ಬ್ರೇಕಿಂಗ್ ನ್ಯೂಸ್
19-09-24 09:51 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.19: ತಿರುಪತಿ ವೆಂಕಟರಮಣ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ಭಾರೀ ಫೇಮಸ್. ಲಕ್ಷಾಂತರ ಭಕ್ತರು ಲಡ್ಡುಗಳನ್ನೇ ಪ್ರಸಾದ ರೂಪದಲ್ಲಿ ಪಡೆಯುತ್ತಾರೆ. ಆದರೆ ಈ ಲಡ್ಡುವನ್ನು ತಯಾರಿಸಲು ದನದ ಕೊಬ್ಬು, ಮೀನಿನ ಎಣ್ಣೆ ಬಳಸಲಾಗುತ್ತಿತ್ತು ಎನ್ನುವುದು ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಬುಧವಾರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಆಘಾತಕಾರಿ ಟೆಸ್ಟ್ ರಿಪೋರ್ಟ್ ಹೊರ ಬಂದಿದ್ದು ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ, ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿ ಪಕ್ಷ ಈ ಆರೋಪವನ್ನು ನಿರಾಕರಿಸಿದೆ. ತಿರುಪತಿ ಲಡ್ಡು ಪ್ರಸಾದವನ್ನು ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ತಯಾರಿಸುತ್ತದೆ.

"ತಿರುಮಲ ಲಡ್ಡುವನ್ನು ಗುಣಮಟ್ಟ ರಹಿತ ಪದಾರ್ಥಗಳಿಂದ ತಯಾರಿಸಲಾಗುತ್ತದೆ. ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಇದಕ್ಕಾಗಿ ಬಳಸಿದ್ದಾರೆ ಎಂದು ನಾಯ್ಡು ಎನ್ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದ್ದು ಸಂಕಲನಕ್ಕೆ ಕಾರಣವಾಗಿದೆ. ಅಲ್ಲದೆ, ಈಗ ಶುದ್ಧ ತುಪ್ಪವನ್ನು ಲಡ್ಡು ತಯಾರಿಕೆ ಬಳಸಲಾಗುತ್ತಿದೆ ಮತ್ತು ದೇವಸ್ಥಾನದಲ್ಲಿ ಎಲ್ಲವನ್ನೂ ಶುದ್ಧೀಕರಿಸಲಾಗಿದೆ. ಇದು ಸುಧಾರಿತ ಮತ್ತು ಗುಣಮಟ್ಟದ ಬದಲಾವಣೆಗೆ ಕಾರಣವಾಗುತ್ತದೆ ಎಂದು ನಾಯ್ಡು ತಿಳಿಸಿದ್ದಾರೆ.
ಹಿರಿಯ ವೈಎಸ್ಆರ್ಸಿಪಿ ನಾಯಕ ಮತ್ತು ಮಾಜಿ ಟಿಟಿಡಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ನಾಯ್ಡು ಸಿಎಂ ಚಂದ್ರಬಾಬು ನಾಯ್ಡು ಆರೋಪವನ್ನು "ದುರುದ್ದೇಶಪೂರಿತ" ಎಂದು ಬಣ್ಣಿಸಿದ್ದಾರೆ ಮತ್ತು ಟಿಡಿಪಿ ವರಿಷ್ಠರು "ರಾಜಕೀಯ ಲಾಭಕ್ಕಾಗಿ ಯಾವುದೇ ಹಂತಕ್ಕೆ ಇಳಿಯುತ್ತಾರೆ" ಎಂದು ಆರೋಪಿಸಿದ್ದಾರೆ.
Andhra Pradesh Chief Minister N Chandrababu Naidu has accused the previous YSRCP government of using substandard ingredients, including animal fat, in the preparation of the famed Tirupati laddoos, a sacred sweet offered at the Sri Venkateswara temple in Tirupati.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm