ಬ್ರೇಕಿಂಗ್ ನ್ಯೂಸ್
20-12-24 05:01 pm HK News Desk ದೇಶ - ವಿದೇಶ
ನವದೆಹಲಿ, ಡಿ.20: ಇತ್ತೀಚಿಗೆ ದೇಶಾದ್ಯಂತ ಮಂದಿರ-ಮಸೀದಿ ವಿವಾದ ಹೊಸ ಚರ್ಚೆ, ಅಪಸ್ವರಕ್ಕೆ ಕಾರಣವಾಗಿರುವ ಹೊತ್ತಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ರಾಮ ಮಂದಿರದಂತಹ ವಿವಾದಗಳನ್ನು ಎಲ್ಲೆಂದರಲ್ಲಿ ಹುಟ್ಟುಹಾಕಬೇಡಿ. ಈ ಹೊಸ ವಿವಾದಗಳು ದೇಶದ ಸೌಹಾರ್ದ ನೆಲೆಯಲ್ಲಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.
ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋಹನ್ ಭಾಗವತ್ ಅಂತರ್ಗತ ಸಮಾಜವನ್ನು ಪ್ರತಿಪಾದಿಸುತ್ತ ದೇಶ ಸೌಹಾರ್ದಯುತವಾಗಿ ಬದುಕಬಲ್ಲದು ಎಂಬುದನ್ನು ಜಗತ್ತಿಗೆ ಸಾರುವ ಅಗತ್ಯವಿದೆ ಎಂದರು. ರಾಮಕೃಷ್ಣ ಮಿಷನ್ ನಲ್ಲಿ ಕ್ರಿಸ್ ಮಸ್ ಆಚರಿಸಲಾಗುತ್ತದೆ. ಹಿಂದು ಮಠಗಳಲ್ಲಿ ಇಫ್ತಾರ್ ಮಾಡಲಾಗುತ್ತದೆ. ನಾವು ಹಿಂದೂಗಳಾಗಿರುವುದರಿಂದ ಮಾತ್ರ ಇದನ್ನು ಮಾಡಲು ಸಾಧ್ಯ ಎಂದರು.
ದೇಶದಲ್ಲಿ ಇತ್ತೀಚೆಗೆ ಮಂದಿರ- ಮಸೀದಿ ವಿವಾದ ಏಳುತ್ತಿರುವುದನ್ನು ಪ್ರಸ್ತಾಪಿಸಿದ ಅವರು, ರಾಮ ಮಂದಿರ ನಿರ್ಮಾಣದ ನಂತರ ಕೆಲವರು ಹೊಸ ಜಾಗಗಳಲ್ಲಿ ಇದೇ ವಿಚಾರಗಳನ್ನು ಮುಂದಿಟ್ಟು ಹಿಂದೂಗಳ ನಾಯಕರಾಗಲು ಬಯಸುತ್ತಾರೆ. ಆದರೆ ಇದನ್ನು ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ಉತ್ತರ ಪ್ರದೇಶದ ಸಂಭಾಲ್ನ ಶಾಹಿ ಜಾಮಿಯಾ ಮಸೀದಿ ಮತ್ತು ರಾಜಸ್ಥಾನದ ಅಜ್ಮೀರ್ ಷರೀಫ್ನಂತಹ ಧಾರ್ಮಿಕ ಸ್ಥಳಗಳ ಮೂಲದ ಬಗ್ಗೆ ವಿವಾದಗಳೆದ್ದಿರುವ ಹಿನ್ನೆಲೆಯಲ್ಲಿ ಭಾಗವತ್ ಈ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ನಾವು ಬಹಳ ಹಿಂದಿನಿಂದಲೂ ಸಾಮರಸ್ಯದಿಂದ ಬದುಕುತ್ತಿದ್ದೇವೆ. ಈ ಸದ್ಭಾವನೆಯನ್ನು ನಾವು ಜಗತ್ತಿಗೆ ಒದಗಿಸಬೇಕಾದರೆ, ನಾವು ಅದನ್ನು ಮಾದರಿಯಾಗಿಟ್ಟುಕೊಳ್ಳಬೇಕು. ರಾಮ ಮಂದಿರವನ್ನು ನಿರ್ಮಿಸಲಾಗಿದೆ. ಏಕೆಂದರೆ ಅದು ಎಲ್ಲಾ ಹಿಂದೂಗಳ ನಂಬಿಕೆಯ ವಿಷಯವಾಗಿತ್ತು ಎಂದು ಹೇಳಿದ ಭಾಗವತ್, ಯಾವುದೇ ನಿರ್ದಿಷ್ಟ ವಿವಾದವನ್ನು ಉಲ್ಲೇಖಿಸದೆ, ಪ್ರತಿದಿನ ಹೊಸ ಪ್ರಕರಣ, ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಅದನ್ನು ಬಿಟ್ಟು ನಾವು ಒಟ್ಟಿಗೆ ಬಾಳಬಹುದು ಎಂಬುದನ್ನು ಭಾರತ ತೋರಿಸಬೇಕಾಗಿದೆ ಎಂದರು.
RSS chief Mohan Bhagwat on Thursday took a jibe at aspiring Hindu leaders for stirring up "Ram-temple-like" disputes at various places across India.He said that India should be set as an example of inclusivity and harmony. Calling attention to India's pluralistic society, the RSS chief said that Christmas is observed in Swami Ramakrishnan Mission, emphasising that "only we can do this because we are Hindus”.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 12:43 pm
Mangalore Correspondent
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
17-06-25 12:10 pm
HK News Desk
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm