ಬ್ರೇಕಿಂಗ್ ನ್ಯೂಸ್
03-01-25 11:57 am HK News Desk ದೇಶ - ವಿದೇಶ
ನವದೆಹಲಿ, ಜ.3: ಅಮೆರಿಕದ ನ್ಯೂ ಓರ್ಲಿಯನ್ಸ್ ನಗರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನರ ಮೇಲೆ ಟ್ರಕ್ ನುಗ್ಗಿಸಿ ವಿಧ್ವಂಸಕ ಕೃತ್ಯ ಎಸಗಿದ ಪ್ರಕರಣದಲ್ಲಿ ಶಂಕಿತ ಉಗ್ರನನ್ನು ಪತ್ತೆ ಮಾಡಲಾಗಿದ್ದು, ಐಸಿಸ್ ಪ್ರೇರಿತ 42 ವರ್ಷದ ಶಂಸುದ್ದೀನ್ ಜಬ್ಬಾರ್ ಎಂದು ಗುರುತಿಸಲಾಗಿದೆ. ಈತ ಈ ಹಿಂದೆ ಅಮೆರಿಕಾದ ಮಿಲಿಟರಿಯಲ್ಲಿ ಕೆಲಸ ಮಾಡಿದ್ದ ಎನ್ನುವುದನ್ನೂ ಪತ್ತೆ ಮಾಡಲಾಗಿದೆ.
ಸೇನೆಯಲ್ಲಿ ಕೆಲಸ ಬಿಟ್ಟ ಬಳಿಕ ಟೆಕ್ಸಾಸ್ ನಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಆಗಿದ್ದ. ನಾಲ್ಕು ವರ್ಷಗಳ ಹಿಂದೆ ಯೂಟ್ಯೂಬ್ನಲ್ಲಿ ಪೋಸ್ಟ್ ಮಾಡಿದ್ದ ವೀಡಿಯೊದಲ್ಲಿ ಜಬ್ಬಾರ್ ತನ್ನನ್ನು "ತೀವ್ರಗಾಮಿ" ಎನ್ನುವ ನೆಲೆಯಲ್ಲಿ ಸಂಬೋಧಿಸಿದ್ದ. 2007 ರಿಂದ 2015 ರ ವರೆಗೆ ಅಮೆರಿಕ ಸೇನೆಯ ಮಾನವ ಸಂಪನ್ಮೂಲ ಮತ್ತು ಐಟಿ ವಿಭಾಗದಲ್ಲಿ ಕೆಲಸ ಮಾಡಿದ್ದ. 2009- 2010ರ ನಡುವೆ ಅಫ್ಘಾನಿಸ್ತಾನದಲ್ಲಿ ಅಮೆರಿಕದ ಯೋಧನಾಗಿ ನಿಯೋಜಿಸಲ್ಪಟ್ಟಿದ್ದ ಎಂದು ಸೇನಾ ವಕ್ತಾರರು ಹೇಳಿದ್ದಾರೆ. ಜಬ್ಬಾರ್ ಈ ವೇಳೆ ಸ್ಟಾಫ್ ಸಾರ್ಜೆಂಟ್ ಹುದ್ದೆಯನ್ನು ಹೊಂದಿದ್ದ. 2020ರಲ್ಲಿ ಸೇನೆಯಿಂದ ನಿವೃತ್ತಿ ಪಡೆದು ರಿಯಲ್ ಎಸ್ಟೇಟ್ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ.


ಹೊಸ ವರ್ಷದ ದಾಳಿಯ ಕೆಲವೇ ಗಂಟೆಗಳ ಮೊದಲು, ಜಬ್ಬಾರ್ ಐಸಿಸ್ನಿಂದ ಸ್ಫೂರ್ತಿ ಪಡೆದಿರುವುದನ್ನು ಸೂಚಿಸುವ ವೀಡಿಯೊಗಳನ್ನು ಆನ್ಲೈನ್ನಲ್ಲಿ ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಅಮೆರಿಕದ ಅಧ್ಯಕ್ಷ ಜೋ ಬಿಡನ್ ತಿಳಿಸಿದ್ದಾರೆ. ಅಲ್ಲದೆ, ದಾಳಿಗೆ ಬಳಸಿದ ವಾಹನದಲ್ಲಿ ಐಸಿಸ್ ಉಗ್ರರ ಪರವಾದ ಕಪ್ಪು ಬಾವುಟ ಪತ್ತೆಯಾಗಿದೆ ಎಂದು ಎಫ್ಬಿಐ ತಿಳಿಸಿದೆ.
ನ್ಯೂ ಓರ್ಲಿಯನ್ಸ್ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಜನಸಂದಣಿ ಮೇಲೆ ಜಬ್ಬಾರ್ ಅತಿ ವೇಗದಲ್ಲಿ ಟ್ರಕ್ ನುಗ್ಗಿಸಿದ್ದು ಘಟನೆಯಲ್ಲಿ 15 ಜನರು ಸಾವನ್ನಪ್ಪಿದ್ದರು. ಹಲವಾರು ಜನರು ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಭದ್ರತಾ ಪಡೆಗಳು ಜಬ್ಬಾರ್ ನನ್ನು ಗುಂಡು ಹಾರಿಸಿ ಹೊಡೆದುರುಳಿಸಿದ್ದವು. ಆದರೆ, ತಕ್ಷಣಕ್ಕೆ ಯಾರೀತ, ಯಾವ ಕಾರಣಕ್ಕೆ ಕೃತ್ಯ ಎಸಗಿದ್ದಾನೆಂದು ತಿಳಿದಿರಲಿಲ್ಲ. ಐಸಿಸ್ ಪ್ರೇರಿತ ಆಗಿರುವುದು ಆತನ ಚಟುವಟಿಕೆಯಿಂದ ತಿಳಿದುಬಂದಿದ್ದರೂ, ಈ ಕೃತ್ಯವನ್ನು ತಾನೇ ಮಾಡಿದ್ದಾಗಿ ಐಸಿಸ್ ಉಗ್ರರು ಹೇಳಿಕೊಂಡಿಲ್ಲ.
ಈ ಘಟನೆಯ ಮರುದಿನವೇ ದೈತ್ಯ ಉದ್ಯಮಿ ಅಲಾನ್ ಮಸ್ಕ್ ಒಡೆತನದ ಹೊಟೇಲ್ ಮುಂದೆ ನಿಲ್ಲಿಸಿದ್ದ ವಾಹನವನ್ನು ಸ್ಫೋಟಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟ್ರಂಪ್ ಆಡಳಿತಕ್ಕೆ ಉಗ್ರರು ಕರಿನೆರಳು ಬಿದ್ದಿರುವ ಶಂಕೆ ವ್ಯಕ್ತವಾಗಿದೆ.
Bourbon Street reopened today to a light crowd as tourists and locals veered away from the world-famous destination after an attacker plowed through crowds of revealers, killing more than a dozen people on New Year’s Day.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm