ಬ್ರೇಕಿಂಗ್ ನ್ಯೂಸ್
17-09-24 07:28 pm HK News Desk ದೇಶ - ವಿದೇಶ
ನವದೆಹಲಿ, ಸೆ.17: ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ಏಕ್ಷನ್ ಕುರಿತಂತೆ ಸುಪ್ರೀಂ ಕೋರ್ಟ್ ಗರಂ ಆಗಿದ್ದು ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನಿಲ್ಲಿಸಬೇಕು. ಅತಿಕ್ರಮಣಗಳಿದ್ದರೆ ಕಾನೂನು ಪ್ರಕಾರ ಮಾತ್ರ ತೆರವು ಮಾಡಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಬುಲ್ಡೋಜರ್ ಬಳಕೆಯ ವಿರುದ್ಧ ಜಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅಕ್ಟೋಬರ್ 1ರ ವರೆಗೆ ದೇಶದ ಯಾವುದೇ ರಾಜ್ಯಗಳಲ್ಲಿ ಯಾವುದೇ ಬುಲ್ಡೋಜರ್ ಕಾರ್ಯಾಚರಣೆ ನಡೆಸದಂತೆ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸುತ್ತಿದೆ.
ಈ ಕುರಿತು ನೋಟಿಸ್ ನೀಡಿದ ನಂತರವೇ ಅತಿಕ್ರಮಣ ತೆರೆವಿಗೆ ಬುಲ್ಡೋಜರ್ ಬಳಸಲಾಗುತ್ತಿದೆ ಎಂದು ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಆದರೆ ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನ್ಯಾಯಾಧೀಶರು ವಿರೋಧಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾದ ಅಕ್ರಮ ನಿರ್ಮಾಣಗಳನ್ನು ಸರಿಯಾದ ಕ್ರಮದಲ್ಲಿ ನೆಲಸಮ ಮಾಡಬಹುದು ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ಅಭಿಪ್ರಾಯ ಪಟ್ಟರು.
ನಿರ್ದಿಷ್ಟ ಸಮುದಾಯ ಗುರಿಯಾಗಿಸಿ ಬುಲ್ಡೋಜರ್ ಕಾರ್ಯಾಚರಣೆ ಮಾಡಿದ್ದಾರೆ ಎನ್ನುವುದು ತಪ್ಪು ಅಭಿಪ್ರಾಯ. ಈ ರೀತಿಯ ತಪ್ಪು ನಿರೂಪಣೆಯನ್ನು ದೇಶದಲ್ಲಿ ಹರಡಲಾಗುತ್ತಿದೆ ಎಂದು ಆಕ್ಷೇಪಿಸಿದರು. ಆದರೆ, ಇಂತಹ ನಿರೂಪಣೆಯಿಂದ ನಾವು ಪ್ರಭಾವಿತರಾಗುತ್ತಿಲ್ಲ. ಅಕ್ರಮ ನಿರ್ಮಾಣಕ್ಕೆ ನಾವು ರಕ್ಷಣೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
While hearing a batch of pleas against "bulldozer actions" in various states, the Supreme Court today passed an interim order that no demolition should take place in the country without its permission.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am