ಬ್ರೇಕಿಂಗ್ ನ್ಯೂಸ್
08-09-24 02:45 pm HK News Desk ದೇಶ - ವಿದೇಶ
ಕೊಲ್ಕತ್ತಾ, ಸೆ.8: ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ನಿರ್ವಹಿಸಿದ ರೀತಿಯನ್ನು ಖಂಡಿಸಿ ಟಿಎಂಸಿ ರಾಜ್ಯಸಭಾ ಸದಸ್ಯ ಜವಾಹರ್ ಸಿರ್ಕಾರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಮಾಜಿ ಅಧಿಕಾರಿಯಾಗಿರುವ ಸಿರ್ಕಾರ್, 2021ರಲ್ಲಿ ಟಿಎಂಸಿ ಸೇರಿ ರಾಜ್ಯಭೆ ಸದಸ್ಯರಾಗಿದ್ದರು. ಅದಕ್ಕೂ ಹಿಂದೆ 2009ರಿಂದ 2012ರ ವರೆಗೆ ಕೇಂದ್ರ ಸರಕಾರದ ಸಾಂಸ್ಕೃತಿಕ ಕಾರ್ಯದರ್ಶಿಯಾಗಿದ್ದ ಸಿರ್ಕಾರ್, 2016ರಲ್ಲಿ ಪ್ರಸಾರ ಭಾರತಿ ಸಿಇಓ ಆಗಿದ್ದರು. ಸಿಇಓ ಸ್ಥಾನದ ಅವಧಿ ಮುಗಿಯಲು ನಾಲ್ಕು ತಿಂಗಳು ಇರುವಾಗಲೇ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಬಗ್ಗೆ ಮುನಿಸಿಕೊಂಡು ರಾಜಿನಾಮೆ ನೀಡಿದ್ದರು. ಇದೀಗ ಟಿಎಂಸಿ ಸದಸ್ಯತ್ವಕ್ಕೂ ರಾಜಿನಾಮೆ ನೀಡಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಸಿರ್ಕಾರ್ ಪತ್ರ ಬರೆದಿದ್ದಾರೆ.
ಇದೇ ವೇಳೆ, ಕೊಲ್ಕತ್ತಾ ಆರ್.ಕಾರ್ ವೈದ್ಯಕೀಯ ಆಸ್ಪತ್ರೆ ಎದುರು ಹಗಲು – ರಾತ್ರಿ ಪ್ರತಿಭಟನೆ ಮುಂದುವರಿದಿದ್ದು, ಕಲಾವಿದರು, ನಟ-ನಟಿಯರು, ಸಂಗೀತಕಾರರು, ಪೈಂಟರ್ ಬೇರೆ ಬೇರೆ ವೃತ್ತಿಯವರು ಕೂಡ ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಎರಡು ದಿನಗಳ ಹಿಂದೆ ಆರ್.ಕಾರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಸಂದೀಪ್ ಘೋಷ್ ನನ್ನು ಸಿಬಿಐ ಬಂಧಿಸಿದ್ದು, ಪ್ರಕರಣ ಸಂಬಂಧಿಸಿ ಹಲವರನ್ನು ವಶಕ್ಕೆ ಪಡೆದಿದೆ. ಆದರೂ ಕೊಲ್ಕತ್ತಾದಲ್ಲಿ ರಾತ್ರಿ ಹಗಲು ಪ್ರತಿಭಟನೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಪ್ರತಿಭಟನೆಯ ಕಾವು ಹೆಚ್ಚುತ್ತಿರುವುದು ಪಶ್ಚಿಮ ಬಂಗಾಳ ಸರಕಾರಕ್ಕೆ ಸವಾಲಾಗಿದೆ. ಕೊಲ್ಕತ್ತಾ ಘಟನೆ ಹಿನ್ನೆಲೆಯಲ್ಲಿ ಟಿಎಂಸಿ ಸರಕಾರ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಯನ್ನೂ ಅಧಿವೇಶನದಲ್ಲಿ ಮಂಡಿಸಿದ್ದು ದೇಶದ ಗಮನ ಸೆಳೆದಿದೆ.
ಆಗಸ್ಟ್ 9ರಂದು ವೈದ್ಯಕೀಯ ಎಂಡಿ ವಿದ್ಯಾರ್ಥಿನಿಯನ್ನು ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ಕ್ರೂರವಾಗಿ ಅತ್ಯಾಚಾರಗೈದು ಕೊಲೆ ಮಾಡಲಾಗಿತ್ತು. ಕೃತ್ಯದ ಹಿನ್ನೆಲೆಯಲ್ಲಿ ದೇಶಾದ್ಯಂತ ವೈದ್ಯರ ಆಕ್ರೋಶ ವ್ಯಕ್ತವಾಗಿತ್ತು.
Trinamool Congress Rajya Sabha MP Jawhar Sircar on Sunday (September 8, 2024) wrote to Trinamool Congress chairperson and West Bengal CM Mamata Banerjee announcing his decision to resign as MP from the Upper House over the rape and murder of a post-graduate trainee doctor at R.G. Kar Medical College and Hospital and related corruption at the hospital.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm