ಬ್ರೇಕಿಂಗ್ ನ್ಯೂಸ್
03-12-24 01:46 pm HK News Desk ದೇಶ - ವಿದೇಶ
ತಿರುವಣ್ಣಾಮಲೈ, ಡಿ 03: ‘ಫೆಂಜಲ್’ ಚಂಡಮಾರುತದ ಪರಿಣಾಮ ಸುರಿದ ನಿರಂತರ ಮಳೆಯಿಂದಾಗಿ ಮನೆಯೊಂದರ ಮೇಲೆ ಬೃಹತ್ ಬಂಡೆಯೊಂದು ಬಿದ್ದು ಐವರು ಮಕ್ಕಳು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.
ಎನ್ಡಿಆರ್ಎಫ್ ತಂಡ ಮತ್ತು ಪೊಲೀಸ್ ಸಿಬ್ಬಂದಿಯ ಸತತ ಕಾರ್ಯಾಚರಣೆ ಬಳಿಕ ಅವಶೇಷಗಳಡಿ ಸಿಲುಕಿದ್ದ ಮಗು ಸೇರಿದಂತೆ ಐವರ ಶವಗಳನ್ನು ಹೊರತೆಗೆದಿದ್ದಾರೆ. ಇನ್ನು ಇಬ್ಬರಿಗಾಗಿ ಶೋಧ ಮುಂದುವರಿದಿದೆ.
ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಫೆಂಜಲ್ ಚಂಡಮಾರುತದ ಪರಿಣಾಮ ಉಂಟಾದ ಮಳೆಯಿಂದಾಗಿ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಾದ ತಿರುವಳ್ಳೂರ್, ಕಾಂಚೀಪುರಂ ಮತ್ತು ಚೆಂಗಲ್ಪಟ್ಟುನಲ್ಲಿ ಚಂಡಮಾರುತವು ಮೊದಲು ಪ್ರಭಾವ ಬೀರಿತ್ತು. ನಂತರ ತಮಿಳುನಾಡಿನ ವಿಲ್ಲುಪುರಂ, ಕಡಲೂರು ಮತ್ತು ಪುದುಚೇರಿಯತ್ತ ಸಾಗಿ ಅಧಿಕ ಮಳೆ ಸುರಿಸಿದೆ. ಬಳಿಕ ತಿರುವಣ್ಣಮಲೈ, ರಾಣಿಪೇಟ್, ವೆಲ್ಲೂರು, ಧರ್ಮಪುರಿ, ಕೃಷ್ಣಗಿರಿ, ಸೇಲಂನಲ್ಲೂ ಮಳೆ ಸುರಿಸಿದೆ.
ಉತ್ತರ ತಮಿಳುನಾಡಿನ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಲ್ಲುಪುರಂ ಮತ್ತು ಕಡಲೂರಿನ ಹಲವು ಕಡೆಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ವಾಹನಗಳು ಎರಡು ಅಡಿವರೆಗೆ ಮುಳುಗಿದ್ದವು. ಹಲವೆಡೆ ಮನೆಗಳು ಮುಳುಗಿದ್ದು, ಮರಗಳು ಬುಡಮೇಲಾಗಿ ಉರುಳಿ ಬಿದ್ದಿವೆ.
ಭಾರಿ ಮಳೆಯ ಪರಿಣಾಮ ತಿರುವಣ್ಣಾಮಲೈ ಸಮೀಪದ ಸೇತುವೆಯೊಂದು ಭಾಗಶಃ ಮುರಿದುಬಿದ್ದಿದೆ. ಕರುಣಾಪುರಂ ಸಮೀಪದ ಸೇತುವೆ ಮುಳುಗಿ ಸಮೀಪದ ಪ್ರದೇಶಗಳಿಗೆ ನೀರು ನುಗ್ಗಿದೆ. ಗಿಂಗಿ ಸರ್ಕಾರಿ ಆಸ್ಪತ್ರೆಗೆ ನೀರು ನುಗ್ಗಿದ್ದು, ಎಚ್ಚೆತ್ತ ಅಧಿಕಾರಿಗಳು ಕೂಡಲೇ ರೋಗಿಗಳನ್ನು ಸ್ಥಳಾಂತರಿಸಿದ್ದಾರೆ.
ಭಾನುವಾರ ಚಂಡಮಾರುತದ ಕಾರಣದಿಂದಾಗಿ ಪುದುಚೇರಿ, ತಮಿಳುನಾಡಿನಲ್ಲಿ ತಲಾ ನಾಲ್ವರು ಮೃತಪಟ್ಟಿದ್ದರು.
A second landslide hit the Tamil Nadu temple town of Tiruvannamalai Monday afternoon, a day after a first led to a boulder falling on a residential building and killing a family of seven people. The first took place Sunday at 4.30 pm on the lower slopes of the famous Annamalaiyar Hill after heavy rainfall - courtesy Cyclone Fengal, which crossed the coast Saturday afternoon near capital Chennai - battered the district.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm