ಬ್ರೇಕಿಂಗ್ ನ್ಯೂಸ್
08-02-25 02:23 pm HK News Desk ದೇಶ - ವಿದೇಶ
ನವದೆಹಲಿ, ಫೆ.8: ಲಿಕ್ಕರ್ ಹಗರಣದಲ್ಲಿ ಮುಳುಗೆದ್ದ ಆಮ್ ಆದ್ಮಿ ಪಕ್ಷವನ್ನು ದೆಹಲಿ ಮತದಾರ ಪೊರಕೆ ಹಿಡಿದು ಗುಡಿಸಿ ಹಾಕಿದ್ದಾನೆ. ಬಿಜೆಪಿ 46 ಸ್ಥಾನಗಳಲ್ಲಿ ಸ್ಪಷ್ಟ ಮುನ್ನಡೆ ಸಾಧಿಸಿದ್ದರೆ, ಆಪ್ ಪಕ್ಷವು 22 ಸ್ಥಾನಗಳನ್ನು ಪಡೆದು ಏದುಸಿರು ಬಿಟ್ಟಿದೆ.
ಆಪ್ ಮುಖ್ಯಮಂತ್ರಿ ಅತಿಷಿ ಕಾಲ್ಕಜಿ ಮತ ಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಸಾಧಿಸಿದರೆ, ಮಾಜಿ ಮುಖ್ಯಮಂತ್ರಿ, ಆಪ್ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅಚ್ಚರಿಯ ಸೋಲು ಕಂಡಿದ್ದಾರೆ. ಅತಿಷಿ ಪ್ರತಿಸ್ಪರ್ಧಿ ಬಿಜೆಪಿಯ ರಮೇಶ್ ಬಿಧೂರಿ ವಿರುದ್ಧ 2700 ಮತಗಳಿಂದ ಗೆಲುವು ಪಡೆದಿದ್ದಾರೆ.

ಕೇಜ್ರಿವಾಲ್ ನವದೆಹಲಿ ಕ್ಷೇತ್ರದಲ್ಲಿ 21561 ಮತ ಗಳಿಸಿದ್ದು ಬಿಜೆಪಿಯ ಪರ್ವೇಶ್ ವರ್ಮಾ (24743) ವಿರುದ್ಧ 3152 ಮತಗಳಿಂದ ಸೋಲುಂಡಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸಿನ ಸಂದೀಪ್ ದೀಕ್ಷಿತ್ 3113 ಮತಗಳನ್ನಷ್ಟೆ ಪಡೆದಿದ್ದಾರೆ.
ಡಿಸಿಎಂ ಮನೀಶ್ ಸಿಸೋಡಿಯಾ (30724) ಜಾನ್ ಪುರ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎದುರಾಳಿ ಬಿಜೆಪಿಯ ತರ್ವಿಂದರ್ ಸಿಂಗ್ ಮರ್ವಾ (31593) ವಿರುದ್ಧ ಅಲ್ಪ ಅಂತರದಲ್ಲಿ ಸೋಲನುಭವಿಸಿದ್ದಾರೆ.
ಆಮ್ ಆದ್ಮಿ ಪಕ್ಷವು ಸತತ ನಾಲ್ಕನೇ ಬಾರಿಗೆ ದೆಹಲಿ ಗದ್ದುಗೆ ಪಡೆಯಲು ಸಿದ್ಧತೆ ನಡೆಸಿತ್ತು. ಆದರೆ ಆಪ್ ಆಡಳಿತಕ್ಕೆ ಆಡಳಿತ ವಿರೋಧಿ ಅಲೆಯೂ ಜೋರಾಗಿತ್ತು. ಇದನ್ನು ಸೆಳೆದುಕೊಳ್ಳುವಲ್ಲಿ ಕಾಂಗ್ರೆಸ್ ಸೋತಿದ್ದರೆ, ಬಿಜೆಪಿಗೆ ವರವಾಗಿ ಪರಿಣಮಿಸಿತು. ಇದರಿಂದಾಗಿ 70 ಕ್ಷೇತ್ರಗಳಲ್ಲಿ ಬಿಜೆಪಿ ಯಾರೂ ಊಹಿಸದ ರೀತಿಯ ಗೆಲುವು ದಾಖಲಿಸಿದೆ. ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ - ಆಪ್ - ಬಿಜೆಪಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರಿಂದ ಬಿಜೆಪಿ ವಿರೋಧಿ ಕೂಟಕ್ಕೆ ಸೋಲಾಗಿದೆ.
Election Commission of India Delhi results LIVE: Current standings indicate that the BJP is set to return to power in Delhi after 27 years, with party leading/winning in 48 seats, while AAP is ahead/has won 22, much below the majority mark of 36, according to EC data at around 1:20 pm.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm