ಬ್ರೇಕಿಂಗ್ ನ್ಯೂಸ್
12-11-24 12:35 pm HK News Desk ದೇಶ - ವಿದೇಶ
ನವದೆಹಲಿ, ನ.12: ಅಲ್ ಖೈದಾ ಉಗ್ರರ ಜೊತೆಗಿನ ಲಿಂಕ್ ಇರುವ ಬಾಂಗ್ಲಾದೇಶಿಗರು ಸಕ್ರಿಯರಾಗಿದ್ದಾರೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ಕರ್ನಾಟಕ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ಬಿಹಾರ ಸೇರಿದಂತೆ ಹತ್ತಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಸೋಮವಾರ ಬೆಳಗ್ಗಿನಿಂದಲೇ ಕೆಲವು ಶಂಕಿತರ ನಿವಾಸಗಳಿಗೆ ದಾಳಿ ನಡೆಸಲಾಗಿದ್ದು, ಮೊಬೈಲ್ ಇನ್ನಿತರ ಇಲೆಕ್ಟ್ರಾನಿಕ್ ವಸ್ತುಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಉಗ್ರವಾದಿ ಚಟುವಟಿಕೆಗಳಿಗೆ ಫಂಡಿಂಗ್ ಮಾಡುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಮೊಬೈಲ್, ಬ್ಯಾಂಕ್ ಖಾತೆ ಕುರಿತ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬಾಂಗ್ಲಾ ಮೂಲದ ಅಲ್ ಖೈದಾ ಸಂಘಟನೆಯ ಜೊತೆಗೆ ಲಿಂಕ್ ಇರುವವರು ಮತ್ತು ಅಂಥವರ ಜೊತೆಗೆ ನಿಕಟ ನಂಟು ಹೊಂದಿರುವವರನ್ನು ಕೇಂದ್ರೀಕರಿಸಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. 2023ರಲ್ಲಿ ಬಾಂಗ್ಲಾದೇಶಿ ಉಗ್ರರು ದೇಶದಲ್ಲಿ ಯುವಕರನ್ನು ಇವರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದುದು ಪತ್ತೆಯಾಗಿತ್ತು. ಅದೇ ಪ್ರಕರಣದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದ್ದು ದೇಶಾದ್ಯಂತ ಪ್ರಮುಖ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಕಳೆದ ವರ್ಷ ನವೆಂಬರ್ ನಲ್ಲಿ ಬಾಂಗ್ಲಾ ನೆಟ್ವರ್ಕ್ ನಲ್ಲಿದ್ದ ಮೊಹಮ್ಮದ್ ಸೋಜಿಬ್ ಮಿಯಾನ್, ಮುನ್ನಾ ಖಾಲಿದ್ ಅನ್ಸಾರಿ, ಅಜರುಲ್ ಇಸ್ಲಾಂ, ಅಬ್ದುಲ್ ಲತೀಫ್ ಅನ್ಸಾರಿ, ಭಾರತೀಯ ಪ್ರಜೆ ಫರೀದ್ ಎಂಬವರನ್ನು ಬಂಧಿಸಲಾಗಿತ್ತು. ಇವರ ತನಿಖೆಯ ವೇಳೆ ಭಾರತದಲ್ಲಿ ಯುವಕರನ್ನು ಅಲ್ ಖೈದಾ ಸಂಘಟನೆಯತ್ತ ಪ್ರೇರೇಪಿಸಿ, ಟೆರರ್ ಫಂಡಿಂಗ್ ಕೆಲಸ ಮಾಡಿಸುವುದು, ಆಮೂಲಕ ಅಲ್ ಖೈದಾಗೆ ಹಣ ರವಾನೆ ಮಾಡುವುದು, ದೇಶ ವಿರೋಧಿ ಚಟುವಟಿಕೆಯತ್ತ ಪ್ರೇರೇಪಿಸುವಂತಹ ಕೆಲಸ ಮಾಡಿಸುತ್ತಿದ್ದರು ಎನ್ನುವುದು ಪತ್ತೆಯಾಗಿತ್ತು. ಮಾಹಿತಿ ಆಧರಿಸಿ ಎನ್ಐಎ ಆಗಿಂದಾಗ್ಗೆ ಕಾರ್ಯಾಚರಣೆ ನಡೆಸುತ್ತಿದೆ.
The National Investigation Agency (NIA) on Monday (November 11, 2024) carried out searches at nine locations across five States and one Union Territory in connection with the alleged activities promoted by some Bangladeshi nationals as part of the banned terror group al-Qaeda’s conspiracy to “destabilise” India.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm