ಬ್ರೇಕಿಂಗ್ ನ್ಯೂಸ್
12-12-20 09:57 pm Headline Karnataka News Network ದೇಶ - ವಿದೇಶ
ಚೆನ್ನೈ, ಡಿ.12: ಮಹತ್ವದ ಬೆಳವಣಿಗೆಯಲ್ಲಿ ಸಿಬಿಐ ವಶಕ್ಕೆ ಪಡೆದಿದ್ದ 103 ಕೇಜಿ ಚಿನ್ನ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದ್ದು ಮದ್ರಾಸ್ ಹೈಕೋರ್ಟ್ ತನಿಖೆಗೆ ಆದೇಶ ಮಾಡಿದೆ.
ಚೆನ್ನೈ ನಗರದ ಸುರಾನಾ ಕಂಪೆನಿಗೆ ಸೇರಿದ ಬಿಲ್ಡಿಂಗ್ ನಲ್ಲಿ 2012ರಲ್ಲಿ ಸಿಬಿಐ ದಾಳಿ ನಡೆಸಿದ್ದು, 400.47 ಕೇಜಿ ಚಿನ್ನದ ಗಟ್ಟಿ ಮತ್ತು ಆಭರಣಗಳು ಪತ್ತೆಯಾಗಿದ್ದವು. ಚಿನ್ನ ಮತ್ತು ಬೆಳ್ಳಿಯ ಆಮದು ವ್ಯವಹಾರವನ್ನು ಮಾಡಿಕೊಂಡಿದ್ದ ಸುರಾನಾ ಕಾರ್ಪೊರೇಷನ್ ಲಿಮಿಟೆಡ್, ವಿದೇಶಿ ಆಮದು ನೀತಿಯನ್ನು ಉಲ್ಲಂಘಿಸಿದ ವಿಚಾರದಲ್ಲಿ ಸಿಬಿಐ ದಾಳಿ ನಡೆದಿತ್ತು. ದಾಳಿ ಬಳಿಕ ಚಿನ್ನ ಇದ್ದ ಕಟ್ಟಡವನ್ನು ಸೀಲ್ ಮಾಡಿ ಸಿಬಿಐ ಅಧಿಕಾರಿಗಳು ತೆರಳಿದ್ದರು. ಆದರೆ, ಅಲ್ಲಿದ್ದ 400 ಕೇಜಿ ಚಿನ್ನದ ಸಂಗ್ರಹದ ಪೈಕಿ 103 ಕೇಜಿ ನಾಪತ್ತೆ ಆಗಿರುವ ಬಗ್ಗೆ ಕಳೆದ ಫೆಬ್ರವರಿಯಲ್ಲಿ ತಿಳಿದುಬಂದಿದ್ದು ಸುರಾನಾ ಸಂಸ್ಥೆಯ ಪರವಾಗಿ ಮದ್ರಾಸ್ ಹೈಕೋರ್ಟಿಗೆ ದೂರು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್, ಸಿಬಿಐ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಲ್ಲದೆ ತಮಿಳುನಾಡು ಪೊಲೀಸರ ಮೂಲಕ ತನಿಖೆಗೆ ಆದೇಶ ಮಾಡಿದೆ.

ಆದರೆ, ಸಿಬಿಐ ಪರ ವಕೀಲರು, ತಮಿಳುನಾಡು ಪೊಲೀಸರು ಸಿಬಿಐ ವಿರುದ್ಧ ತನಿಖೆ ಮಾಡುವುದಂದ್ರೆ ಸ್ವತಂತ್ರ ಸಂಸ್ಥೆಯ ಘನತೆಗೆ ಪೆಟ್ಟು ಬಿದ್ದಂತಾಗುತ್ತದೆ. ಸಿಬಿಐ ವಿಭಾಗದ ಮೇಲಧಿಕಾರಿಗಳು ಅಥವಾ ಎನ್ಐಎ ತಂಡದಿಂದ ತನಿಖೆ ನಡೆಸುವಂತೆ ಕೇಳಿಕೊಂಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಪೊಲೀಸರು ಮತ್ತು ಸಿಬಿಐ ಅಧಿಕಾರಿಗಳ ನಡುವೆ ಕೀಳಂದಾಜು ಮಾಡಬಾರದು. ಅವರು ಮೇಲು, ಇವರು ಕೀಳು ಎಂದು ಹೇಳುವಂತಿಲ್ಲ. ಸಿಬಿಐಗೆ ಇದು ಅಗ್ನಿಪರೀಕ್ಷೆ. ಪರೀಕ್ಷೆಯಲ್ಲಿ ಸತ್ಯ ಹೊರಬರಲಿ. ಕಾನೂನು ಎಲ್ಲರಿಗು ಒಂದೇ ಆಗಿರುತ್ತದೆ. ಹಾಗೆ ಭಾವಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಮಾರ್ಮಿಕ ಉತ್ತರ ನೀಡಿದೆ.

ಸೀಜ್ ಮಾಡಿದ ಬಳಿಕ ನಾವು ಸಿಬಿಐ ಕೋರ್ಟಿಗೆ ಅದರ ಕೀಯನ್ನು ಕೊಟ್ಟಿದ್ದೆವು. ಆದರೆ ಯಾವ ದಿನಾಂಕವೆಂದು ನಮೂದು ಮಾಡಿಲ್ಲ. ಅಲ್ಲದೆ, ಚಿನ್ನವನ್ನು ಪತ್ತೆ ಮಾಡಿದಾಗ ಕಲೆಕ್ಟಿವ್ ಆಗಿ ತೂಕ ಮಾಡಲಾಗಿತ್ತು. ಈಗ ಒಂದೊಂದಾಗೇ ಆಧುನಿಕ ಉಪಕರಣಗಳ ಮೂಲಕ ತೂಕ ಮಾಡಿದ್ದು ಕಡಿಮೆ ಬಂದಿರುವ ಸಾಧ್ಯತೆ ಇದೆ. ಇದರಲ್ಲಿ ಅಧಿಕಾರಿಗಳ ಪಾತ್ರ ಇಲ್ಲವೆಂದು ಸಿಬಿಐ ಪರ ವಕೀಲರು ವಾದಿಸಿದ್ದಕ್ಕೆ ಗರಂ ಆದ ನ್ಯಾಯಾಧೀಶರು, ಚಿನ್ನದ ಭಾರ ಕಡಿಮೆಯಾಗಿದೆ ಎನ್ನುವುದನ್ನು ಪ್ರೂವ್ ಮಾಡಲು ಏನೆಲ್ಲಾ ಹೇಳಬೇಡಿ. ಚಿನ್ನ ತನ್ನ ಭಾರ ಕಳೆದುಕೊಳ್ಳಲು ಅದು ಗಾಂಜಾ ಅಲ್ಲ. ನೂರು ಕೇಜಿ ಆಚೀಚೆ ಆಗಿದೆ ಅಂದರೆ ಅದೇನು ಸಾಮಾನ್ಯ ವಿಚಾರವೇ ಎಂದು ಪ್ರಶ್ನೆ ಮಾಡಿದ್ದಾರೆ.
ಕೊನೆಗೆ ತನಿಖೆಗೆ ಆದೇಶ ಮಾಡಿದ ಕೋರ್ಟ್, ಚೆನ್ನೈ ನಗರದ ಸಿಐಡಿಯ ಮೆಟ್ರೊ ವಿಂಗ್ ನಲ್ಲಿ ಕಳವು ಮತ್ತು ಮೋಸದ ಪ್ರಕರಣದಲ್ಲಿ ಎಫ್ಐಆರ್ ದಾಖಲು ಮಾಡಲು ಸೂಚನೆ ನೀಡಿದ್ದಲ್ಲದೆ ತನಿಖಾಧಿಕಾರಿಯಾಗಿ ಎಸ್ಪಿ ದರ್ಜೆಯ ಅಧಿಕಾರಿಯನ್ನು ನೇಮಿಸಿ ಆರು ತಿಂಗಳಲ್ಲಿ ತನಿಖೆ ಮಾಡಿ ವರದಿ ನೀಡಲು ಆದೇಶ ಮಾಡಿದೆ.
After nearly 100 kilos of gold was reported missing from CBI custody in Chennai, the Madras High Court on Ssaturday directed the Tamil Nadu Crime Branch-CID police to probe the case.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm