ಬ್ರೇಕಿಂಗ್ ನ್ಯೂಸ್
27-08-24 10:52 am HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಂಗನಾ ರನೌತ್ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರ ಮಾಡಿರುವ ಎಮರ್ಜೆನ್ಸಿ ಎಂಬ ಚಲನಚಿತ್ರ ಸೆಪ್ಟಂಬರ್ 6ರಂದು ಬಿಡುಗಡೆಯಾಗಲಿದೆ. ಇಂದಿರಾ ಗಾಂಧಿ ವೇಷದಲ್ಲಿರುವ ಕಂಗನಾ ಪೋಸ್ಟರ್ ಹೊರಬಂದಿದ್ದು, ರಾಜಕೀಯದಲ್ಲಿ ಸಂಚಲನ ಎಬ್ಬಿಸುವ ಸಾಧ್ಯತೆಯಿದೆ. ಇದರ ನಡುವಲ್ಲೇ ಕಂಗನಾಗೆ ಜೀವ ಬೆದರಿಕೆ ಒಡ್ಡಲಾಗಿದೆ.
ಸಿಖ್ ವ್ಯಕ್ತಿಗಳಿಬ್ಬರು ಚಿತ್ರದಲ್ಲಿ ಸಿಕ್ಖರನ್ನು ವಿಲನ್ ಆಗಿಸಿ ತೋರಿಸಿದಲ್ಲಿ ಪರಿಣಾಮ ನೆಟ್ಟಗಿರಲ್ಲ ಎಂದು ಓಪನ್ ಆವಾಜ್ ಹಾಕಿದ್ದಾರೆ. ಇಬ್ಬರು ವ್ಯಕ್ತಿಗಳು ಕುಳಿತು ಮಾತನಾಡುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಕ್ಖರನ್ನು ವಿಲನ್ ಆಗಿ ತೋರಿಸಿದರೆ, ಶಿರಚ್ಛದಕ್ಕೂ ಹೇಸಲ್ಲ. ಇಡೀ ದೇಶದಲ್ಲಿ ಹಿಂದು, ಸಿಖ್, ಕ್ರಿಸ್ತಿಯನ್, ಮುಸ್ಲಿಮರು ಎನ್ನುವ ಭೇದ ಇಲ್ಲದೆ ಚಪ್ಪಲಿಯಲ್ಲಿ ಕಪಾಳ ಮೋಕ್ಷ ಮಾಡಲಿದ್ದಾರೆ ಎಂದು ಬೆದರಿಕೆ ಹಾಕಿದ್ದಾರೆ.


ಇಬ್ಬರು ವ್ಯಕ್ತಿಗಳ ಬೆದರಿಕೆ ವಿಡಿಯೋವನ್ನು ಕಂಗನಾ ಅವರು ಹಿಮಾಚಲ ಪ್ರದೇಶದ ಡಿಜಿಪಿಗೆ ಟ್ಯಾಗ್ ಮಾಡಿದ್ದಾರೆ. 1975ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಚಿತ್ರಣದ ಕತೆಯನ್ನಾಧರಿಸಿ ಎಮರ್ಜೆನ್ಸಿ ಚಿತ್ರವನ್ನು ಮಾಡಲಾಗಿದೆ. 1984ರಲ್ಲಿ ಇಂದಿರಾ ಗಾಂಧಿಯನ್ನು ತುರ್ತು ಸ್ಥಿತಿ ಹೇರಿದ ಕಾರಣಕ್ಕಾಗಿಯೇ ಆಕೆಯ ಸಿಖ್ ಅಂಗರಕ್ಷಕರೇ ಗುಂಡು ಹಾರಿಸಿ ಕೊಂದಿದ್ದರು. ಆನಂತರ, ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ಸಾವಿರಾರು ಸಿಕ್ಖರ ಮಾರಣ ಹೋಮ ನಡೆದಿತ್ತು. ಇಂದಿರಾ ಅವರನ್ನು ಸಿಕ್ಖರು ಕೊಂದಿದ್ದಾರೆಂಬ ಕಾರಣಕ್ಕೆ ಕಾಂಗ್ರೆಸ್ ಅವರನ್ನು ದೂರವೇ ಇಟ್ಟಿದೆ. ಇದೀಹ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಂಗನಾ ರನೌತ್, ತಾನೇ ಇಂದಿರಾ ಗಾಂಧಿ ಪಾತ್ರ ಮಾಡಿದ್ದಲ್ಲದೆ, ಎಮರ್ಜೆನ್ಸಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
BJP MP from Mandi and actor Kangana Ranaut has received beheading threats from extremist Sikh groups after the release of her upcoming movie trailer. She is playing the role of former PM Indira Gandhi in 'Emergency' which is to be released on September 6. After the threatening video went viral, the actor sought police help.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm