ಬ್ರೇಕಿಂಗ್ ನ್ಯೂಸ್
11-10-24 03:35 pm HK News Desk ದೇಶ - ವಿದೇಶ
ನವದೆಹಲಿ, ಅ.11: ಟಾಟಾ ಗ್ರೂಪ್ ಹೊಸ ಅಧ್ಯಕ್ಷರಾಗಿ ರತನ್ ಟಾಟಾ ಅವರ ಮಲ ಸಹೋದರ ನೋಯೆಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಶುಕ್ರವಾರ ನಡೆದ ಟಾಟಾ ಟ್ರಸ್ಟ್ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನೋಯೆಲ್ ಟಾಟಾ ಅವರು ರತನ್ ಟಾಟಾ ಅವರ ಮಲ ಸಹೋದರ. ಟಾಟಾ ಟ್ರಸ್ಟ್ ತುರ್ತಾಗಿ ಎರಡು ಸಭೆಗಳನ್ನು ನಡೆಸಿದ್ದು, ಒಂದು ಸಭೆಯಲ್ಲಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗಿದ್ದರೆ, ಮತ್ತೊಂದರಲ್ಲಿ ಟಾಟಾ ಟ್ರಸ್ಟ್ ಹೊಸ ಅಧ್ಯಕ್ಷರ ನೇಮಕಾತಿ ವಿಚಾರ ಚರ್ಚೆ ನಡೆದು ನೋಯೆಲ್ ಟಾಟಾ ಹೆಸರು ಅಂತಿಮಗೊಳಿಸಲಾಗಿದೆ.
ನೋಯೆಲ್ ಟಾಟಾ ಅವರು ರತನ್ ಟಾಟಾ ಅವರ ತಂದೆ ನವಾಲ್ ಟಾಟಾ ಅವರ ಎರಡನೇ ಪತ್ನಿ ಸಿಮೋನ್ ಟಾಟಾ ಅವರ ಪುತ್ರ. ಈಗಾಗಲೇ ನೋಯೆಲ್ ಟಾಟಾ ಅವರು ದೊರಾಬ್ಜಿ ಮತ್ತು ರತನ್ ಟಾಟಾ ಟ್ರಸ್ಟ್ಗಳಲ್ಲಿ ಟ್ರಸ್ಟಿ ಆಗಿದ್ದರು. ಈ ಎರಡು ಟ್ರಸ್ಟ್ಗಳು ಟಾಟಾ ಸನ್ಸ್ನಲ್ಲಿ 66% ಪಾಲನ್ನು ಹೊಂದಿವೆ.
ಟಾಟಾ ಟ್ರಸ್ಟ್ ಚೇರ್ಮನ್ ಪಟ್ಟಕ್ಕೆ ಹಲವರ ಹೆಸರು ಚಾಲ್ತಿಯಲ್ಲಿತ್ತು. ನೋಯೆಲ್ ಟಾಟಾ ಅವರ ಹೊರತಾಗಿ ಮೆಹಲಿ ಮಿಸ್ತ್ರಿ ಅವರ ಹೆಸರು ಮುಂಚೂಣಿಯಲ್ಲಿತ್ತು. ಮೆಹಲಿ ಮಿಸ್ತ್ರಿ ಅವರು ರತನ್ ಟಾಟಾ ಆಪ್ತರೆಂದು ನಂಬಲಾಗಿದೆ. 2000ನೇ ಇಸವಿಯಿಂದಲೂ ಎರಡೂ ಟಾಟಾ ಟ್ರಸ್ಟ್ಗಳಲ್ಲಿ ಮಿಸ್ತ್ರಿ ಸಕ್ರಿಯರಾಗಿದ್ದರು. 2022ರ ಅಕ್ಟೋಬರ್ನಲ್ಲಿ ಅವರನ್ನು ಟ್ರಸ್ಟಿ ಎಂದು ಸೇರ್ಪಡೆಗೊಳಿಸಲಾಗಿದೆ.
ನೋಯೆಲ್ ಟಾಟಾ ಅವರು ಕಳೆದ 40 ವರ್ಷಗಳಿಂದ ಟಾಟಾ ಸಮೂಹದ ಭಾಗವಾಗಿದ್ದಾರೆ. ಅವರು ಟ್ರೆಂಟ್ನಂತಹ ಅನೇಕ ದೊಡ್ಡ ಕಂಪನಿಗಳನ್ನು ಮುನ್ನಡೆಸಿದ್ದಾರೆ. ಪ್ರಸ್ತುತ, ಟಾಟಾ ಗ್ರೂಪ್ ಕಂಪನಿಗಳ ಮಂಡಳಿಯ ಸದಸ್ಯರಾಗಿದ್ದಾರೆ. ಪ್ರಸ್ತುತ ಟಾಟಾ ಸ್ಟೀಲ್ ಮತ್ತು ಟೈಟಾನ್ ಕಂಪನಿ ಲಿಮಿಟೆಡ್ನಲ್ಲಿ ಉಪಾಧ್ಯಕ್ಷ.
ನೋಯೆಲ್ ಟಾಟಾ ಅವರು ಆಗಸ್ಟ್ 2010 ರಿಂದ ನವೆಂಬರ್ 2021ರ ವರೆಗೆ ಟ್ರೆಂಟ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅವರ ನಾಯಕತ್ವದಲ್ಲಿ, ಟ್ರೆಂಟ್ನ ವಹಿವಾಟು 500 ಮಿಲಿಯನ್ ಡಾಲರ್ನಿಂದ 3 ಬಿಲಿಯನ್ ಡಾಲರ್ಗೆ ಏರಿತ್ತು. ನೋಯೆಲ್ ಟಾಟಾ ಅವರು ಸಸೆಕ್ಸ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.
Noel Tata, the half-brother of Ratan Tata, has been appointed Chairman of Tata Trust, following a board meeting held in Mumbai today. Noel succeeds Ratan Tata who died at the age of 86 in a Mumbai hospital on Wednesday.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 01:01 pm
Mangalore Correspondent
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm