ಬ್ರೇಕಿಂಗ್ ನ್ಯೂಸ್
12-09-24 07:40 pm HK News Desk ದೇಶ - ವಿದೇಶ
ನವದೆಹಲಿ, ಸೆ.12: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮನೆಯಲ್ಲಿ ನಡೆದ ಗಣೇಶನ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ ನಾಯಕರು ಇದು ದೇಶಕ್ಕೆ ಬೇರೆ ರೀತಿಯ ಸಂದೇಶ ಕೊಟ್ಟಂತಾಗಿದೆ ಎಂದು ಟೀಕಿಸಿದ್ದಾರೆ.
ಬುಧವಾರ ಡಿವೈ ಚಂದ್ರಚೂಡ್ ಅವರ ಮನೆಯಲ್ಲಿ ಗಣೇಶನ ಪೂಜೆಯಲ್ಲಿ ಪಾಲ್ಗೊಂಡ ಬಗ್ಗೆ ಪ್ರಧಾನಿ ಮೋದಿ ಅವರೇ ತಮ್ಮ ಟ್ವಿಟರ್ ಪೇಜ್ ನಲ್ಲಿ ಫೋಟೋ ಷೇರ್ ಮಾಡಿಕೊಂಡಿದ್ದರು. ಮೋದಿಯವರನ್ನು ಮುಖ್ಯ ನ್ಯಾಯಾಧೀಶರು ಮತ್ತು ಅವರ ಪತ್ನಿ ಕಲ್ಪನಾದಾಸ್ ತಮ್ಮ ಮನೆಗೆ ಸ್ವಾಗತಿಸಿದ್ದ ಫೋಟೋಗಳಿದ್ದವು. ಗಣೇಶನ ವಿಗ್ರಹಕ್ಕೆ ಮೋದಿ ಕೈಮುಗಿಯುವ ಫೋಟೋಗಳೂ ಇದ್ದವು. ಈ ಫೋಟೋ ಬಗ್ಗೆ ವಿರೋಧ ಕೇಳಿಬರುತ್ತಿದ್ದಂತೆ ವಿಪಕ್ಷ ನಾಯಕರು ಟೀಕಿಸಿದ್ದಾರೆ.
ರಾಜ್ಯಸಭೆ ಸದಸ್ಯ, ಉದ್ಧವ್ ಠಾಕ್ರೆ ಬಣದ ಶಿವಸೇನೆ ಮುಖಂಡ ಸಂಜಯ ರಾವುತ್ ಟೀಕಿಸಿದ್ದು, ಈ ರೀತಿಯ ಮೀಟಿಂಗ್ಸ್ ನಮಗೆ ಶಂಕೆಗೆ ಆಸ್ಪದ ನೀಡುತ್ತಿದೆ. ಮುಖ್ಯ ನ್ಯಾಯಾಧೀಶರು ತಮ್ಮನ್ನು ತಾವು ಈ ರೀತಿಯ ನಡೆಗಳಿಂದ ಒಳಸಂಚು ಮಾಡಿಕೊಂಡಿದ್ದಾರೆಯೇ ಎನ್ನುವ ಆರೋಪ ಬರುವಂತೆ ಮಾಡಿದ್ದಾರೆ. ಗಣಪತಿ ಹಬ್ಬವೇ ಆಗಿದ್ದರೂ, ಪ್ರಧಾನಿ ಮೋದಿಯವರು ಈವರೆಗೆ ಎಷ್ಟು ಮಂದಿಯ ಮನೆಗಳಿಗೆ ಹೋಗಿದ್ದಾರೆ. ಈ ಕುರಿತು ನನಗೇನೂ ಮಾಹಿತಿಯಿಲ್ಲ. ದೆಹಲಿಯಲ್ಲಿ ಗಣೇಶನ ಹಬ್ಬ ಹಲವು ಕಡೆಗಳಲ್ಲಿ ನಡೆಯುತ್ತದಾದರೂ, ಪ್ರಧಾನಿ ಮುಖ್ಯ ನ್ಯಾಯಾಧೀಶರ ಮನೆಗೆ ಮಾತ್ರ ತೆರಳಿದ್ದಾರೆ. ದೇವರ ಪೂಜೆ ನೆಪದಲ್ಲಿ ನ್ಯಾಯಾಂಗದ ಮುಖ್ಯಸ್ಥರು ರಾಜಕಾರಣಿಗಳನ್ನು ಭೇಟಿ ಮಾಡುವುದು ಜನರಲ್ಲಿ ಶಂಕೆ ಮೂಡಿಸುತ್ತದೆ ಎಂದು ಹೇಳಿದ್ದಾರೆ.
ಇದೇ ರೀತಿ ಆರ್ ಜೆಡಿ ಸಂಸದ ಮನೋಜ್ ಝಾ, ಶಿವಸೇನೆ ನಾಯಕಿ ಪ್ರಿಯಾಂಕ ಚತುರ್ವೇದಿ ಕೂಡ ಪ್ರಶ್ನೆ ಮಾಡಿದ್ದಾರೆ. ಶಿವಸೇನೆಯ ಸಂಸದರನ್ನು ಮಹಾರಾಷ್ಟ್ರ ಸ್ಪೀಕರ್ ಅನರ್ಹಗೊಳಿಸಿದ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ಮತ್ತೆ ಮತ್ತೆ ದಿನಾಂಕ ಮುಂದೂಡುತ್ತಾರೆ. ಅರವಿಂದ ಕೇಜ್ರಿವಾಲ್ ಪ್ರಕರಣದಲ್ಲಿಯೂ ಮತ್ತೆ ಮತ್ತೆ ದಿನಾಂಕ ನೀಡುತ್ತಾರೆ. ವಿಪಕ್ಷಗಳ ಪ್ರಕರಣಗಳಲ್ಲಿ ಈ ರೀತಿಯ ವರ್ತನೆ ತೋರುವುದು ಮತ್ತು ಸಿಜೆಐ ಈಗ ಪ್ರಧಾನಿ ಜೊತೆಗೆ ಗುರುತಿಸುವುದು ಏನನ್ನು ಸೂಚಿಸುತ್ತದೆ ಎಂದು ಸಂಜಯ ರಾವುತ್ ಟ್ವಿಟರ್ ನಲ್ಲಿ ಪ್ರಶ್ನೆ ಮಾಡಿದ್ದಾರೆ.
A massive political row has erupted over a video of Prime Minister Narendra Modi's visit to Chief Justice of India DY Chandrachud's home for Ganesh Puja.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm