ಬ್ರೇಕಿಂಗ್ ನ್ಯೂಸ್
13-09-24 12:33 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ 13: ವಯನಾಡಿನಲ್ಲಿ ಭೂಕುಸಿತದಿಂದ ಇಡೀ ಕುಟುಂಬವನ್ನು ಕಳೆದುಕೊಂಡು ನೋವಿನಲ್ಲಿದ್ದ ಸಂತ್ರಸ್ತೆ ಶೃತಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶೃತಿ ಭಾವಿ ಪತಿ ಜೆನ್ಸನ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಕೋಝಿಕ್ಕೋಡ್-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯ ವೆಲ್ಲರಂಕುನ್ನು ಬಳಿ ಬಸ್ಗೆ ಓಮ್ನಿ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಅಂಬ್ಲವಾಯಲ್ ಮೂಲದ ಜೆನ್ಸನ್ ತೀವ್ರವಾಗಿ ಗಾಯಗೊಂಡಿದ್ದರು.
ಮಂಗಳವಾರ ಮಧ್ಯಾಹ್ನ ಸುಮಾರು 3:30ಕ್ಕೆ ಅಪಘಾತವಾಗಿ ಜೆನ್ಸನ್ ಗಂಭೀರ ಗಾಯಗೊಂಡಿದ್ದರು. ಮೆಪ್ಪಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ರಕ್ತಸ್ರಾವ ತಡೆಯಲಾಗದೆ ದಾರುಣವಾಗಿ ಇಂದು ಸಾವನ್ನಪ್ಪಿದ್ದಾರೆ. ವ್ಯಾನ್ನಲ್ಲಿದ್ದವರಲ್ಲಿ ಶೃತಿ ಕಾಲಿಗೆ ಮಾತ್ರ ಸಣ್ಣಪುಟ್ಟ ಗಾಯವಾಗಿತ್ತು.
ಕೋಝಿಕ್ಕೋಡ್ನಿಂದ ಸುಲ್ತಾನ್ ಬತ್ತೇರಿಗೆ ತೆರಳುತ್ತಿದ್ದ ‘ಬಟರ್ಫ್ಲೈ’ ಹೆಸರಿನ ಬಸ್ಗೆ ವ್ಯಾನ್ ಡಿಕ್ಕಿ ಹೊಡೆದು ಅಪಘಾತವಾಗಿತ್ತು. ಕಲ್ಪೆಟ್ಟಾದಿಂದ ಬಂದ ಅಗ್ನಿಶಾಮಕ ರಕ್ಷಣಾ ತಂಡಗಳು ಸ್ಥಳೀಯ ನಿವಾಸಿಗಳ ನೆರವಿನಿಂದ ವಾಹನದೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದರು.
ಅಪಘಾತದಲ್ಲಿ ಶೃತಿ ಅವರ ಸೋದರ ಸಂಬಂಧಿ ಲಾವಣ್ಯ ಕೂಡ ಗಾಯಗೊಂಡಿದ್ದಾರೆ. ಈ ಹಿಂದೆ ಇದೇ ಭೂಕುಸಿತದಲ್ಲಿ ಲಾವಣ್ಯ ತನ್ನ ತಂದೆ-ತಾಯಿ ಮತ್ತು ಸಹೋದರನನ್ನು ಕಳೆದುಕೊಂಡಿದ್ದರು. ಈಕೆ ಶೃತಿ ಅವರ ತಂದೆ ಶಿವಣ್ಣರ ಸಹೋದರ ಸಿದ್ದರಾಜು ಮತ್ತು ಅವರ ಪತ್ನಿ ದಿವ್ಯಾ ದಂಪತಿ ಮಗಳು.
As 24-year-old Shruti was still grappling with the loss of her entire family in the catastrophic landslides that hit Kerala's Wayanad district in July, she was dealt with another devastating blow on Wednesday when her fiancé, Jensen, died from injuries sustained in a car accident.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am