ಬ್ರೇಕಿಂಗ್ ನ್ಯೂಸ್
07-09-24 03:02 pm HK News Desk ದೇಶ - ವಿದೇಶ
ಇಂದೋರ್, ಸೆ.7: ಪತಿಯ ನಿರಂತರ ಕಿರುಕುಳದಿಂದ ನೊಂದ ಮುಸ್ಲಿಂ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಘಟನೆ ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ತನ್ನ ಪುತ್ರರಿಗೆ ಲವ-ಕುಶ ಎಂದು ಹೆಸರಿಟ್ಟಿದ್ದು ತನ್ನ ಹೆಸರನ್ನು ಮೆಹನಾಜ್ ಬದಲಿಗೆ ಮೀನಾಕ್ಷಿ ಎಂದು ಬದಲಿಸಿದ್ದಾರೆ.
ಧಮ್ನಾರ್ ಗ್ರಾಮದ ನಿವಾಸಿ ಮೆಹನಾಜ್ (30) ಅವರು ತಮ್ಮ 12 ಮತ್ತು 11 ವರ್ಷದ ಇಬ್ಬರು ಪುತ್ರರೊಂದಿಗೆ ಮಂಡಸೌರ್ನ ಗಾಯತ್ರಿ ದೇವಸ್ಥಾನದಲ್ಲಿ ಮತಾಂತರ ಆಗಿದ್ದು ಶುದ್ಧೀಕರಣದ ನಂತರ ಮನೆಗೆ ಮರಳಿದ್ದಾರೆ. ಮನೆಯವರು ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಮೀನಾಕ್ಷಿ ಹೇಳಿದ್ದಾರೆ. ಸನಾತನ ಧರ್ಮದಲ್ಲಿ ಮಹಿಳೆಯರಿಗೆ ಗೌರವವಿದೆ ಎಂಬ ದೃಷ್ಟಿಯಿಂದ ಮತಾಂತರ ಆಗಿದ್ದೇನೆ ಎಂದು ಹೇಳಿದರು. ತಾನೇ ಹಿಂದೂ ಸಂಘಟನೆಯ ಜನರನ್ನು ಸಂಪರ್ಕಿಸಿ ಸನಾತನ ಧರ್ಮವನ್ನು ಅಳವಡಿಸಿಕೊಂಡಿದ್ದಾರೆ.
ಮಾಹಿತಿ ಪ್ರಕಾರ, ಮೆಹನಾಜ್ 15 ವರ್ಷಗಳ ಹಿಂದೆ ಧಮ್ನಾರ್ನ ಇರ್ಫಾನ್ ಖಾನ್ ಎಂಬವರನ್ನು ಮದುವೆಯಾಗಿದ್ದರು. ಮೆಹನಾಜ್ ತಂದೆ ಅಬ್ದುಲ್ ರಶೀದ್ ರೈತ. ಆರಂಭದಲ್ಲಿ ಎಲ್ಲವೂ ಸರಿಯಾಗಿತ್ತು. ಆದರೆ ನಂತರ ಪತಿ ಮತ್ತು ಅತ್ತೆ ಸಣ್ಣಪುಟ್ಟ ವಿಷಯಗಳಿಗೂ ಜಗಳ ಆರಂಭಿಸಿದರು. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದು ಸಣ್ಣಪುಟ್ಟ ವಿಚಾರಕ್ಕೂ ಕೈ ಎತ್ತುತ್ತಿದ್ದರು. ಈ ಬಗ್ಗೆ ನನ್ನ ತಂದೆಗೆ ತಿಳಿಸಿದಾಗ, ಅವರು ಇದು ನಿಮ್ಮ ಕುಟುಂಬದ ವಿಷಯ ಎಂದು ಹೇಳಿ ಸಹಾಯಕ್ಕೆ ಬರಲಿಲ್ಲ.
ದೇವಸ್ಥಾನದಲ್ಲಿ ಒಂದೂವರೆ ಗಂಟೆಗಳ ಕಾಲ ಮಂತ್ರಗಳನ್ನು ಪಠಿಸಿದ ನಂತರ ತಾಯಿ ಮಕ್ಕಳು ಸನಾತನ ಧರ್ಮಕ್ಕೆ ಮತಾಂತರಗೊಂಡರು. ಮಹಿಳೆ ಮತ್ತು ಇಬ್ಬರು ಪುತ್ರರಿಗೆ ವೇದ ಮಂತ್ರಗಳೊಂದಿಗೆ ಹಾಲು, ಮೊಸರು, ಜೇನುತುಪ್ಪ, ಗಂಗಾಜಲ, ಗೋಮೂತ್ರ ಮತ್ತು ಗೋಮಯದಿಂದ ಸ್ನಾನ ಮಾಡಲಾಯಿತು. ಇದೇ ವೇಳೆ, ಹಿಂದೂ ಯುವವಾಹಿನಿಯ ರಾಜ್ಯ ಉಸ್ತುವಾರಿ ಚೈತನ್ಯ ಸಿಂಗ್ ರಜಪೂತ್ ಮಾತನಾಡಿ, 2-3 ತಿಂಗಳ ಹಿಂದೆ ಮೆಹನಾಜ್ ನಮ್ಮನ್ನು ಸಂಪರ್ಕಿಸಿದ್ದರು. ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಮೆಹ್ನಾಜ್ ಮತ್ತು ಅವರ ಇಬ್ಬರು ಪುತ್ರರನ್ನು ಘರ್ ವಾಪ್ಸಿ ಮಾಡಿಸಲಾಯಿತು. ಇದುವರೆಗೆ 40 ಮಹಿಳೆಯರು, 5 ಪುರುಷರು ಮತ್ತು ಇಬ್ಬರು ಮಕ್ಕಳನ್ನು ಕಾನೂನು ಪ್ರಕಾರವೇ ಘರ್ ವಾಪ್ಸಿ ಮಾಡಿಸಿದ್ದೇವೆ ಎಂದು ಹೇಳಿದ್ದಾರೆ.
Indore Muslim women converts to Hindu with her two children after torture by husband.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am