ಬ್ರೇಕಿಂಗ್ ನ್ಯೂಸ್
15-12-20 06:25 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.15: ಈ ದೇಶದಲ್ಲಿ ಬಿಜೆಪಿಯೇ ನಿಜವಾದ ತುಕ್ಡೇ ತುಕ್ಡೇ ಗ್ಯಾಂಗ್. ಪಂಜಾಬಿನಲ್ಲಿ ರೈತರ ಪ್ರತಿಭಟನೆ ಮುಂದಿಟ್ಟು ಹಿಂದುಗಳನ್ನು ಸಿಖ್ಖರ ವಿರುದ್ಧ ಎತ್ತಿಕಟ್ಟುತ್ತಿದೆ. ಸೌಹಾರ್ದತೆ ನೆಲೆಸಿದ್ದ ನಾಡಿನಲ್ಲಿ ಹಿಂಸೆ ಸೃಷ್ಟಿಸುತ್ತಿದೆ ಎಂದು ಶಿರೋಮಣಿ ಅಕಾಲಿದಳ್ ಘಟಕದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಆರೋಪಿಸಿದ್ದಾರೆ.
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಾದಲ್ ಈ ರೀತಿ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಹಿಂದು- ಮುಸ್ಲಿಮರನ್ನು ಒಡೆಯುವಂತೆ ಮಾಡಿದ್ರು. ಈಗ ಶಾಂತಿ ನೆಲೆಸಿದ್ದ ಪಂಜಾಬಿನಲ್ಲಿ ಹಿಂದುಗಳನ್ನು ಎತ್ತಿಕಟ್ಟುತ್ತಿದ್ದಾರೆ. ಹಿಂಸೆಗೆ ದೂಡುತ್ತಿದ್ದಾರೆ. ಎನ್ ಡಿಎ ಸರಕಾರ ರಾಜ್ಯಗಳ ಅಧಿಕಾರವನ್ನು ಬದಿಗೊತ್ತಿ ಕೃಷಿ ಕಾನೂನುಗಳನ್ನು ಹೇರುತ್ತಿದೆ. ಅಕಾಲಿ ದಳ ಹಿಂದೆ ಅಧಿಕಾರ ವಿಕೇಂದ್ರೀಕರಣದ ಬಗ್ಗೆ ಮಾತನಾಡಿದಾಗ ನಮ್ಮನ್ನು ಪ್ರತ್ಯೇಕತಾವಾದಿಗಳು ಎಂದಿದ್ದರು. ಈಗ ಎಲ್ಲರೂ ಈ ಬಗ್ಗೆ ದನಿ ಎತ್ತುತ್ತಿದ್ದಾರೆ. ವಿಕೇಂದ್ರೀಕರಣವೇ ಸರಿ ಎನ್ನುತ್ತಿದ್ದಾರೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
ಈಗಿನ ಸ್ಥಿತಿ ಹೇಗಿದೆ ಎಂದ್ರೆ ಕೇಂದ್ರ ಸರಕಾರವನ್ನು ಒಪ್ಪಿದವರು ಮಾತ್ರ ದೇಶಭಕ್ತರು. ವಿರೋಧಿಸಿದರೆ ಅವರೆಲ್ಲ ದೇಶ ವಿರೋಧಿಗಳು ಅನ್ನುವ ಸ್ಥಿತಿ ಇದೆ. ಕೇಂದ್ರ ಸರಕಾರದ ಕೃಷಿ ನೀತಿ ವಿರೋಧಿಸಿ ಪ್ರಕಾಶ್ ಸಿಂಗ್ ಬಾದಲ್ ಪದ್ಮ ಪ್ರಶಸ್ತಿ ನಿರಾಕರಿಸಿದ್ದು, ಕೇಂದ್ರ ಸಚಿವ ಸ್ಥಾನಕ್ಕೆ ಹರ್ ಸಿಮ್ರತ್ ಕೌರ್ ಬಾದಲ್ ರಾಜಿನಾಮೆ ನೀಡಿದ್ದೆಲ್ಲ ದೇಶದ್ರೋಹಿ ಚಟುವಟಿಕೆ ಎನ್ನುವಂತಾಗಿದೆ. ಈಗಿನ ಕೃಷಿ ನೀತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಹಿಂದು- ಸಿಕ್ಖರ ನಡುವಿನ ಸಂಘರ್ಷ ಎನ್ನುವಂತೆ ಬಿಂಬಿಸುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
06-10-25 07:21 pm
HK News Desk
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
06-10-25 07:19 pm
Mangalore Correspondent
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm