ಬ್ರೇಕಿಂಗ್ ನ್ಯೂಸ್
25-10-24 03:03 pm HK News Desk ದೇಶ - ವಿದೇಶ
ಕಾಸರಗೋಡು, ಅ.25: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ಒಟ್ಟು ಎರಡು ಕೋಟಿಗೂ ಹೆಚ್ಚು ವಂಚನೆ ನಡೆಸಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಶಾಲಾ ಶಿಕ್ಷಕಿ, ಪೆರ್ಲ ಮೂಲದ ಡಿವೈಎಫ್ಐ ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
12ಕ್ಕೂ ಹೆಚ್ಚು ಮಂದಿಗೆ ಸರ್ಕಾರಿ ಉದ್ಯೋಗ ಕೊಡುವುದಾಗಿ ವಂಚಿಸಿದ ಬಗ್ಗೆ ವಿವಿಧೆಡೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ವಿದ್ಯಾನಗರ ಪೊಲೀಸರು ಆರೋಪಿ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಸಚಿತಾ ರೈ ತಲೆಮರೆಸಿಕೊಂಡಿದ್ದರು. ಗುರುವಾರ ಸಂಜೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆಯಲು ಯತ್ನಿಸುತ್ತಿದ್ದಾಗಲೇ ಆಕೆಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಸಿಪಿಸಿಆರ್ಐ, ಕೇಂದ್ರೀಯ ವಿದ್ಯಾಲಯ, ಕರ್ನಾಟಕ ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಎಸ್ಬಿಐ ಮುಂತಾದ ವಿವಿಧ ಇಲಾಖೆ, ಬ್ಯಾಂಕುಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹಲವು ವ್ಯಕ್ತಿಗಳಿಂದ 10ರಿಂದ 20 ಲಕ್ಷದಷ್ಟು ಮೊತ್ತವನ್ನು ಸಚಿತಾ ಸಂಗ್ರಹಿಸಿದ್ದರು. ಕುಂಬಳೆ ಕಿದೂರಿನ ನಿಶ್ಮಿತಾ ಶೆಟ್ಟಿ ಎಂಬವರು ಮೊದಲ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಇತರ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಸಿಪಿಸಿಆರ್ಐನಲ್ಲಿ ಕೆಲಸ ಕೊಡಿಸುವುದಾಗಿ ಸಚಿತಾ ನಿಶ್ಮಿತಾ ಶೆಟ್ಟಿಗೆ ಸುಮಾರು 15 ಲಕ್ಷ ರೂಪಾಯಿ ವಂಚಿಸಿದ್ದಾರೆ. ಅಲ್ಲದೆ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ದೇಲಂಪಾಡಿಯ ಸುಚಿತ್ರಾ ರಾವ್ ಎಂಬವರಿಂದ 7,31,500 ರೂ. ವಂಚಿಸಿದ್ದಾರೆ. ಸಚಿತಾ ರೈ ಡಿವೈಎಫ್ಐ ಜಿಲ್ಲಾ ಸಮಿತಿಯ ಸದಸ್ಯೆಯಾಗಿದ್ದು, ಪೆರ್ಲ ಬಾಡೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
The Vidyanagar police on Thursday evening arrested a school teacher accused of defrauding people by promising them jobs in exchange for large sums of money.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm