ಬ್ರೇಕಿಂಗ್ ನ್ಯೂಸ್
05-11-24 11:41 am HK News Desk ದೇಶ - ವಿದೇಶ
ಕಾಸರಗೋಡು, ನ.5: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬದಿಯಡ್ಕ ಸಮೀಪದ ಬೋವಿಕ್ಕಾನದಲ್ಲಿ ನಡೆದಿದೆ.
ಭಾನುವಾರ ಸಂಜೆ ಕಾರ್ಯಕ್ರಮ ನಿಮಿತ್ತ ಸ್ವಾಮೀಜಿ ತಮ್ಮ ಕಾರಿನಲ್ಲಿ ಬೋವಿಕ್ಕಾನ - ಇರಿಯಣ್ಣಿ ಮಾರ್ಗ ಮಧ್ಯೆ ಸಂಚರಿಸುತ್ತಿದ್ದಾಗ ಪುಂಡರ ತಂಡ ಅಡ್ಡಹಾಕಿದೆ. ವಾಹನ ತಡೆದು ತಗಾದೆ ತೆಗೆದಿದ್ದು ಬಳಿಕ ಸ್ವಾಮೀಜಿ ಮಾತನಾಡದೆ ಮುಂದುವರಿದಿದ್ದರು. ಕಾರ್ಯಕ್ರಮ ಮುಗಿಸಿ ಅದೇ ದಾರಿಯಲ್ಲಿ ಹಿಂತಿರುಗುತ್ತಿದ್ದಾಗ ಅಡ್ಡಹಾಕಿದ ದುಷ್ಕರ್ಮಿಗಳ ತಂಡವು ದೊಣ್ಣೆಯಲ್ಲಿ ಕಾರಿನ ಗ್ಲಾಸ್ ಪುಡಿಗಟ್ಟಿ ಹಲ್ಲೆಗೆ ಯತ್ನಿಸಿದೆ. ಕಾರನ್ನು ಹಿಂಬಾಲಿಸಿ ಬಂದಿದ್ದ ತಂಡವು ಬಾವಿಕ್ಕೆರೆ ಎಂಬಲ್ಲಿ ಕೃತ್ಯ ನಡೆಸಿದೆ.
ಕಾರಿನ ಮುಂದಿನ ಗಾಜಿಗೆ ದೊಣ್ಣೆಯಲ್ಲಿ ಹೊಡೆದು ಹಾನಿ ಮಾಡಿದ್ದಾರೆ. ಅಲ್ಲದೆ, ಸ್ವಾಮೀಜಿಗೆ ಬೆದರಿಕೆ ಹಾಕಿ ಸ್ಥಳದಲ್ಲಿ ಭಯ ಮೂಡಿಸಿದ್ದಾರೆ. ಸ್ವಾಮೀಜಿ ಬಳಿಕ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ ಇಂದು ಬೋವಿಕ್ಕಾನದಲ್ಲಿ ಹಿಂದು ಐಕ್ಯವೇದಿ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹಿಂದು ಶ್ರದ್ಧಾಕೇಂದ್ರದ ಗುರುಗಳಿಗೆ ಅಪಮಾನ ಎಸಗಿದರೆ ಸಾಮಾನ್ಯ ಜನರ ಪಾಡೇನು ಎಂದು ಐಕ್ಯವೇದಿ ಪ್ರಶ್ನಿಸಿದ್ದು ಹಿಂದು ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿದೆ.
Edneer Math Swamiji car attacked in Kerala Kasaragod. The incident occurred on Sunday while he was on hisbway to kerala after which Miscreants attacked his car.
07-08-25 05:50 pm
Bangalore Correspondent
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 03:26 pm
Mangalore Correspondent
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm