ಬ್ರೇಕಿಂಗ್ ನ್ಯೂಸ್
25-10-24 03:03 pm HK News Desk ದೇಶ - ವಿದೇಶ
ಕಾಸರಗೋಡು, ಅ.25: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ಒಟ್ಟು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಶಾಲಾ ಶಿಕ್ಷಕಿ, ಪೆರ್ಲ ಮೂಲದ ಡಿವೈಎಫ್ಐ ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
12ಕ್ಕೂ ಹೆಚ್ಚು ಮಂದಿಗೆ ಸರ್ಕಾರಿ ಉದ್ಯೋಗ ಕೊಡುವುದಾಗಿ ವಂಚಿಸಿದ ಬಗ್ಗೆ ವಿವಿಧೆಡೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ವಿದ್ಯಾನಗರ ಪೊಲೀಸರು ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಸಚಿತಾ ರೈ ತಲೆಮರೆಸಿಕೊಂಡಿದ್ದರು. ಗುರುವಾರ ಸಂಜೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆಯಲು ಯತ್ನಿಸುತ್ತಿದ್ದಾಗಲೇ ಆಕೆಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಸಿಪಿಸಿಆರ್ಐ, ಕೇಂದ್ರೀಯ ವಿದ್ಯಾಲಯ, ಕರ್ನಾಟಕ ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಎಸ್ಬಿಐ ಮುಂತಾದ ವಿವಿಧ ಇಲಾಖೆ, ಬ್ಯಾಂಕುಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹಲವು ವ್ಯಕ್ತಿಗಳಿಂದ 10ರಿಂದ 20 ಲಕ್ಷದಷ್ಟು ಮೊತ್ತವನ್ನು ಸಚಿತಾ ಸಂಗ್ರಹಿಸಿದ್ದರು. ಕುಂಬಳೆ ಕಿದೂರಿನ ನಿಶ್ಮಿತಾ ಶೆಟ್ಟಿ ಎಂಬವರು ಮೊದಲ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಇತರ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಸಿಪಿಸಿಆರ್ಐನಲ್ಲಿ ಕೆಲಸ ಕೊಡಿಸುವುದಾಗಿ ಸಚಿತಾ ನಿಶ್ಮಿತಾ ಶೆಟ್ಟಿಗೆ ಸುಮಾರು 15 ಲಕ್ಷ ರೂಪಾಯಿ ವಂಚಿಸಿದ್ದಾರೆ. ಅಲ್ಲದೆ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ದೇಲಂಪಾಡಿಯ ಸುಚಿತ್ರಾ ರಾವ್ ಎಂಬವರಿಂದ 7,31,500 ರೂ. ವಂಚಿಸಿದ್ದಾರೆ. ಸಚಿತಾ ರೈ ಡಿವೈಎಫ್ಐ ಜಿಲ್ಲಾ ಸಮಿತಿಯ ಸದಸ್ಯೆಯಾಗಿದ್ದು, ಪೆರ್ಲ ಬಾಡೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
The Vidyanagar police on Thursday evening arrested a school teacher accused of defrauding people by promising them jobs in exchange for large sums of money.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm