ಬ್ರೇಕಿಂಗ್ ನ್ಯೂಸ್
26-12-24 11:15 pm HK News Desk ದೇಶ - ವಿದೇಶ
ನವದೆಹಲಿ, ಡಿ.26: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಅಸ್ವಸ್ಥರಾಗಿದ್ದು ಕೂಡಲೇ ಅವರನ್ನು ಏಮ್ಸ್ ಆಸ್ಪತ್ರೆಗೆ ಒಯ್ಯಲಾಯಿತು. ಅಲ್ಲಿನ ವೈದ್ಯರು ನಿಧನರಾಗಿರುವ ಬಗ್ಗೆ ಖಚಿತ ಪಡಿಸಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಯುಪಿಎ 1 ಮತ್ತು 2ನೇ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅದಕ್ಕೂ ಮುನ್ನ ಆರ್ಥಿಕ ತಜ್ಞರಾಗಿ ಕೆಲಸ ಮಾಡಿದ್ದರು. ಆರ್ ಬಿಐ ಗವರ್ನರ್ ಆಗಿ, ಹಣಕಾಸು ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಪಂಜಾಬ್ ಮೂಲದ ಮನಮೋಹನ್ ಸಿಂಗ್ 1948ರಲ್ಲಿ ಮೆಟ್ರಿಕ್ಯುಲೇಶನ್ ಪಾಸ್ ಮಾಡಿದ್ದರು. ಆನಂತರ 1957ರಲ್ಲಿ ಲಂಡನ್ನಿನ ಕೇಂಬ್ರಿಜ್ ಯುನಿವರ್ಸಿಟಿಯಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಪದವಿ ಪಡೆದಿದ್ದರು. ಆನಂತರ ಅಮೆರಿಕದ ಆಕ್ಸ್ ಫರ್ಡ್ ಯುನಿವರ್ಸಿಟಿಯಲ್ಲಿ 1962ರಲ್ಲಿ ಇಕನಾಮಿಕ್ಸ್ ನಲ್ಲಿ ಎಂಫಿಲ್ ಪೂರೈಸಿದ್ದರು.
![]()

![October 1991 :: Finance Minister Dr. Manmohan Singh With MD of International Monetary Fund, Mr. Michel Camdessu [599X400] : r/IndiaSpeaks](https://i.redd.it/lbceoiayeed01.jpg)



1971ರಲ್ಲಿ ದೇಶದ ಆರ್ಥಿಕ ಸಲಹೆಗಾರರಾಗಿದ್ದ ಅವರು ನಿಧಾನಕ್ಕೆ ಕಾಂಗ್ರೆಸ್ ಜೊತೆಗೆ ಪ್ರಭಾವಿತರಾಗಿದ್ದರು. 1991ರಲ್ಲಿ ರಾಜ್ಯಸಭೆ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ್ದರು. 1998-2004ರಲ್ಲಿ ವಾಜಪೇಯಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಾಗಿದ್ದರು. 1991ರಲ್ಲಿ ನರಸಿಂಹ ರಾವ್ ಪ್ರಧಾನಿಯಾಗಿದ್ದಾಗಲೂ ಆರ್ಥಿಕ ಸಚಿವರಾಗಿ ದೇಶ ಜಾಗತೀಕರಣದತ್ತ ತೆರೆದುಕೊಳ್ಳಲು ಪ್ರಮುಖ ಕಾರಣಕರ್ತರಾಗಿದ್ದರು. 2004ರಲ್ಲಿ ಸೋನಿಯಾ ಗಾಂಧಿ ಪ್ರಧಾನಿಯಾಗಲ್ಲ ಎಂದು ತಿಳಿಯುತ್ತಿದ್ದಂತೆ ಗಾಂಧಿ ಕುಟುಂಬಕ್ಕೆ ನಿಷ್ಠರಾಗಿದ್ದ ಸಿಂಗ್ ಅವರನ್ನು ಪ್ರಧಾನಿ ಮಾಡಲಾಗಿತ್ತು.
Former Prime Minister and eminent economist Dr Manmohan Singh passed away on Thursday at the age of 92 in Delhi. Dr Singh, who had been admitted to the All India Institute of Medical Sciences (AIIMS) following a deterioration in his health, was receiving treatment in the hospital’s emergency department when the news of his demise broke.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm