ಬ್ರೇಕಿಂಗ್ ನ್ಯೂಸ್
17-09-24 07:08 pm HK News Desk ದೇಶ - ವಿದೇಶ
ನವದೆಹಲಿ, ಸೆ.17: ದೆಹಲಿಯ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಆಮ್ ಆದ್ಮಿ ಪಾರ್ಟಿಯ (ಆಪ್) ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಅವರನ್ನು ಶಾಸಕಾಂಗ ಪಕ್ಷದ ನೂತನ ನಾಯಕಿಯನ್ನಾಗಿ ಆರಿಸಲಾಗಿದೆ. ಹಾಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು ಅದರ ಬೆನ್ನಲ್ಲೇ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಆಮ್ ಆದ್ಮಿ ಪಾರ್ಟಿ ಸೇರಿದ ಹತ್ತೇ ವರ್ಷದಲ್ಲಿ ಅತಿಶಿ ಮುಖ್ಯಮಂತ್ರಿ ಆಗಿದ್ದಾರೆ. 2012ರಲ್ಲಿ ಆಮ್ ಆದ್ಮಿ ಪಾರ್ಟಿ ಆರಂಭವಾಗಿತ್ತು. ಮರು ವರ್ಷವೇ ಅತಿಶಿ ಅವರು ಪಾರ್ಟಿ ಸೇರಿದ್ದರು. ಒಂದೇ ವರ್ಷದಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಆಮ್ ಆದ್ಮಿ ಪಾರ್ಟಿ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೇರಿತ್ತು.
1981ರ ಜೂನ್ 8ರಂದು ದೆಹಲಿಯ ಪಂಜಾಬಿ ಮೂಲದ ಕುಟುಂಬದಲ್ಲಿ ಜನಿಸಿದ್ದ ಅತಿಶಿ ಮರ್ಲೆನಾ ಸಿಂಗ್ ದೆಹಲಿ ವಿವಿಯಿಂದ ಬಿಎ ಪದವಿ ಪಡೆದಿದ್ದಾರೆ. ಪ್ರತಿಷ್ಠಿತ ಆಕ್ಸ್ ಫರ್ಡ್ ವಿವಿಯಲ್ಲಿ ಎಂಎ ವ್ಯಾಸಂಗ ಮಾಡಿದ್ದಾರೆ. ಪತಿಯ ಹೆಸರು ಪ್ರವೀಣ್ ಸಿಂಗ್ ಎಂದಾಗಿದ್ದು ಇದರಿಂದಲೇ ಅತಿಶಿ ಜೊತೆಗೆ ಸಿಂಗ್ ಎಂಬ ಹೆಸರು ಬಂದಿತ್ತು. ಆದರೆ, ಜನರು ತಮ್ಮನ್ನು ಅತಿಶಿ ಹೆಸರಿನಿಂದಲೇ ಗುರುತಿಸಬೇಕು ಎಂದು ಬಯಸಿ ಸಾರ್ವಜನಿಕ ಜೀವನಕ್ಕೆ ಬಂದ ಬಳಿಕ ಮರ್ಲೆನಾ ಹಾಗೂ ಸಿಂಗ್ ಎಂಬ ಪದಗಳನ್ನು ಕೈಬಿಟ್ಟಿದ್ದರು. ಸಚಿವ ಸಂಪುಟ, ಸರ್ಕಾರಿ ಕಡತಗಳಲ್ಲಿ ಅತಿಶಿ ಎಂದಷ್ಟೇ ಬಳಸುವಂತೆ ಸೂಚಿಸಿದ್ದಾರೆ.
ಎರಡು ವರ್ಷಗಳ ಹಿಂದೆ ಮನೀಶ್ ಸಿಸೋಡಿಯಾ ಹಾಗೂ ಸತ್ಯೇಂದರ್ ಜೈನ್ ಸಚಿವ ಸ್ಥಾನ ತೆರವಾಗಿದ್ದರಿಂದ ಅತಿಶಿ ಅವರನ್ನು ಕೇಜ್ರಿವಾಲ್ ತನ್ನ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಂಸ್ಕೃತಿ, ಪ್ರವಾಸ ಹಾಗೂ ಲೋಕೋಪಯೋಗಿ ಇಲಾಖೆಗಳನ್ನು ಅವರಿಗೆ ವಹಿಸಲಾಗಿತ್ತು. ಸಚಿವ ಖಾತೆ ನಿರ್ವಹಿಸಿದ ಅನುಭವ ಇಲ್ಲದಿದ್ದರೂ ಎಲ್ಲ ಇಲಾಖೆಗಳನ್ನು ಏಕಕಾಲದಲ್ಲಿ ಮುನ್ನಡೆಸಿದ್ದು ದೆಹಲಿ ಜನರ ಗಮನ ಸೆಳೆದಿತ್ತು.
Aam Aadmi Party (AAP) supremo Arvind Kejriwal on Tuesday met Lt Governor VK Saxena and tendered his resignation as the Chief Minister of Delhi. Senior AAP leader and minister Atishi, who was chosen by the party legislators to be the next Chief Minister, met the Lt Governor to stake claim to the post.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm