ಬ್ರೇಕಿಂಗ್ ನ್ಯೂಸ್
08-08-20 03:22 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಆಗಸ್ಟ್ 08: ಮುನ್ನಾರ್ನಲ್ಲಿ ಭೂಕುಸಿತ ಉಂಟಾಗಿದ್ದು, 24 ಮಂದಿ ಮೃತಪಟ್ಟಿದ್ದು, 50 ಮಂದಿ ಕಾಣೆಯಾಗಿದ್ದಾರೆ. ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಿಸಿದ್ದಾರೆ.
ಇನ್ನು ಅವಶೇಷಗಳಡಿಯಲ್ಲಿ 80 ಮಂದಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಧರೆಗುರುಳಿದ್ದು ಹಲವರು ಸಿಕ್ಕಿಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ನಸುಕಿನ ಜಾವ ಈ ದುರಂತ ಸಂಭವಿಸಿದ್ದರಿಂದ ನಿದ್ದೆಯಲ್ಲಿದ್ದ ಜನರಿಗೆ ಬೆಟ್ಟ ಕುಸಿದು ಬೀಳುವಾಗ ಎದ್ದು ಓಡಿಹೋಗಿ ತಪ್ಪಿಸಿಕೊಳ್ಳಲು ಸಮಯ ಇರಲಿಲ್ಲ. ಇದರಿಂದ ಸಾವು ನೋವು ಹೆಚ್ಚಾಗಿದೆ. ಭಾರೀ ಮಳೆಗೆ ಪ್ರವಾಹ ಉಂಟಾಗಿ ಪೆರಿಯವರ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ರಕ್ಷಣಾ ಪಡೆಗಳಿಗೆ ದುರ್ಘಟನೆ ನಡೆದ ಸ್ಥಳಕ್ಕೆ ಬೇಗ ತಲುಪಲು ಸಾಧ್ಯವಾಗಿಲ್ಲ.
ಇದುವರೆಗೆ 24 ಮಂದಿಯ ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಏಳು ಮಂದಿಯನ್ನು ಮಣ್ಣಿನಡಿಯಿಂದ ರಕ್ಷಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕ್ಕಿಹಾಕಿಕೊಂಡವರಲ್ಲಿ ಬಹುತೇಕರು ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕೇರಳಕ್ಕೆ ತೆರಳಿ ಅಲ್ಲಿಯ ಜನರಿಗೆ ಸಹಾಯ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ಟರ್ನಲ್ಲಿ ಮನವಿ ಮಾಡಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm