ಬ್ರೇಕಿಂಗ್ ನ್ಯೂಸ್
09-02-25 09:32 pm HK News Desk ದೇಶ - ವಿದೇಶ
ಮೆಕ್ಸಿಕೋ, ಫೆ.9: 48 ಜನರನ್ನು ಒಯ್ಯುತ್ತಿದ್ದ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗ ಧಗನೆ ಉರಿದಿದ್ದು 41 ಜನರು ಸಜೀವ ದಹನವಾದ ಘಟನೆ ದಕ್ಷಿಣ ಮೆಕ್ಸಿಕೋ ನಗರದಲ್ಲಿ ನಡೆದಿದೆ.
ಪ್ರಯಾಣಿಕರಿದ್ದ ಬಸ್ಸಿನಲ್ಲಿ ಬೆಂಕಿ ಉಂಟಾಗಿದ್ದರಿಂದ 38 ಪ್ರಯಾಣಿಕರು ಮತ್ತು ಟ್ರಕ್ ಹಾಗೂ ಬಸ್ಸಿನ ಇಬ್ಬರು ಚಾಲಕರು ನೋಡ ನೋಡುತ್ತಲೇ ಸುಟ್ಟು ಕರಕಲಾಗಿದ್ದಾರೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಈ ಘಟನೆ ಶನಿವಾರ ಬೆಳಗಿನ ಜಾವ ತಬಾಸ್ಕೊ ರಾಜ್ಯದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಟ್ರಕ್ ಚಾಲಕನೂ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳದಲ್ಲಿ ಇದುವರೆಗೆ 18 ಜನರ ಅವಶೇಷಗಳನ್ನು ಗುರುತಿಸಲಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದು ಸಾವು- ನೋವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಪೂರ್ತಿ ಸುಟ್ಟು ಹೋಗಿದ್ದು ಕೊನೆಗೆ ಕೇವಲ ಲೋಹದ ವಸ್ತುಗಳು ಮಾತ್ರ ಉಳಿದುಕೊಂಡಿವೆ. ಬೆಂಕಿಯ ಕೆನ್ನಾಲಿಗೆ ಬಾನೆತ್ತರಕ್ಕೆ ಏರಿದ್ದು ಇದರ ವಿಡಿಯೋಗಳು ಹರಿದಾಡಿವೆ. ಹೀಗಾಗಿ ಮೃತದೇಗದ ಅವಶೇಷಗಳು ಗುರುತೇ ಸಿಗದಂತಾಗಿದ್ದು ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ. ಬಸ್ ಅತಿ ವೇಗವೇ ಅಪಘಾತಕ್ಕೆ ಕಾರಣವೇ, ಬೆಂಕಿ ಹೊತ್ತಿಕೊಂಡಿದ್ದು ಹೇಗೆ ಮತ್ತು ಟ್ರಕ್ ನಲ್ಲಿ ಏನಾದರೂ ಹೊತ್ತಿಕೊಳ್ಳಬಲ್ಲ ಪದಾರ್ಥ ಇತ್ತೇ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಪ್ರಯಾಣಿಕರನ್ನು ಹೊತ್ತ ಬಸ್ ಕಾನ್ಕೂನ್ ನಗರದಿಂದ ತಬಾಸ್ಕೋ ನಗರಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
A traffic accident involving a bus in southern Mexico, which took place in the early hours of Saturday morning, killed 41 people, the government of Tabasco state said in a statement, adding that recovery work was still ongoing.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm