ಬ್ರೇಕಿಂಗ್ ನ್ಯೂಸ್
18-01-25 06:20 pm HK News Desk ದೇಶ - ವಿದೇಶ
ನವದೆಹಲಿ, ಜ.18: ನಷ್ಟದಲ್ಲಿರುವ ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ (ಕೆಐಒಸಿಎಲ್)ಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (ಎನ್ಎಂಡಿಸಿ) ಜತೆಗೆ ವಿಲೀನ ಮಾಡುವ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದಿದ್ದು ಪರಿಶೀಲನೆ ಹಂತದಲ್ಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು ಕುದುರೆಮುಖ ಕಬ್ಬಿಣ ಅದಿರು ಕಂಪನಿ ಕಳೆದ ಕೆಲವು ವರ್ಷಗಳಿಂದ ನಷ್ಟದಲ್ಲಿ ಸಾಗುತ್ತಿದೆ. ಇದನ್ನು ನಷ್ಟದಿಂದ ಲಾಭದತ್ತ ಒಯ್ಯಬೇಕಾಗಿದೆ. ಆದರೆ ಇದನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದೊಟ್ಟಿಗೆ ವಿಲೀನ ಮಾಡಲು ರಾಜ್ಯ ಸರ್ಕಾರದ ಸಹಕಾರ ಬೇಕಾಗುತ್ತದೆ. ಆ ಸಹಕಾರವನ್ನು ಕರ್ನಾಟಕ ಸರ್ಕಾರ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು.
ಕುದುರೆಮುಖ ಕಬ್ಬಿಣ ಅದಿರು ಕಂಪನಿಯಲ್ಲಿ ಅದಿರನ್ನು ಬಳಸಿ ಕಬ್ಬಿಣದ ಉಂಡೆ (ಪೆಲೆಟ್)ಗಳನ್ನು ಉತ್ಪಾದಿಸಲಾಗುತ್ತಿದ್ದು, ಕೇಂದ್ರ ಉಕ್ಕು ಸಚಿವಾಲಯದಡಿ ಕೆಲಸ ಮಾಡುತ್ತದೆ. ಇದು ವಾರ್ಷಿಕವಾಗಿ 2.16 ಲಕ್ಷ ಟನ್ ಕಬ್ಬಿಣ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಆದರೆ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಿಂದ ದೇಶದ ಒಟ್ಟು ಕಬ್ಬಿಣದ ಅದಿರಿನ ಶೇ.20ರಷ್ಟು ಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದರು.
ಇದೇ ವೇಳೆ, ಸಾಲದ ಸುಳಿಯಲ್ಲಿರುವ ಸರ್ಕಾರಿ ಸ್ವಾಮ್ಯದ ಉಕ್ಕು ಕಾರ್ಖಾನೆ ವಿಶಾಖಪಟ್ಟಣದ ರಾಷ್ಟ್ರೀಯ ಇಸ್ಪಾತ್ ನಿಗಮ ನಿಯಮಿತ (ಉಕ್ಕು ಕಾರ್ಖಾನೆ) ಪುನರುಜ್ಜೀವನಕ್ಕೂ ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅದಕ್ಕಾಗಿ 11440 ಕೋಟಿ ರೂ. ವಿನಿಯೋಗಿಸಲು ತೀರ್ಮಾನಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಪೈಕಿ 10,300 ಕೋಟಿ ರೂ. ಮೊತ್ತವನ್ನು ಈಕ್ವಿಟಿ ಷೇರುಗಳಿಂದ ನೀಡಲಾಗುತ್ತದೆ. ಉಳಿದ 1140 ಕೋಟಿ ರೂ. ಮೊತ್ತವನ್ನು ಸಾಲವನ್ನಾಗಿ ನೀಡಲಾಗುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇದೇ ವೇಳೆ, ಉಕ್ಕು ಕಾರ್ಖಾನೆಯನ್ನು ಖಾಸಗಿಗೆ ವಹಿಸುವ ಯಾವುದೇ ಪ್ರಶ್ನೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
The government is considering merging pellet maker KIOCL with iron ore major NMDC. Union Steel Minister HD Kumaraswamy said that KIOCL is in critical condition. "The process is on to consider merging KIOCL and NMDC. KIOCL has also reported losses," he said on the sidelines of a press meet here to announce a revival package of Rs 11,440 crore for Rashtriya Ispat Nigam Ltd (RINL).
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm