ಬ್ರೇಕಿಂಗ್ ನ್ಯೂಸ್
23-08-24 06:29 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 23: ಎರಡು ದಿನಗಳ ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ಉಕ್ರೇನ್ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆಲಿಂಗಿಸಿಕೊಂಡು ತಮ್ಮ ದೇಶಕ್ಕೆ ಬರಮಾಡಿಕೊಂಡರು.
ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರಿಗೆ ಕೀವ್ನಲ್ಲಿರುವ ಅನಿವಾಸಿ ಭಾರತೀಯ ಸಮುದಾಯದವರು ಸ್ವಾಗತ ಕೋರಿದರು.
ಮೋದಿ ಅವರು ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದು, ರಷ್ಯಾ-ಉಕ್ರೇನ್ ಸಂಘರ್ಷವನ್ನು ಸಂಧಾನದ ಮೂಲಕ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದಾರೆ. ಎರಡು ದೇಶಗಳ ಮಧ್ಯೆ ಶಾಂತಿ ಸ್ಥಾಪನೆಗೆ ಪ್ರಯತ್ನಗಳನ್ನು ನಡೆಸುವ ಕುರಿತು ಮೋದಿ ಭರವಸೆ ನೀಡುವ ನಿರೀಕ್ಷೆಯಿದೆ.
ಪೋಲಂಡಿನಿಂದ ಸುಮಾರು 10 ತಾಸಿನ ರೈಲು ಪ್ರಯಾಣದ ನಂತರ ಪ್ರಧಾನಿ ಮೋದಿ ಅವರು ಉಕ್ರೇನ್ ರಾಜಧಾನಿ ಕೀವ್ ತಲುಪಿದ್ದಾರೆ. ಈ ಮೂಲಕ ಉಕ್ರೇನ್ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎನಿಸಿದ್ದಾರೆ. ಎರಡು ತಿಂಗಳ ಹಿಂದೆ ಮಾಸ್ಕೋಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ರಷ್ಯಾಕ್ಕೆ ಮೋದಿ ಭೇಟಿ ನೀಡಿರುವುದನ್ನು ಝೆಲೆನ್ಸ್ಕಿ ಟೀಕಿಸಿದ್ದರು. ಈ ಬಾರಿ ಉಕ್ರೇನ್ ಭೇಟಿ ನೀಡುವ ಮೊದಲೇ ಸಮಸ್ಯೆಗಳಿಗೆ ಯುದ್ಧ ಪರಿಹಾರ ಅಲ್ಲ ಎಂದು ಹೇಳುವ ಮೂಲಕ ಎರಡು ರಾಷ್ಟ್ರಗಳಿಗೂ ಕಿವಿಮಾತು ಮುಟ್ಟಿಸಿದ್ದಾರೆ.
PM Narendra Modi is in Ukraine for his much-anticipated trip after wrapping up his two-day visit to Poland this morning. He met the Ukrainian PM Volodymyr Zelenskyy, upon whose invite he is visiting the conflict-hit nation-state.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm