ಬ್ರೇಕಿಂಗ್ ನ್ಯೂಸ್
27-11-24 02:00 pm HK News Desk ದೇಶ - ವಿದೇಶ
ಪೋರ್ಟ್ ಬ್ಲೇರ್, ನ 27: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮೀನುಗಾರಿಕಾ ದೋಣಿಯಲ್ಲಿ ಸಾಗಿಸುತ್ತಿದ್ದ ಅಂದಾಜು ₹36,000 ಕೋಟಿ ಮೌಲ್ಯದ ಸುಮಾರು 6,000 ಕೆ.ಜಿ 'ಮೆಥಂಫೆಟಮೀನ್' ಎಂಬ ಮಾದಕವಸ್ತುವನ್ನ ವಶಪಡಿಸಿಕೊಳ್ಳಲಾಗಿದೆ.
ದೇಶದ ಇತಿಹಾಸದಲ್ಲೇ ಸಾಗರದಲ್ಲಿ ನಡೆದ ಅತಿ ದೊಡ್ಡ ಕಾರ್ಯಾಚರಣೆ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೈರನ್ ದ್ವೀಪದ ಸಮೀಪದಿಂದ ಥಾಯ್ಲೆಂಡ್ಗೆ ನಿಷೇಧಿತ ಮಾದಕವಸ್ತುಗಳನ್ನು ಸಾಗಿಸಲು ಯತ್ನಿಸಲಾಗಿತ್ತು. ಘಟನೆ ಸಂಬಂಧ ಮ್ಯಾನ್ಮಾರ್ ಮೂಲದ ಆರು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.



ತಾಂತ್ರಿಕ ತೊಂದರೆ ಎದುರಾಗಿ ಮೀನುಗಾರಿಕಾ ದೋಣಿ, ಥಾಯ್ಲೆಂಡ್ನತ್ತ ಸಾಗುವ ಬದಲು ಭಾರತೀಯ ಸಮುದ್ರದತ್ತ ಚಲಿಸಿತ್ತು ಎಂದು ಅಂದಾಜಿಸಲಾಗಿದೆ ಎಂದು ಡಿಜಿಪಿ ತಿಳಿಸಿದ್ದಾರೆ.
ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ. ಬಂಧಿತರಿಂದ ಸ್ಯಾಟಲೈಟ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ರಿಸ್ಮಸ್, ಹೊಸವರ್ಷಾಚರಣೆ ಆಗಮಿಸುತ್ತಿರುವಂತೆಯೇ ಥಾಯ್ಲೆಂಡ್ನಲ್ಲಿ ಮಾದಕವಸ್ತುಗಳಿಗೆ ಭಾರಿ ಬೇಡಿಕೆಯಿದೆ. ಟೀ ಪೊಟ್ಟಣದಲ್ಲಿ ಡ್ರಗ್ಸ್ ಪ್ಯಾಕ್ ಮಾಡಲಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
The nearly 6,000 kg of narcotic drug Methamphetamine seized from a fishing trawler in Andaman and Nicobar Islands is the largest maritime seizure in India and valued approximately at Rs 36,000 crore, officials said on Tuesday.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm