ಬ್ರೇಕಿಂಗ್ ನ್ಯೂಸ್
31-01-25 09:10 pm HK News Desk ದೇಶ - ವಿದೇಶ
ನವದೆಹಲಿ, ಜ.31: ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪೂವರ್ ಲೇಡಿ ಎಂದು ಮೂದಲಿಸಿ ಕಾಂಗ್ರೆಸ್ ನಾಯಕಿ ಮತ್ತು ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಬುಡಕಟ್ಟು ಸಮುದಾಯದ ಮೊದಲ ರಾಷ್ಟ್ರಪತಿಯನ್ನು ವ್ಯಂಗ್ಯ ಮಾಡಿದ್ದಾರೆಂದು ತೀವ್ರವಾಗಿ ತಿರುಗೇಟು ನೀಡಿದೆ.
ಭಾರತದ ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಖಂಡಿಸಿದ್ದು ಕಾಂಗ್ರೆಸ್ ಬಹಿರಂಗ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ಎನ್ಡಿಎ ಸಂಭವ ಆಡಬಹುದು ಮೂರನೇ ಅವಧಿಯಲ್ಲಿ ಕೆಲಸದ ವೇಗ ಮೂರು ಪಟ್ಟು ಹೆಚ್ಚಾಗಿದೆ ಎಂದು ಹೇಳಿದ್ದರು.
ಸೋನಿಯಾ ಗಾಂಧಿ ಸಂಸತ್ತಿನಿಂದ ಹೊರಬರುತ್ತಲೇ ರಾಷ್ಟ್ರಪತಿ ಭಾಷಣವನ್ನು ಟೀಕಿಸಿದ್ದು, ಮುರ್ಮು ಅವರು ಭಾಷಣದೊಂದಿಗೆ ಆಯಾಸಗೊಂಡಿದ್ದರು. ಯಾವುದಕ್ಕೂ ಆಗದ ಪೂವರ್ ಲೇಡಿ ಎಂದು ಕುಟುಕಿದ್ದಾರೆ. ರಾಹುಲ್ ಗಾಂಧಿ ಕೂಡ ರಾಷ್ಟ್ರಪತಿ ಭಾಷಣವನ್ನು ನೀರಸ ಎಂದು ಲೇವಡಿ ಮಾಡಿದ್ದಾರೆ. ಸೋನಿಯಾ ಮಾತು ಮಾತ್ರ ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ.
ಬುಡಕಟ್ಟು ಜನಾಂಗದವರಿಗೆ, ಪ್ರತಿ ಮಹಿಳೆಗೆ ಅವಮಾನ ;
ಗಾಂಧಿ ಕುಟುಂಬದ ಹೊರಗಿನ ಯಾರಾದರೂ ಉನ್ನತ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸುವುದನ್ನು ಕಂಡರೆ ಈ ಸುಳ್ಳು ಗಾಂಧಿ ಕುಟುಂಬಕ್ಕೆ ಸಹಿಸಲು ಆಗುವುದಿಲ್ಲ. ಈ ಅವಮಾನ ಪ್ರತಿಯೊಬ್ಬ ಭಾರತೀಯನಿಗೆ, ಪ್ರತಿಯೊಬ್ಬ ಬುಡಕಟ್ಟು ಜನಾಂಗದವರಿಗೆ, ಪ್ರತಿಯೊಬ್ಬ ಮಹಿಳೆಗೆ ಮಾಡಿದ ಅವಮಾನ ಎಂದು ಬಿಜೆಪಿ ನಾಯಕರು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಜೆ.ಪಿ. ನಡ್ಡಾ, ಕಾಂಗ್ರೆಸ್ ಪಾರ್ಟಿ ಬುಡಕಟ್ಟು ಸಮುದಾಯಗಳ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಉದ್ದೇಶಪೂರ್ವಕ ಇಂತಹ ಪದಗಳನ್ನು ಬಳಸಿದ್ದು ಕಾಂಗ್ರೆಸ್ ಪಕ್ಷದ ಬಡವರ ವಿರೋಧಿ ಮತ್ತು ಬುಡಕಟ್ಟು ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ನಡ್ಡಾ ಟ್ವೀಟ್ ಮಾಡಿದ್ದಾರೆ.
ಉನ್ನತ ಹುದ್ದೆಯ ಘನತೆಯನ್ನು ಘಾಸಿಗೊಳಿಸುವ ಹೇಳಿಕೆ ;
ಸೋನಿಯಾ ಗಾಂಧಿ ಮಾತಿಗೆ ರಾಷ್ಟ್ರಪತಿ ಭವನದಿಂದ ಹೇಳಿಕೆ ಬಿಡುಗಡೆ ಮಾಡಲಾಗಿದ್ದು ಕಾಂಗ್ರೆಸ್ ಪಕ್ಷದ ಕೆಲವು ಪ್ರಮುಖ ನಾಯಕರು ಉನ್ನತ ಹುದ್ದೆಯ ಘನತೆಯನ್ನು ಘಾಸಿಗೊಳಿಸುವ ಹೇಳಿಕೆ ನೀಡಿದ್ದಾರೆ. ರಾಷ್ಟ್ರಪತಿಗಳು ಭಾಷಣದ ಕೊನೆಯಲ್ಲಿ ಸುಸ್ತಾಗಿದ್ದರು, ಮಾತನಾಡಲು ಕಷ್ಟಪಟ್ಟರು ಎಂದೂ ಹೇಳಿದ್ದಾರೆ. ಇಂತಹ ಹೇಳಿಕೆಗಳು ಸ್ವೀಕಾರಾರ್ಹವಲ್ಲ.
ಸತ್ಯದಿಂದ ದೂರವಿರಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿ ಭವನ ಸ್ಪಷ್ಟಪಡಿಸಲು ಬಯಸುತ್ತದೆ. ಅವರು ಯಾವುದೇ ಹಂತದಲ್ಲೂ ದಣಿದಿರಲಿಲ್ಲ. ವಾಸ್ತವವಾಗಿ ಅಳಿವಿನ ಅಂಚಿನಲ್ಲಿರುವ ಸಮುದಾಯ, ಮಹಿಳೆಯರು ಮತ್ತು ರೈತರ ಪರವಾಗಿ ಮಾತನಾಡುವಾಗ ಎಂದಿಗೂ ಆಯಾಸವಾಗುವುದಿಲ್ಲ ಎಂದು ಅವರು ನಂಬಿದ್ದರು. ಆದ್ರೆ ಈ ನಾಯಕರು ಹಿಂದಿಯಂತಹ ಭಾರತೀಯ ಭಾಷೆಗಳಲ್ಲಿನ ಭಾಷಾ ವೈಶಿಷ್ಟ್ಯ ಮತ್ತು ಪ್ರವಚನದ ಬಗ್ಗೆ ತಮ್ಮನ್ನು ತಾವು ಪರಿಚಯಿಸಿಕೊಂಡಿಲ್ಲ. ಇದರಿಂದಾಗಿ ತಪ್ಪು ಅನಿಸಿಕೆ ಉಂಟಾಗಿರಬಹುದು ಎಂದು ರಾಷ್ಟ್ರಪತಿಗಳ ಕಚೇರಿ ನಂಬುತ್ತದೆ. ದುರದೃಷ್ಟವಶಾತ್ ಅವರು ಕಳಪೆ ಅಭಿರುಚಿಯಲ್ಲಿದ್ದರೆ ಅದನ್ನು ತಪ್ಪಿಸಬಹುದು ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
The Rashtrapati Bhavan on Friday reacted strongly to remarks made by senior Congress leader Sonia Gandhi who referred to Droupadi Murmu as "poor thing." Sonia used the phrase while responding to queries by media persons on President's address to the joint sitting of Parliament to mark the beginning of the Budget Session.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm