ಬ್ರೇಕಿಂಗ್ ನ್ಯೂಸ್
12-10-24 01:49 pm HK News Desk ದೇಶ - ವಿದೇಶ
ಕಾಸರಗೋಡು, ಅ.12: ಆಟೋ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ಆತ್ಮಹತ್ಯೆಗೆ ಸಂಬಂಧಿಸಿ ಆರೋಪಕ್ಕೆ ಒಳಗಾದ ಚಂದೇರ ಠಾಣೆಯ ಸಬ್ ಇನ್ಸ್ಪೆಕ್ಟರ್ ಪಿ. ಅನೂಪ್ ಅವರನ್ನು ಕಾಸರಗೋಡು ಎಸ್ಪಿ ಅಮಾನತುಗೊಳಿಸಿದ್ದಾರೆ.
ಕಾಸರಗೋಡು ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಆಗಿದ್ದ ಪಿ. ಅನೂಪ್ ಅವರನ್ನು ಕರ್ತವ್ಯ ಲೋಪ ಆರೋಪದಲ್ಲಿ ಚಂದೇರ ಠಾಣೆಗೆ ವರ್ಗಾಯಿಸಲಾಗಿತ್ತು. ಸೋಮವಾರ ಆಟೋ ಚಾಲಕ ಅಬ್ದುಲ್ ಸತ್ತಾರ್ ರೈಲ್ವೇ ನಿಲ್ದಾಣ ಸಮೀಪದ ಕ್ವಾಟ್ರಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಕಾಸರಗೋಡು ನಗರದ ರಸ್ತೆಯಲ್ಲಿ ಸಾರ್ವಜನಿಕರ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದನ್ನು ಪ್ರಶ್ನಿಸಿ ಅಬ್ದುಲ್ ಸತ್ತಾರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾವನ್ನು ಅನೂಪ್ ನೇತೃತ್ವದ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು. ಆನಂತರ, ಆರೋಪಿ ಅಬ್ದುಲ್ ಸತ್ತಾರ್ ಠಾಣೆಗೆ ಹೋಗಿ ಆಟೋ ಕೊಡುವಂತೆ ಕೇಳಿಕೊಂಡರೂ ಬಿಟ್ಟು ಕೊಟ್ಟಿರಲಿಲ್ಲ. ಇದರಿಂದ ಬೇಸತ್ತ ಅಬ್ದುಲ್ ಸತ್ತಾರ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
ಘಟನೆ ಬಗ್ಗೆ ಮುಸ್ಲಿಂ ಮುಖಂಡರಿಂದ ಆಕ್ರೋಶ ಕೇಳಿಬರುತ್ತಿದ್ದಂತೆ ತನಿಖೆ ನಡೆಸಿ ವರದಿ ನೀಡುವಂತೆ ಎಎಸ್ಪಿ ಬಾಲಕೃಷ್ಣನ್ ನಾಯರ್ ಗೆ ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ. ಶಿಲ್ಪಾ ಸೂಚಿಸಿದ್ದರು. ವರದಿ ಪಡೆದ ಬಳಿಕ ಸಬ್ ಇನ್ಸ್ ಪೆಕ್ಟರ್ ಅನೂಪ್ ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶ ಮಾಡಿದ್ದಾರೆ. ಅನೂಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಟೋ ಚಾಲಕರ ಸಂಘ, ಮುಸ್ಲಿಂ ರಾಜಕೀಯ ಮುಖಂಡರು, ಸಂಘಟನೆಗಳು ಒತ್ತಾಯಿಸಿದ್ದವು. ಆಟೋ ಚಾಲಕ ಸಾರ್ವಜನಿಕರ ಜೊತೆಗೆ ಅನುಚಿತವಾಗಿ ವರ್ತಿಸಿದ್ದಕ್ಕೆ ಆತನ ಕಾಲರ್ ಹಿಡಿದು ಪೊಲೀಸರು ವಶಕ್ಕೆ ಪಡೆದ ವಿಡಿಯೋ ಹರಿದಾಡಿತ್ತು. ಅದೇ ನೆಪದಲ್ಲಿ ಎಸ್ಐ ಅನೂಪ್ ವಿರುದ್ಧ ಕ್ರಮಕ್ಕೆ ಮುಸ್ಲಿಂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು.
In another heartbreaking case of police high-handedness, a veteran autorickshaw driver took his own life, driven by despair and in protest, after the Kasaragod Town Police Sub-Inspector refused to release his vehicle for five days over a petty offence.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm