ಬ್ರೇಕಿಂಗ್ ನ್ಯೂಸ್
25-08-24 10:13 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 25: ಭಾರತದ ತಾರಾ ಕುಸ್ತಿಪಟು ವಿನೇಶ್ ಫೋಗಟ್, ರಾಜಕೀಯಕ್ಕೆ ಸೇರ್ಪಡೆಯಾಗ್ತಾರಾ ಎನ್ನುವ ಕುತೂಹಲದ ಪ್ರಶ್ನೆ ಎದ್ದಿದೆ. ಒಲಿಂಪಿಕ್ ಕೂಟದಿಂದ ಬಂದ ಬೆನ್ನಲ್ಲೇ ಹರ್ಯಾಣದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷ ಕಾಂಗ್ರೆಸ್ ನಾಯಕ ಭೂಪೀಂದರ್ ಸಿಂಗ್ ಹೂಡಾ ಅವರನ್ನು ಭೇಟಿ ಮಾಡಿರುವುದು ರಾಜಕೀಯಕ್ಕೆ ಎಂಟ್ರಿಯಾಗುತ್ತಾರೆ ಎನ್ನುವ ವದಂತಿ ಹಬ್ಬಲು ಕಾರಣವಾಗಿದೆ.
ಕಾಂಗ್ರೆಸ್ ಹಿರಿಯ ನಾಯಕ ಭೂಪೀಂದರ್ ಸಿಂಗ್ ಹೂಡಾ ಅವರನ್ನು ವಿನೇಶ್ ಫೋಗಟ್ ಸೌಹಾರ್ದ ಭೇಟಿಯಾಗಿದ್ದಾರೆ. ಇದರ ಬೆನ್ನಲ್ಲೇ ವಿನೇಶ್ ಫೋಗಟ್ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದು, ಅಕ್ಟೋಬರ್ 01ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಭೂಪೀಂದರ್ ಸಿಂಗ್ ಭೇಟಿಯ ಕುರಿತಂತೆ ವಿನೇಶ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆದರೆ ಹೂಡಾ, ಯಾರೇ ಕಾಂಗ್ರೆಸ್ಗೆ ಬಂದರೂ ನಾವು ಮುಕ್ತವಾಗಿ ಸ್ವಾಗತಿಸುತ್ತೇವೆ ಎಂದು ಹೇಳಿರುವುದು ಕುತೂಹಲ ಮೂಡಿಸಿದೆ.
ಓರ್ವ ಅಥ್ಲೀಟ್ ಆದವರು ಯಾವುದೇ ನಿರ್ದಿಷ್ಟ ಪಕ್ಷ ಅಥವಾ ರಾಜ್ಯಕ್ಕೆ ಸೇರಿದವರಾಗಿರುವುದಿಲ್ಲ. ಒಲಿಂಪಿಕ್ ಸ್ಪರ್ಧಿಸಿದ ಯಾವುದೇ ಅಥ್ಲೀಟ್ ಇಡೀ ದೇಶದ ಪ್ರತಿನಿಧಿಗಳಾಗಿರುತ್ತಾರೆ. ಈಕೆ ಕೂಡಾ ಇಡೀ ದೇಶದ ಪ್ರತಿನಿಧಿ. ಯಾವುದಾದರೂ ಪಕ್ಷವನ್ನು ಸೇರಬೇಕೋ ಅಥವಾ ಬೇಡವೇ ಎನ್ನುವುದು ಅವರ ಆಯ್ಕೆಯಾಗಿರುತ್ತದೆ. ಆದರೆ ಯಾರೇ ಕಾಂಗ್ರೆಸ್ ಪಕ್ಷಕ್ಕೆ ಬಂದರೂ ಅವರನ್ನು ಮುಕ್ತವಾಗಿ ಸ್ವಾಗತಿಸುತ್ತೇವೆ. ಆಕೆ ಏನು ಮಾಡಬೇಕು ಎನ್ನುವ ನಿರ್ಧಾರ ಆಕೆಗೆ ಬಿಟ್ಟಿದ್ದು ಎಂದು ಹರ್ಯಾಣ ವಿಧಾನಸಭೆ ವಿಪಕ್ಷ ನಾಯಕ ಭೂಪೀಂದರ್ ಸಿಂಗ್ ಹೂಡಾ ಹೇಳಿದ್ದಾರೆ.
ಇತ್ತೀಚೆಗಷ್ಟೇ ನಡೆದ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳೆಯರ 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ 29 ವರ್ಷದ ವಿನೇಶ್ ಫೋಗಟ್ ಫೈನಲ್ ಪ್ರವೇಶಿಸಿದ್ದರು. ಒಲಿಂಪಿಕ್ಸ್ನಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎನ್ನುವ ಇತಿಹಾಸ ನಿರ್ಮಿಸಿದ್ದರು. ಆದರೆ ಫೈನಲ್ ಪಂದ್ಯಕ್ಕೂ ಮುನ್ನ 100 ಗ್ರಾಮ್ ತೂಕ ಹೆಚ್ಚಳವಾಗಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿತ್ತು. ಇದೇ ವೇಳೆ, ಈ ಹಿಂದೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಜೊತೆಗಿನ ಗಲಾಟೆಯೇ ಇದಕ್ಕೆಲ್ಲ ಕಾರಣ ಎಂಬಂತೆ ಚರ್ಚೆಯೂ ನಡೆದಿತ್ತು. ಒಲಿಂಪಿಕ್ಸ್ ಕೂಟಕ್ಕೆ ವಿದಾಯ ಹೇಳಿ ಬಂದಿದ್ದ ವಿನೇಶ್ ಪೋಗಟ್ ಪರವಾಗಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು.
Wrestling star Vinesh Phogat fuelled speculations of joining politics in the future after meeting Congress politician and former Chief Minister of Haryana Bhupendra Singh Hooda at his New Delhi residence on Friday.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm