ಬ್ರೇಕಿಂಗ್ ನ್ಯೂಸ್
29-11-24 06:22 pm HK News Desk ದೇಶ - ವಿದೇಶ
ನವದೆಹಲಿ, ನ.29: ಉತ್ತರ ಪ್ರದೇಶದ ವಿವಾದಿತ ಸಂಭಾಲ್ ಜುಮ್ಮಾ ಮಸೀದಿ ಕುರಿತು ಸರ್ವೆ ನಡೆಸುವಂತೆ ಸ್ಥಳೀಯ ಕೋರ್ಟ್ ನೀಡಿರುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ.26ರಂದು ಸ್ಥಳೀಯ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಸಂಭಾಲ್ ನಲ್ಲಿ ಗಲಭೆ ಉಂಟಾಗಿದ್ದು, ಐವರು ಮೃತಪಟ್ಟಿದ್ದರು. ಸ್ಥಳೀಯ ಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ್ದ ಈದ್ಗಾ ಕಮಿಟಿಗೆ, ನೀವು ಹೈಕೋರ್ಟಿನಲ್ಲಿ ಪ್ರಶ್ನೆ ಮಾಡಿ. ಗಲಭೆಗೆ ಆಸ್ಪದ ಕೊಡಬೇಡಿ, ಅಲ್ಲಿ ವರೆಗೆ ಸ್ಥಳೀಯ ಕೋರ್ಟಿನ ಆದೇಶಕ್ಕೆ ತಡೆ ನೀಡುವುದಾಗಿ ಹೇಳಿದೆ.
ಮುಖ್ಯ ನ್ಯಾಯಾಧೀಶ ಸಂಜೀವ್ ಖನ್ನಾ ಮತ್ತು ನ್ಯಾ. ಸಂಜಯ್ ಕುಮಾರ್ ಅವರಿದ್ದ ಪೀಠವು, ಸರ್ವೆ ನಡೆಸುವ ಕಮಿಷನರ್ ಗೆ ಮುಚ್ಚಿದ ಲಕೋಟೆಯಲ್ಲಿ ಸರ್ವೆ ವರದಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು. ಯಾವುದೇ ಕಾರಣಕ್ಕೂ ಅದರ ಮಾಹಿತಿ ಲೀಕ್ ಆಗಬಾರದು ಎಂದು ಷರತ್ತು ವಿಧಿಸಿದೆ. ಮಸೀದಿ ಸರ್ವೆ ನಡೆಸುವುದಕ್ಕೆ ಸ್ಥಳೀಯ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಂಭಾಲ್ ಶಾಹಿ ಜುಮ್ಮಾ ಮಸ್ಜಿದ್ ಕಮಿಟಿ ಸುಪ್ರೀಂ ಮೆಟ್ಟಿಲೇರಿತ್ತು. 1526ರಲ್ಲಿ ಮೊಘಲ್ ದೊರೆ ಬಾಬರನು ಸಂಭಾಲ್ ನಲ್ಲಿದ್ದ ದೇವಸ್ಥಾನವನ್ನು ಕೆಡವಿ ಮಸೀದಿ ಕಟ್ಟಿದ್ದ ಎಂದು ಕೋರ್ಟಿನಲ್ಲಿ ಅಪೀಲು ಮಾಡಲಾಗಿತ್ತು.

ಹೈಕೋರ್ಟಿನಲ್ಲಿ ಮೂರು ದಿನದೊಳಗೆ ಮಸೀದಿ ಕಮಿಟಿಯ ಅರ್ಜಿ ಸ್ವೀಕರಿಸುವಂತೆ ಉಚ್ಛ ನ್ಯಾಯಾಲಯ ಸೂಚಿಸಿದೆ. ಈ ನಡುವೆ, ಮಸೀದಿ ಕಮಿಟಿಯ ಅರ್ಜಿ ವಿಚಾರಣೆಯನ್ನು ಜ.6ಕ್ಕೆ ಮುಂದೂಡಿದೆ. ಇದಲ್ಲದೆ, ಸಂಭಾಲ್ ಜಿಲ್ಲಾಡಳಿತವು ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವುದಕ್ಕೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದ್ದು, ನಾವು ಹಿಂಸೆ ಆಗುವುದನ್ನು ಬಯಸುವುದಿಲ್ಲ. ತಕ್ಷಣವೇ ಮಧ್ಯಸ್ಥಿಕೆ ಕಮಿಟಿಯನ್ನು ನೇಮಕ ಮಾಡಬೇಕು ಎಂದು ಹೇಳಿದೆ. ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಹರಿಹರ ದೇವಸ್ಥಾನ ಇತ್ತೆಂದು ಹೇಳಲಾಗಿದೆ.
ಈ ನಡುವೆ, ಸಂಭಾಲ್ ಗಲಭೆ ಬಗ್ಗೆ ತನಿಖೆ ನಡೆಸಲು ಅಲಹಾಬಾದ್ ಹೈಕೋರ್ಟಿನ ಮಾಜಿ ನ್ಯಾಯಾಧೀಶ ದೇವೇಂದ್ರ ಕುಮಾರ್ ಅರೋರ ನೇತೃತ್ವದಲ್ಲಿ ಮೂರು ಸದಸ್ಯರ ಕಮಿಟಿಯನ್ನು ಉತ್ತರ ಪ್ರದೇಶ ಸರಕಾರ ನೇಮಕ ಮಾಡಿದೆ. ತಂಡದಲ್ಲಿ ಮಾಜಿ ಐಪಿಎಸ್ ಅಧಿಕಾರಿಗಳಾದ ಅಮಿತ್ ಮೋಹನ್ ಪ್ರಸಾದ್, ಅರವಿಂದ ಕುಮಾರ್ ಜೈನ್ ಅವರು ಇದ್ದಾರೆ. ಎರಡು ತಿಂಗಳೊಳಗೆ ವರದಿ ನೀಡುವಂತೆ ಸರಕಾರ ಆದೇಶ ಮಾಡಿದೆ. ಸರ್ವೆ ನಡೆಸುವಂತೆ ಆದೇಶಿಸಿದ ಬೆನ್ನಲ್ಲೇ ಭಾರೀ ಕಲ್ಲು ತೂರಾಟ, ಹಿಂಸಾಚಾರ ನಡೆದಿತ್ತು.
The Supreme Court on Friday (November 29, 2024) gave a stern instruction to the Uttar Pradesh Police and Sambhal district administration to be “totally, absolutely neutral” and maintain peace after a civil court-ordered survey to verify claims of a mosque built over a destroyed temple in the 16th century, unleashed violence, loss of lives, arrests amidst communal tension.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm