮುಖ್ಯಪೇದೆಗಳಾದ ಅಬ್ದುಲ್ ಖಯ್ಯೂಮ್ ಘನಿ ಹಾಗೂ ಭಾಗ್ಯಶ್ರೀ ಗಿರಿ ಮತ್ತು ಮಹಿಳಾ ಪೇದೆ ನಿರ್ಮಲ ಗಾವ್ಳಿ ಭರ್ಜರಿ ಸ್ಟೆಪ್ ಹಾಕಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಗರಂ ಆದ ಹಿರಿಯ ಅಧಿಕಾರಿಗಳು, ಶಿಸ್ತಿಗೆ ಹೆಸರಾದ ಪೊಲೀಸ್ ಇಲಾಖೆಯಲ್ಲಿ ಅಶಿಸ್ತು ವರ್ತನೆ ತೋರಿದ ಆರೋಪದ ಮೇರೆಗೆ ನಾಲ್ವರನ್ನೂ ಮೂರು ತಿಂಗಳ ಕಾಲ ಸಸ್ಪೆಂಡ್ ಮಾಡಿದ್ದಾರೆ.
Little did they know that if a moment of dancing in the police station would lead to this type of serious consequences, then the present story would have been completely different. This is likely the thought running through the minds of four police personnel from Nagpur's Gandhibaug area, who have been suspended for three months after a video of them dancing in uniform while on duty went viral.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm