ಬ್ರೇಕಿಂಗ್ ನ್ಯೂಸ್
11-12-20 10:16 am Headline Karnataka News Network ದೇಶ - ವಿದೇಶ
ಜೈಪುರ, ಡಿ.11: ರಾಜಸ್ಥಾನದ ಕೋಟಾ ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ಗಂಟೆಯಲ್ಲಿ ಒಂಬತ್ತು ನವಜಾಶ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ವರ್ಷ ಇದೇ ಆಸ್ಪತ್ರೆಯಲ್ಲಿ ಮಕ್ಕಳ ಸಾವು ದೊಡ್ಡ ಪ್ರಮಾಣದಲ್ಲಿ ಸಂಭವಿಸಿದ್ದು, ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.
ಕೋಟಾದ ಜೆ.ಕೆ.ಲಾನ್ ಆಸ್ಪತ್ರೆಯಲ್ಲಿ ಒಟ್ಟು ಒಂಬತ್ತು ಮಕ್ಕಳು ಕೊನೆಯುಸಿರೆಳೆದಿದ್ದಾರೆ. ಎಲ್ಲ ಮಕ್ಕಳು ಒಂದರಿಂದ ನಾಲ್ಕು ದಿನದ ಹಿಂದೆ ಹುಟ್ಟಿದ ಮಕ್ಕಳು ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆರೋಗ್ಯ ಸಚಿವ ರಘು ಶರ್ಮಾ ಆದೇಶಿಸಿದ್ದಾರೆ.
"ಇದು ಸಹಜ ಸಾವು; ಅಸಾಮಾನ್ಯವೇನಲ್ಲ; ಸಾವಿಗೆ ಯಾವುದೇ ಗಂಭೀರ ಕಾರಣ ಅಥವಾ ಸೋಂಕು ಇರಲಿಲ್ಲ" ಎಂದು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಸುರೇಶ್ ದುರಾಲಾ ಹೇಳಿಕೊಂಡಿದ್ದಾರೆ.
ಕೋಟಾ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರು ಆರೋಗ್ಯ ಇಲಾಖೆಗೆ ನೀಡಿದ ಮಾಹಿತಿಯ ಪ್ರಕಾರ, ಮೂರು ಮಕ್ಕಳನ್ನು ಜೆ.ಕೆ.ಲಾನ್ ಆಸ್ಪತ್ರೆಗೆ ಕರೆ ತರುವ ವೇಳೆಯೇ ಅವರು ಮೃತಪಟ್ಟಿದ್ದರು. ಅಷ್ಟೇ ಮಕ್ಕಳಿಗೆ ಜನ್ಮಜಾತ ಗಂಭೀರ ಸಮಸ್ಯೆಗಳಿದ್ದವು. ವಿಭಾಗಾಧಿಕಾರಿ ಕೆ.ಸಿ.ಮೀನಾ, ಜಿಲ್ಲಾಧಿಕಾರಿ ಉಜ್ವಲ್ ರಾಠೋಡ್ ಆಸ್ಪತ್ರೆಗೆ ಗುರುವಾರ ಸಂಜೆ ಭೇಟಿ ನೀಡಿ ಸಭೆ ನಡೆಸಿದರು.
ಪರಿಸ್ಥಿತಿಯ ಮೇಲೆ ನಿಗಾ ಇಡುವ ಸಲುವಾಗಿ ತಕ್ಷಣ ಆರು ಮಂದಿ ಹೆಚ್ಚುವರಿ ವೈದ್ಯರನ್ನು ಮತ್ತು 10 ಮಂದಿ ಹೆಚ್ಚುವರಿ ನರ್ಸ್ಗಳನ್ನು ನಿಯೋಜಿಸುವಂತೆ ಮೀನಾ ಸೂಚನೆ ನೀಡಿದ್ದಾರೆ. 2019ರ ಡಿಸೆಂಬರ್ನಲ್ಲಿ ಇದೇ ಆಸ್ಪತ್ರೆಯಲ್ಲಿ 100 ಮಕ್ಕಳು ಮೃತಪಟ್ಟಿದ್ದವು.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:21 pm
HK News Desk
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm