ಬ್ರೇಕಿಂಗ್ ನ್ಯೂಸ್
28-08-24 01:12 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ಆನ್ಲೈನ್ ವಂಚಕನೊಬ್ಬ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಂದೇಶ ಕಳಿಸಿ ಹಣ ಕೇಳಿ ಮೋಸಕ್ಕೆ ಯತ್ನಿಸಿದ ಘಟನೆ ನಡೆದಿದೆ.
ಕೈಲಾಶ್ ಮೇಘವಾಲ್ ಎಂಬವರಿಗೆ ವಂಚಕನೊಬ್ಬ ಸಂದೇಶ ಕಳಿಸಿದ್ದಾನೆ. ದೆಹಲಿಯ ಕನ್ನಾಟ್ ಎಂಬಲ್ಲಿ ಟ್ರಾಫಿಕ್ ನಲ್ಲಿ ಸಿಲುಕಿದ್ದು, ಕ್ಯಾಬ್ ನಲ್ಲಿ ತೆರಳಲು ಅರ್ಜೆಂಟ್ 500 ರೂ. ಕಳಿಸಿ. ನ್ಯಾಯಾಲಯಕ್ಕೆ ಹೋದ ಬಳಿಕ ಮರಳಿ ಹಾಕುವುದಾಗಿ ಹೇಳಿದ್ದಾನೆ.
ಸಂದೇಶ ಸ್ವೀಕರಿಸಿರುವ ಕೈಲಾಶ್ ಮೇಘವಾಲ್ ಅವರು ಇದನ್ನು ಎಕ್ಸ್ ಖಾತೆಯಲ್ಲಿ ಸ್ಕ್ರೀನ್ಶಾಟ್ ಪೋಸ್ಟ್ ಮಾಡಿದ್ದಾರೆ. ಅವರ ಪೋಸ್ಟ್ ಅನ್ನು ಎರಡು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದು ಕಮೆಂಟ್ ಮಾಡಿದ್ದಾರೆ. ವಂಚಕ ತೋರಿದ ಅತಿಯಾದ ಆತ್ಮವಿಶ್ವಾಸಕ್ಕಾಗಿ ಐನೂರು ಬೇಡ, 1,000 ರೂ. ಕಳುಹಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಕಾಮೆಂಟ್ನಲ್ಲಿ ಅಪರಿಚಿತರ ಜೊತೆಗಿನ ಆನ್ಲೈನ್ ವ್ಯವಹಾರ ಅಪಾಯಕ್ಕೀಡು ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.
ಮತ್ತೊಬ್ಬರು, ಮನವಿಯನ್ನು ಮೂರು ವಾರಗಳಿಗೆ ಮುಂದೂಡಿ ಮತ್ತು ತೀರ್ಪು ನೀಡಲು ತ್ರಿಸದಸ್ಯ ಪೀಠವನ್ನು ರಚಿಸಿ ಎಂದು ತಮಾಷೆ ಮಾಡಿದ್ದಾರೆ. ಇದೇ ವೇಳೆ, ಸುಪ್ರೀಂ ಕೋರ್ಟ್ ಸಿಬಂದಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೆಸರಿನಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟ ವಂಚಕನ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ಸೈಬರ್ ಕ್ರೈಂ ಪ್ರಕರಣ ದಾಖಲಿಸಿದೆ.
The Supreme Court of India approached Delhi Police after a social media scammer impersonated the Chief Justice of India DY Chandrachud and sought money for a cab fare. Delhi Police registered the cyber-crime complaint on Tuesday.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm