ಬ್ರೇಕಿಂಗ್ ನ್ಯೂಸ್
19-01-25 08:17 pm HK News Desk ದೇಶ - ವಿದೇಶ
ಪ್ರಯಾಗರಾಜ್, ಜ 19: ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಸಂಗಮದಲ್ಲಿರುವ ಮಹಾ ಕುಂಭಮೇಳ 2025 ರ ಸೆಕ್ಟರ್ ಸಂಖ್ಯೆ 6ರ ಶಿಬಿರದಲ್ಲಿ ಭಾನುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 20 ರಿಂದ 25 ಡೇರೆಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡದಲ್ಲಿ ಭಕ್ತರಿಗೆ ಸುಟ್ಟ ಗಾಯಗಳಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಟೆಂಟ್ನಲ್ಲಿ ಅಡುಗೆ ಮಾಡುತ್ತಿದ್ದಾಗ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ರಭಸವಾಗಿ ಬೀಸುವ ಗಾಳಿಯಿಂದಾಗಿ ಬೆಂಕಿ ಒಂದು ಡೇರೆಯಿಂದ ಮತ್ತೊಂದು ಡೇರೆಗೆ ವೇಗವಾಗಿ ಹರಡುತ್ತಿದೆ.
![]()



ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬೆಂಕಿ ಅವಘಡದ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಕಿಯಿಂದಾಗಿ ಕುಂಭಮೇಳ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಡೇರೆಗಳಲ್ಲಿ ಇರಿಸಲಾಗಿದ್ದ ಹಲವು ಸಿಲಿಂಡರ್ಗಳು ಸ್ಫೋಟಗೊಂಡಿವೆ ಎಂದು ಹೇಳಲಾಗುತ್ತಿದೆ. ಹಿರಿಯ ಪೊಲೀಸ್ ಹಾಗೂ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ಹಲವು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಪಘಾತಕ್ಕೆ ನಿಖರವಾದ ಕಾರಣವನ್ನು ಕಂಡು ಹಿಡಿಯಲು ಹೆಚ್ಚಿನ ತನಿಖೆ ಮುಂದುವರೆದಿದೆ.
ಸ್ವಸ್ತಿಕ್ ದ್ವಾರದ ಬಳಿ ಇರುವ ರೈಲ್ವೆ ಸೇತುವೆಯ ಕೆಳಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಇಲಾಖೆ ಸೆಕ್ಟರ್ 19 ರ ಪ್ರದೇಶವನ್ನು ಪ್ರವೇಶ ನಿಷೇಧಿಸಿದೆ. ಒಂದೇ ಸ್ಥಳದಲ್ಲಿ ಅನೇಕ ಸಿಲಿಂಡರ್ಗಳನ್ನು ಇಟ್ಟಿದ್ದ ಕಾರಣ, ನಿರಂತರವಾಗಿ ಸಿಲಿಂಡರ್ಗಳು ಸ್ಫೋಟಗೊಂಡಿವೆ. ಅನೇಕ ಅಗ್ನಿಶಾಮಕ ದಳ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಜೋರಾಗಿ ಗಾಳಿ ಬೀಸುತ್ತಿರುವುದರಿಂದ ಬೆಂಕಿಯನ್ನು ನಿಯಂತ್ರಿಸುವುದು ಕಷ್ಟಕರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
12 ವರ್ಷಗಳಿಗೊಮ್ಮೆ ಕುಂಭಮೇಳ ನಡೆಯುತ್ತದೆ. ಈ ಬಾರಿ ಜನವರಿ 13ರಿಂದ ಪ್ರಾರಂಭವಾಗಿರುವ ಕುಂಭಮೇಳವು ಫೆಬ್ರುವರಿ 26ರವರೆಗೆ ನಡೆಯಲಿದೆ.
A massive fire broke out in a camp at Sector Number 6 of Maha Kumbh Mela 2025 at Sangam, Prayagraj, Uttar Pradesh, on Sunday. Nearly 20 to 25 tents caught fire in the tent city of Maha Kumbh. There is no information on any devotees suffering from burns in the fire.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm