ಬ್ರೇಕಿಂಗ್ ನ್ಯೂಸ್
28-01-25 08:08 pm HK News Desk ದೇಶ - ವಿದೇಶ
ಕಾಸರಗೋಡು, ಜ.28: ನಿಧಿ ಶೋಧಕ್ಕಾಗಿ ಕುಂಬಳೆ ಆರಿಕ್ಕಾಡಿಯ ಹಳೆಯದಾದ ಕೋಟೆಯ ಆವರಣದಲ್ಲಿ ಅಗೆತ ಮಾಡಿದ್ದಕ್ಕಾಗಿ ಮೊಗ್ರಾಲ್ ಪುತ್ತೂರು ಪಂಚಾಯತ್ ಉಪಾಧ್ಯಕ್ಷ ಸೇರಿದಂತೆ ಐವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಆರಿಕ್ಕಾಡಿ ಕೋಟೆ ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದ್ದು, ಅಲ್ಲಿನ ಪಾಳುಬಿದ್ದ ಬಾವಿಯ ಒಳಗಡೆ ನಿಧಿಗಾಗಿ ಅಗೆಯಲಾಗಿದೆ.
ಕೋಟೆಯ ಒಳಗಡೆ ಕೆಲವು ಯುವಕರು ಅಗೆಯುತ್ತಿದ್ದಾರೆಂದು ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೊಗ್ರಾಲ್ ಪುತ್ತೂರು ಪಂಚಾಯ್ತಿ ಉಪಾಧ್ಯಕ್ಷ ಮುಜೀಬ್ ಕಂಬಾರ್ ಎಂಬಾತನ ಸೂಚನೆಯಂತೆ ನಿಧಿ ಶೋಧ ಮಾಡಿದ್ದಾಗಿ ತಿಳಿಸಿದ್ದಾರೆ. ಸ್ಥಳದಲ್ಲಿ ಹಾರೆ, ಇನ್ನಿತರ ವಸ್ತುಗಳು ಸಿಕ್ಕಿದ್ದು ವಶಕ್ಕೆ ಪಡೆಯಲಾಗಿದೆ.



ಕೋಟೆಯ ಒಳಗಡೆ ಜನರು ಇರುವ ಬಗ್ಗೆ ಸದ್ದು ಕೇಳಿಬಂದಿದ್ದು, ಯಾರೆಂದು ನೋಡಲು ಸ್ಥಳೀಯರು ತೆರಳಿದ್ದರು. ಜನರು ಬರುತ್ತಿದ್ದುದನ್ನು ನೋಡಿ ಯುವಕರು ಪರಾರಿಯಾಗಲು ಯತ್ನಿಸಿದ್ದು, ಅಷ್ಟರಲ್ಲಿ ಒಂದಿಬ್ಬರನ್ನು ಹಿಡಿದು ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಣ್ಣೂರಿನ ಕುಟುಂಬಶ್ರೀ ಕಾರ್ಯಕರ್ತರು ಈ ಬಗ್ಗೆ ಮಾತನಾಡುತ್ತಿದ್ದು ಕೋಟೆ ಒಳಗಡೆ ನಿಧಿ ಇರುವ ಬಗ್ಗೆ ವದಂತಿ ಇತ್ತು. ಹೀಗಾಗಿ ಬಾವಿ ಒಳಗಡೆ ಅಗೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದಾರೆ.
The Kumbala Police on Monday detained five people, including a panchayat vice-president, for attempting to dig for treasure in a well at the Kumbla Arikady Fort, which is under the control of the Department of Archaeology.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm