ಬ್ರೇಕಿಂಗ್ ನ್ಯೂಸ್
17-09-24 07:08 pm HK News Desk ದೇಶ - ವಿದೇಶ
ನವದೆಹಲಿ, ಸೆ.17: ದೆಹಲಿಯ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಆಮ್ ಆದ್ಮಿ ಪಾರ್ಟಿಯ (ಆಪ್) ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಅವರನ್ನು ಶಾಸಕಾಂಗ ಪಕ್ಷದ ನೂತನ ನಾಯಕಿಯನ್ನಾಗಿ ಆರಿಸಲಾಗಿದೆ. ಹಾಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು ಅದರ ಬೆನ್ನಲ್ಲೇ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಆಮ್ ಆದ್ಮಿ ಪಾರ್ಟಿ ಸೇರಿದ ಹತ್ತೇ ವರ್ಷದಲ್ಲಿ ಅತಿಶಿ ಮುಖ್ಯಮಂತ್ರಿ ಆಗಿದ್ದಾರೆ. 2012ರಲ್ಲಿ ಆಮ್ ಆದ್ಮಿ ಪಾರ್ಟಿ ಆರಂಭವಾಗಿತ್ತು. ಮರು ವರ್ಷವೇ ಅತಿಶಿ ಅವರು ಪಾರ್ಟಿ ಸೇರಿದ್ದರು. ಒಂದೇ ವರ್ಷದಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಆಮ್ ಆದ್ಮಿ ಪಾರ್ಟಿ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೇರಿತ್ತು.
1981ರ ಜೂನ್ 8ರಂದು ದೆಹಲಿಯ ಪಂಜಾಬಿ ಮೂಲದ ಕುಟುಂಬದಲ್ಲಿ ಜನಿಸಿದ್ದ ಅತಿಶಿ ಮರ್ಲೆನಾ ಸಿಂಗ್ ದೆಹಲಿ ವಿವಿಯಿಂದ ಬಿಎ ಪದವಿ ಪಡೆದಿದ್ದಾರೆ. ಪ್ರತಿಷ್ಠಿತ ಆಕ್ಸ್ ಫರ್ಡ್ ವಿವಿಯಲ್ಲಿ ಎಂಎ ವ್ಯಾಸಂಗ ಮಾಡಿದ್ದಾರೆ. ಪತಿಯ ಹೆಸರು ಪ್ರವೀಣ್ ಸಿಂಗ್ ಎಂದಾಗಿದ್ದು ಇದರಿಂದಲೇ ಅತಿಶಿ ಜೊತೆಗೆ ಸಿಂಗ್ ಎಂಬ ಹೆಸರು ಬಂದಿತ್ತು. ಆದರೆ, ಜನರು ತಮ್ಮನ್ನು ಅತಿಶಿ ಹೆಸರಿನಿಂದಲೇ ಗುರುತಿಸಬೇಕು ಎಂದು ಬಯಸಿ ಸಾರ್ವಜನಿಕ ಜೀವನಕ್ಕೆ ಬಂದ ಬಳಿಕ ಮರ್ಲೆನಾ ಹಾಗೂ ಸಿಂಗ್ ಎಂಬ ಪದಗಳನ್ನು ಕೈಬಿಟ್ಟಿದ್ದರು. ಸಚಿವ ಸಂಪುಟ, ಸರ್ಕಾರಿ ಕಡತಗಳಲ್ಲಿ ಅತಿಶಿ ಎಂದಷ್ಟೇ ಬಳಸುವಂತೆ ಸೂಚಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದರ್ ಜೈನ್ ಸಚಿವ ಸ್ಥಾನ ತೆರವಾಗಿದ್ದರಿಂದ ಅತಿಶಿ ಅವರನ್ನು ಕೇಜ್ರಿವಾಲ್ ತನ್ನ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಂಸ್ಕೃತಿ, ಪ್ರವಾಸ ಹಾಗೂ ಲೋಕೋಪಯೋಗಿ ಇಲಾಖೆಗಳನ್ನು ಅವರಿಗೆ ವಹಿಸಲಾಗಿತ್ತು. ಸಚಿವ ಖಾತೆ ನಿರ್ವಹಿಸಿದ ಅನುಭವ ಇಲ್ಲದಿದ್ದರೂ ಎಲ್ಲ ಇಲಾಖೆಗಳನ್ನು ಏಕಕಾಲದಲ್ಲಿ ಮುನ್ನಡೆಸಿದ್ದು ದೆಹಲಿ ಜನರ ಗಮನ ಸೆಳೆದಿತ್ತು.
Aam Aadmi Party (AAP) supremo Arvind Kejriwal on Tuesday met Lt Governor VK Saxena and tendered his resignation as the Chief Minister of Delhi. Senior AAP leader and minister Atishi, who was chosen by the party legislators to be the next Chief Minister, met the Lt Governor to stake claim to the post.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am