ಬ್ರೇಕಿಂಗ್ ನ್ಯೂಸ್
27-12-24 10:38 am Yatish Kumar, Headline Karnataka ದೇಶ - ವಿದೇಶ
ನವದೆಹಲಿ, ಡಿ 27: ಮನಮೋಹನ್ ಸಿಂಗ್ ಆರ್ಥಿಕ ಸಲಹೆಗಾರರಾಗಿ, ಆರ್ಥಿಕ ತಜ್ಞರಾಗಿ, ಆರ್ಬಿಐ ಗವರ್ನರ್ ಆಗಿ, ಪ್ರಧಾನಿಯಾಗಿ ಅವರ ಹೆಜ್ಜೆ ಗುರುತು ಭಾರತದಲ್ಲಿ ಅಚ್ಚಳಿಯದೇ ಇರುತ್ತದೆ. ಭಾರತದ ಆಡಳಿತ, ಆರ್ಥಿಕತೆಗೆ ಅವರ ಕೊಡುಗೆ ಅಪಾರ. ಅಂದಹಾಗೆ ಮನಮೋಹನ್ ಸಿಂಗ್ ಜನಿಸಿದ್ದು ಭಾರತದಲ್ಲಿ ಅಲ್ಲ ಎನ್ನುವುದು ನಿಮಗೆ ಗೊತ್ತಿರಲಿಕ್ಕಿಲ್ಲ! ಹೌದು, ಮನಮೋಹನ್ ಸಿಂಗ್ ಜನಿಸಿದ್ದು ಪಾಕಿಸ್ತಾನದಲ್ಲಿ!
ಮನಮೋಹನ್ ಸಿಂಗ್ ಜನಿಸಿದ್ದು ಪಾಕಿಸ್ತಾನದಲ್ಲಿ
ಇಂದು ಪಾಕಿಸ್ತಾನದಲ್ಲಿರುವ (Pakistan) ಪಶ್ಚಿಮ ಪಂಜಾಬ್ನ (West Punjab) ಗಾಹ್ನಲ್ಲಿ ಮನಮೋಹನ್ ಸಿಂಗ್ ಜನಿಸಿದರು. ಜನಿಸಿದ ಸಿಂಗ್ ಅವರ ಕುಟುಂಬವು 1947 ರಲ್ಲಿ ವಿಭಜನೆಯ ಸಮಯದಲ್ಲಿ ಭಾರತಕ್ಕೆ ವಲಸೆ ಬಂದಿತು! ಗುರ್ಮುಖ್ ಸಿಂಗ್ ಮತ್ತು ಅಮೃತ್ ಕೌರ್ ದಂಪತಿಗಳಿಗೆ 26 ಸೆಪ್ಟೆಂಬರ್ 1932 ರಂದು ಸಾಂಪ್ರದಾಯಕ ಸಿಖ್ ಕುಟುಂಬದಲ್ಲಿ ಜನಿಸಿದರು. ಅವರು ಚಿಕ್ಕವರಿದ್ದಾಗಲೇ ಅವರ ತಾಯಿ ತೀರಿಕೊಂಡರು. ಈ ವೇಳೆ ತಂದೆಯ ತಾಯಿ ಅವರನ್ನು ಬೆಳೆಸಿದಳು. ಹೀಗಾಗಿ ಮನಮೋಹನ್ ಸಿಂಗ್ ಅಜ್ಜಿಯ ಮುದ್ದಿನ ಮೊಮ್ಮಗರಾಗಿದ್ದರು.
ಉರ್ದು ಭಾಷೆಯಲ್ಲಿ ಸಿಂಗ್ ಪಾಂಡಿತ್ಯ
ಅವರ ಆರಂಭಿಕ ಶಾಲಾ ಶಿಕ್ಷಣವು ಉರ್ದು ಮಾಧ್ಯಮದಲ್ಲಿತ್ತು. ಅವರಿಗೆ ಉರ್ದು ಮೇಲೆ ಸಾಕಷ್ಟು ಹಿಡಿತ ಇತ್ತ. ಹಲವು ವರ್ಷಗಳ ನಂತರ ಪ್ರಧಾನ ಮಂತ್ರಿಯಾಗಿ ಅಧಿಕಾರಕ್ಕೆ ಬಂದರೂ ಕೂಡ ಅವರು ತಮ್ಮ ಹಿಂದಿ ಭಾಷಣಗಳನ್ನು ಉರ್ದು ಲಿಪಿಯಲ್ಲಿ ಬರೆದುಕೊಳ್ಳುತ್ತಿದ್ದರು. ಆದರೂ ಕೆಲವೊಮ್ಮೆ ಅವರು ತಮ್ಮ ಮಾತೃಭಾಷೆಯಾದ ಪಂಜಾಬಿಯನ್ನು ಬರೆಯಲು ಬಳಸುವ ಗುರುಮುಖಿ ಲಿಪಿಯನ್ನು ಸಹ ಬಳಸುತ್ತಿದ್ದರು.
ಅರ್ಥಶಾಸ್ತ್ರದಲ್ಲಿ ಮನಮೋಹನ್ ಸಿಂಗ್ ಅಧ್ಯಯನ
ಭಾರತದ ವಿಭಜನೆಯ ನಂತರ, ಅವರ ಕುಟುಂಬವು ಭಾರತದ ಹಲ್ದ್ವಾನಿಗೆ ವಲಸೆ ಬಂದಿತು. 1948ರಲ್ಲಿ ಅವರು ಅಮೃತಸರಕ್ಕೆ ಸ್ಥಳಾಂತರಗೊಂಡರು, ಅಲ್ಲಿ ಅವರು ಅಮೃತಸರದ ಹಿಂದೂ ಕಾಲೇಜಿನಲ್ಲಿ ಅಧ್ಯಯನ ಮಾಡಿದರು. ಅವರು ಪಂಜಾಬ್ ವಿಶ್ವವಿದ್ಯಾನಿಲಯಕ್ಕೆ ಸೇರಿದರು, ನಂತರ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು ಮತ್ತು ಕ್ರಮವಾಗಿ 1952 ಮತ್ತು 1954 ರಲ್ಲಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದರು. ಅವರ ಶೈಕ್ಷಣಿಕ ವೃತ್ತಿಜೀವನದುದ್ದಕ್ಕೂ ಮೊದಲ ಸ್ಥಾನದಲ್ಲಿ ನಿಂತಿದ್ದು ವಿಶೇಷ.
ಆಕ್ಸ್ಫರ್ಡ್ ವಿವಿಯಲ್ಲಿ ಪದವಿ
ಅವರು 1957 ರಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ತಮ್ಮ ಅರ್ಥಶಾಸ್ತ್ರದ ಟ್ರಿಪೋಸ್ ಅನ್ನು ಪೂರ್ಣಗೊಳಿಸಿದರು. ಅವರು ಸೇಂಟ್ ಜಾನ್ಸ್ ಕಾಲೇಜಿನ ಸದಸ್ಯರಾಗಿದ್ದರು. ಅಲ್ಲಿ ಅವರು 1957ರಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು. ನಂತರ ಅವರು 1962ರಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ನಫ್ ಫೀಲ್ಡ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಡಿ.ಫಿಲ್ ಗೌರವ ಪಡೆದರು.
ಅಧ್ಯಾಪಕರಾಗಿಯೂ ಡಾ. ಸಿಂಗ್ ಸೇವೆ
ಡಾ ಮನಮೋಹನ್ ಸಿಂಗ್ ಅವರು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಹಾಗೂ ದೆಹಲಿಯ ಪ್ರತಿಷ್ಠಿತ ಆರ್ಥಿಕ ಶಾಲೆಯಲ್ಲಿ ಬೋಧಕರಾಗಿ ಕೆಲಸ ಮಾಡಿದ್ರು. ಬಳಿಕ ಯು.ಎನ್.ಸಿ.ಟಿ.ಎ.ಡಿ. ಸಚಿವಾಲಯದಲ್ಲಿ ಅವರು ಕೆಲಕಾಲ ಸೇವೆ ಸಲ್ಲಿಸಿದ್ದರು. ಇದರ ಫಲವಾಗಿ 1987ರಿಂದ 1990ರವರೆಗೆ ಅವರನ್ನು ಜೀನಿವಾದಲ್ಲಿನ ದಕ್ಷಿಣ ಆಯೋಗಕ್ಕೆ ಮಹಾಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
Dr. Singh, a distinguished economist, played a pivotal role in sustaining the nation’s economy, particularly during the economic crisis of the 2000s. He is best remembered for his landmark contributions as Finance Minister under Prime Minister P.V. Narasimha Rao in 1991, when he spearheaded economic reforms that opened up India’s economy to the world.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am