ಬ್ರೇಕಿಂಗ್ ನ್ಯೂಸ್
23-08-24 09:29 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿದ ಬಳಿಕದ ಬೆಳವಣಿಗೆ, ಮುಖ್ಯಮಂತ್ರಿ ರಾಜಿನಾಮೆಗೆ ವಿಪಕ್ಷಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಪಕ್ಷದ ಹೈಕಮಾಂಡ್ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ, ಎಲ್ಲ ರೀತಿಯ ಹೋರಾಟ ನಡೆಸುವುದಕ್ಕೂ ಅನುಮತಿ ನೀಡಿದ್ದಾರೆ.
ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯೇ ಅಸಾಂವಿಧಾನಿಕ. ನಾವು ಕೋರ್ಟ್ ಮತ್ತು ಕಾನೂನು ಮೇಲೆ ಗೌರವ ಇಟ್ಟಿದ್ದೇವೆ, ಸಂವಿಧಾನದ ಮೇಲೆ ನಂಬಿಕೆ ಇರಿಸಿದ್ದೇವೆ. ಸರಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ನಾವು ಒಗ್ಗಟ್ಟಿನಿಂದ ಎದುರಿಸುತ್ತೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ರಾಷ್ಟ್ರಪತಿ ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ, ಕಾದು ನೋಡುತ್ತಿದ್ದೇವೆ ಎಂದರು.

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಮೊದಲಾಗಿ ನಮ್ಮ ಪರವಾಗಿ ನಿಂತ ಪಕ್ಷದ ಹೈಕಮಾಂಡ್ ನಾಯಕರಿಗೆ ಅಭಿನಂದನೆ ಹೇಳುತ್ತೇನೆ. ರಾಜ್ಯದಲ್ಲಾದ ಎಲ್ಲ ಬೆಳವಣಿಗೆ ಬಗ್ಗೆಯೂ ಪಕ್ಷದ ನಾಯಕರಿಗೆ ವಿವರಣೆ ನೀಡಿದ್ದೇವೆ. ನಮ್ಮ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾವು ಈ ನೆಲದ ಕಾನೂನು, ಕೋರ್ಟ್ ಬಗ್ಗೆ ನಂಬಿಕೆ ಇರಿಸಿದ್ದೇವೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸುರ್ಜೇವಾಲಾ, ವೇಣುಗೋಪಾಲ್ ಅವರಿಗೆ ಥ್ಯಾಂಕ್ಸ್ ಹೇಳುತ್ತೇನೆ ಎಂದು ಹೇಳಿದರು.
ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಪಕ್ಷದ ನಾಯಕರ ಜೊತೆಗೆ ಸಭೆಯನ್ನು ನಡೆಸಿದ್ದೇವೆ. ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನದ ಬಗ್ಗೆ ಮನದಟ್ಟು ಮಾಡಿದ್ದೇವೆ. ಬಡವರಿಗೋಸ್ಕರ ಐದು ಗ್ಯಾರಂಟಿಗಳನ್ನು ಕೊಡುತ್ತಿದ್ದು ಇಡೀ ದೇಶದ ಗಮನ ಸೆಳೆದಿದೆ. ಇದಕ್ಕಾಗಿ ಸರ್ಕಾರವನ್ನು ಅಸ್ಥಿರಗೊಳಿಸಲು ನೋಡುತ್ತಿದ್ದಾರೆ. ಹೈಕಮಾಂಡ್ ನಾಯಕರು ಒಗ್ಗಟ್ಟಿನಿಂದ ನಿಮ್ಮ ಜೊತೆಗಿದ್ದೇವೆ ಎಂದು ಅಭಯ ನೀಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಜೊತೆಗೆ ಪಕ್ಷ ಇದೆಯೆಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದರಿಂದ ಲೋಕಾಯುಕ್ತ ಅಥವಾ ಇನ್ನಾವುದೇ ತನಿಖಾ ಸಂಸ್ಥೆ ಎಫ್ಐಆರ್ ದಾಖಲು ಮಾಡಿದರೆ, ಹುದ್ದೆ ಬಿಟ್ಟು ಕೊಡಬೇಕಾದೀತು ಎನ್ನುವ ಚರ್ಚೆಯ ನಡುವಲ್ಲೇ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೊತೆಗೆ ದೆಹಲಿಗೆ ತೆರಳಿ ಪಕ್ಷದ ನಾಯಕರ ಸಹಮತವನ್ನು ಪಡೆದಿದ್ದಾರೆ. ಸದ್ಯಕ್ಕೆ ಆಗಸ್ಟ್ 29ರ ವರೆಗೆ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದ್ದರೂ, ಕೋರ್ಟಿನಲ್ಲಿ ಪ್ರಾಸಿಕ್ಯೂಶನ್ ಬಗ್ಗೆ ಅನುಮತಿ ನೀಡಿದರೂ ಮುಖ್ಯಮಂತ್ರಿ ಹುದ್ದೆಗೆ ಯಾವುದೇ ತೊಂದರೆ ಮಾಡಿಕೊಳ್ಳಬೇಕಿಲ್ಲ ಎನ್ನುವ ಸಂದೇಶವನ್ನು ಸಿದ್ದರಾಮಯ್ಯ ಅವರಿಗೆ ದೆಹಲಿ ಹೈಕಮಾಂಡ್ ನೀಡಿರುವಂತಿದೆ.
Karnataka Chief Minister Siddaramaiah and Deputy Chief Minister D K Shivakumar arrived in the national capital on Friday (August 23, 2024) for crucial meetings with top Congress leaders.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am