ಬ್ರೇಕಿಂಗ್ ನ್ಯೂಸ್
05-09-24 07:53 pm HK News Desk ದೇಶ - ವಿದೇಶ
ತಮಿಳುನಾಡು, ಸೆ.05: ಹೇಮಾ ಸಮಿತಿ ವರದಿಯ ಬಳಿಕ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಬಗ್ಗೆ ಸುದ್ದಿಯಾಗುತ್ತಿರುವ ನಡುವೆ ಈಗ ತಮಿಳು ಚಿತ್ರರಂಗದ ನಿರ್ದೇಶಕರೊಬ್ಬರ ಮೇಲೆ ತಮಿಳು, ಮಲಯಾಳಂ ಸಿನಿಮಾದ ನಟಿ ಸೌಮ್ಯ ಗಂಭೀರ ಆರೋಪ ಮಾಡಿದ್ದಾರೆ. ಜನನಾಂಗಕ್ಕೆ ‘ರಾಡ್’ ತುರುಕಿಸಿ ನಿರ್ದೇಶಕರೊಬ್ಬರು ಖುಷಿಪಟ್ಟಿದ್ದರು ಎಂದು ತಮಿಳು ನಟಿ ಸೌಮ್ಯ ಹೇಳಿದ್ದಾರೆ.
ತಮಿಳು ನಿರ್ದೇಶಕರೊಬ್ಬರು ತನ್ನ ಮೇಲೆ ಮಾಡಿರುವ ಭೀಕರವಾದ ಮಾನಸಿಕ, ದೈಹಿಕ ಮತ್ತು ಲೈಂಗಿಕ ದೌರ್ಜನ್ಯದ ಬಗ್ಗೆ ಜನಪ್ರಿಯ ನಟಿ ಸೌಮ್ಯಾ ಎನ್ಡಿಟಿವಿಯ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಮಗಳು ಎಂದು ಹೇಳಿಕೊಂಡೇ ತನ್ನ ಮೇಲೆ ಒಂದು ವರ್ಷ ನಿರಂತರವಾಗಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿದ್ದಾರೆ.
ತನ್ನನ್ನು ಲೈಂಗಿಕ ಗುಲಾಮರಂತೆ ಇರಿಸಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ನಟಿಯ ಜನನಾಂಗಕ್ಕೆ ‘ರಾಡ್’ ತುರಿಕಿಸಿ ನಿರ್ದೇಶಕ ಖುಷಿ ಪಟ್ಟಿರುವುದಾಗಿಯೂ ಹೇಳಿದ್ದಾರೆ. ಆದರೆ ಸದ್ಯಕ್ಕೆ ತಾನು ನಿರ್ದೇಶಕ ಹೆಸರು ಬಹಿರಂಗಪಡಿಸುವುದಿಲ್ಲ ಎಂದಿದ್ದಾರೆ.
ನಾನು ಆತನ ಹೆಸರನ್ನು ಬಹಿರಂಗವಾಗಿ ಹೇಳುವುದಿಲ್ಲ. ನಾನು ಸದ್ಯ ಹಲವು ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ನಡೆಸುತ್ತಿರುವ ಕೇರಳ ಸರ್ಕಾರ ರಚಿಸಿದ ವಿಶೇಷ ತನಿಖಾ ಸಂಸ್ಥೆಗೆ ಆ ನಿರ್ದೇಶಕನ ಹೆಸರನ್ನು ತಿಳಿಸುತ್ತೇನೆ” ಎಂದು ನಟಿ ಸೌಮ್ಯ ತಿಳಿಸಿದ್ದಾರೆ.
“ನಾನು 18 ವರ್ಷದ ಹುಡುಗಿಯಾಗಿದ್ದೆ. ನನ್ನ ಪೋಷಕರಿಗೆ ಚಿತ್ರರಂಗದ ಬಗ್ಗೆ ಯಾವ ಮಾಹಿತಿಯೂ ಇರಲಿಲ್ಲ. ಆರಂಭದಲ್ಲಿ ನನ್ನ ಬಳಿ ಆ ವ್ಯಕ್ತಿ ಮಾತನಾಡುತ್ತಿರಲಿಲ್ಲ. ಆತನ ಪತ್ನಿ ನಿರ್ದೇಶಕಿಯಾಗಿದ್ದರು. ಆದರೆ ನಿಜವಾಗಿ ಆತನೇ ಎಲ್ಲಾ ಸಿನಿಮಾದ ನಿರ್ದೇಶನ ಮಾಡುತ್ತಿದ್ದ” ಎಂದು ಹೇಳಿದ್ದಾರೆ.
ಒಂದು ವರ್ಷ ನಡೆದ ಈ ದೌರ್ಜನ್ಯದಿಂದಾಗಿ ನಾನು ಸಂಪೂರ್ಣವಾಗಿ ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದೆ. ಈ ಆಘಾತದಿಂದ ಹೊರಗೆ ಬರಲು ನನಗೆ 30 ವರ್ಷಗಳು ಬೇಕಾಯಿತು ಎಂದಿದ್ದಾರೆ.
The wave of sexual assault and rape allegations that have shaken the Malayalam film industry has now reverberated in Tamil Nadu. South Indian actor Sowmya has accused a Tamil director of severe mental, physical, and sexual abuse, including the horrific act of inserting a rod into her genitals for 'entertainment.'
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am