ಬ್ರೇಕಿಂಗ್ ನ್ಯೂಸ್
11-12-20 10:16 am Headline Karnataka News Network ದೇಶ - ವಿದೇಶ
ಜೈಪುರ, ಡಿ.11: ರಾಜಸ್ಥಾನದ ಕೋಟಾ ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ಗಂಟೆಯಲ್ಲಿ ಒಂಬತ್ತು ನವಜಾಶ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ವರ್ಷ ಇದೇ ಆಸ್ಪತ್ರೆಯಲ್ಲಿ ಮಕ್ಕಳ ಸಾವು ದೊಡ್ಡ ಪ್ರಮಾಣದಲ್ಲಿ ಸಂಭವಿಸಿದ್ದು, ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.
ಕೋಟಾದ ಜೆ.ಕೆ.ಲಾನ್ ಆಸ್ಪತ್ರೆಯಲ್ಲಿ ಒಟ್ಟು ಒಂಬತ್ತು ಮಕ್ಕಳು ಕೊನೆಯುಸಿರೆಳೆದಿದ್ದಾರೆ. ಎಲ್ಲ ಮಕ್ಕಳು ಒಂದರಿಂದ ನಾಲ್ಕು ದಿನದ ಹಿಂದೆ ಹುಟ್ಟಿದ ಮಕ್ಕಳು ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆರೋಗ್ಯ ಸಚಿವ ರಘು ಶರ್ಮಾ ಆದೇಶಿಸಿದ್ದಾರೆ.
"ಇದು ಸಹಜ ಸಾವು; ಅಸಾಮಾನ್ಯವೇನಲ್ಲ; ಸಾವಿಗೆ ಯಾವುದೇ ಗಂಭೀರ ಕಾರಣ ಅಥವಾ ಸೋಂಕು ಇರಲಿಲ್ಲ" ಎಂದು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಸುರೇಶ್ ದುರಾಲಾ ಹೇಳಿಕೊಂಡಿದ್ದಾರೆ.
ಕೋಟಾ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರು ಆರೋಗ್ಯ ಇಲಾಖೆಗೆ ನೀಡಿದ ಮಾಹಿತಿಯ ಪ್ರಕಾರ, ಮೂರು ಮಕ್ಕಳನ್ನು ಜೆ.ಕೆ.ಲಾನ್ ಆಸ್ಪತ್ರೆಗೆ ಕರೆ ತರುವ ವೇಳೆಯೇ ಅವರು ಮೃತಪಟ್ಟಿದ್ದರು. ಅಷ್ಟೇ ಮಕ್ಕಳಿಗೆ ಜನ್ಮಜಾತ ಗಂಭೀರ ಸಮಸ್ಯೆಗಳಿದ್ದವು. ವಿಭಾಗಾಧಿಕಾರಿ ಕೆ.ಸಿ.ಮೀನಾ, ಜಿಲ್ಲಾಧಿಕಾರಿ ಉಜ್ವಲ್ ರಾಠೋಡ್ ಆಸ್ಪತ್ರೆಗೆ ಗುರುವಾರ ಸಂಜೆ ಭೇಟಿ ನೀಡಿ ಸಭೆ ನಡೆಸಿದರು.
ಪರಿಸ್ಥಿತಿಯ ಮೇಲೆ ನಿಗಾ ಇಡುವ ಸಲುವಾಗಿ ತಕ್ಷಣ ಆರು ಮಂದಿ ಹೆಚ್ಚುವರಿ ವೈದ್ಯರನ್ನು ಮತ್ತು 10 ಮಂದಿ ಹೆಚ್ಚುವರಿ ನರ್ಸ್ಗಳನ್ನು ನಿಯೋಜಿಸುವಂತೆ ಮೀನಾ ಸೂಚನೆ ನೀಡಿದ್ದಾರೆ. 2019ರ ಡಿಸೆಂಬರ್ನಲ್ಲಿ ಇದೇ ಆಸ್ಪತ್ರೆಯಲ್ಲಿ 100 ಮಕ್ಕಳು ಮೃತಪಟ್ಟಿದ್ದವು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am