ಬ್ರೇಕಿಂಗ್ ನ್ಯೂಸ್
18-11-24 01:09 pm HK News Desk ದೇಶ - ವಿದೇಶ
ನವದೆಹಲಿ, ನ.18: ದೆಹಲಿಯಲ್ಲಿ ಶ್ರದ್ಧಾ ವಾಳ್ಕರ್ ಎಂಬ ಯುವತಿಯನ್ನು ಹತ್ಯೆಗೈದು 33 ತುಂಡುಗಳನ್ನಾಗಿಸಿ ಕಾಡಿಗೆಸೆದು ಸಾಕ್ಷ್ಯ ನಾಶ ಮಾಡಿದ್ದ ಪ್ರಕರಣದಲ್ಲಿ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಹತ್ಯೆಗೈಯಲು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಂಚು ಹೂಡಿದೆ. ಬಿಷ್ಣೋಯಿ ಗ್ಯಾಂಗಿನ ಟಾರ್ಗೆಟ್ ಲಿಸ್ಟ್ ನಲ್ಲಿ ಈತನ ಹೆಸರೂ ಇದೆಯೆಂದು ಪೊಲೀಸರು ತಿಳಿಸಿದ್ದಾರೆ.
2022ರ ಮೇನಲ್ಲಿ ಶ್ರದ್ಧಾ ವಾಳ್ಕರ್ ಎಂಬ ಮಹಾರಾಷ್ಟ್ರ ಮೂಲದ ಯುವತಿಯನ್ನು ಅಫ್ತಾಬ್ ಪೂನಾವಾಲಾ ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ದೆಹಲಿಗೆ ಕರೆದೊಯ್ದು ಜೊತೆಯಾಗಿ ರೂಂ ಮಾಡಿಕೊಂಡಿದ್ದರು. ಇಬ್ಬರ ನಡುವೆ ಜಗಳವುಂಟಾಗಿ ಆಕೆಯನ್ನು ಕೊಲೆಗೈದು ಬಳಿಕ ದೇಹವನ್ನು 33 ತುಂಡುಗಳಾಗಿ ಕತ್ತರಿಸಿ ಫ್ರಿಜ್ ನಲ್ಲಿ ಇಟ್ಟಿದ್ದ. ಈ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪೈಶಾಚಿಕ ರೀತಿಯಲ್ಲಿ ಕೊಲೆಗೈದು ಸಾಕ್ಷ್ಯ ಮಾಡಿದ್ದಕ್ಕಾಗಿ ಆಕ್ರೋಶ ಕೇಳಿಬಂದಿತ್ತು.
ಇದೀಗ ಶ್ರದ್ಧಾ ವಾಳ್ಕರ್ ಹತ್ಯೆಗೆ ಬಿಷ್ಣೋಯಿ ಗ್ಯಾಂಗ್ ಸೇಡು ತೀರಿಸಲು ಮುಂದಾಗಿದ್ದು ಆರೋಪಿ ಹತ್ಯೆಗೆ ಸ್ಕೆಚ್ ಹಾಕಿದೆ ಎನ್ನಲಾಗುತ್ತಿದೆ. ಬಿಷ್ಣೋಯಿ ಗ್ಯಾಂಗ್ ಹಲವರನ್ನು ಹಿಟ್ ಲಿಸ್ಟ್ ಮಾಡಿಕೊಂಡಿದ್ದು ಇದಕ್ಕಾಗಿ ಶಾರ್ಪ್ ಶೂಟರ್ ಗಳನ್ನು ಛೂಬಿಟ್ಟಿದೆ. ಹೀಗಾಗಿ ಆರೋಪಿ ಅಫ್ತಾಬ್ ಸುರಕ್ಷತೆ ಬಗ್ಗೆ ಜೈಲು ಆಡಳಿತವು ಅಲರ್ಟ್ ಆಗಿದೆ ಎಂದು ತಿಹಾರ್ ಜೈಲಿನ ಮೂಲಗಳು ತಿಳಿಸಿವೆ.
ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿ ಶಿವಕುಮಾರ್ ಗೌತಮ್, ಅಫ್ತಾಬ್ನನ್ನು ಕೊಲ್ಲಲು ಬಯಸುವುದಾಗಿ ಪೊಲೀಸರಿಗೆ ಹೇಳಿದ್ದಾನೆ. ತಿಹಾರ್ ಜೈಲಿನಲ್ಲಿಯೇ ಅಫ್ತಾಬ್ ಹತ್ಯೆಗೆ ಸಂಚು ರೂಪಿಸಲಾಗುತ್ತಿದೆ. 2022ರ ಮೇನಲ್ಲಿ ದೆಹಲಿಯ ಛತ್ತರ್ಪುರ ಪ್ರದೇಶದಲ್ಲಿ ಶ್ರದ್ಧಾ ವಾಕರ್ ಳನ್ನು ಕೊಲೆ ಮಾಡಲಾಗಿತ್ತು.
Aftab Poonawala, accused of murdering his live-in partner Shraddha Walkar in May 2022, is reportedly on the hit list of the Lawrence Bishnoi gang, according to Mumbai Police sources.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm