ಬ್ರೇಕಿಂಗ್ ನ್ಯೂಸ್
10-02-25 02:13 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.10: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು ನೇತೃತ್ವದ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದೆ.
ಲಡ್ಡು ತಯಾರಿಕೆಯ ಗುತ್ತಿಗೆ ಪಡೆದಿದ್ದ ಮತ್ತು ತುಪ್ಪ ಪೂರೈಕೆ ಗುತ್ತಿಗೆ ಹೊಂದಿದ್ದ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್ (ರೂರ್ಕಿ, ಉತ್ತರಾಖಂಡ), ವೈಷ್ಣವಿ ಡೈರಿಯ (ಪೂನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (ದಿಂಡಿಗಲ್) ಎಂಡಿ ರಾಜು ರಾಜಶೇಖರನ್ ಅವರನ್ನು ಲಡ್ಡು ಪ್ರಸಾದ ಕಲಬೆರಕೆ ಹಗರಣದಲ್ಲಿ ಬಂಧಿಸಲಾಗಿದೆ. ಎಸ್ಐಟಿ ಅಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿ ಪಡೆಯಲಿದ್ದಾರೆ.
ತನಿಖೆಯಲ್ಲಿ ತುಪ್ಪ ಪೂರೈಕೆಯಲ್ಲಿ ಪಾಲಿಸಬೇಕಾದ ನಿಯಮಗಳ ಉಲ್ಲಂಘನೆಯಾಗಿರುವುದು, ಟೆಂಡರ್ ಪಡೆಯಲು ನಕಲಿ ದಾಖಲೆಗಳು ಮತ್ತು ಸ್ಟ್ಯಾಂಪ್ಗಳನ್ನು ಬಳಸಿರುವುದು ಪತ್ತೆಯಾಗಿದೆ. ವೈಷ್ಣವಿ ಡೈರಿ ಮತ್ತು ಭೋಲೆ ಬಾಬಾ ಡೈರಿ ತುಪ್ಪ ಪೂರೈಕೆಯ ನಿಯಮಗಳನ್ನು ತಿರುಚಿರುವುದು ಬೆಳಕಿಗೆ ಬಂದಿದೆ. ವಿಚಾರಣೆಯಲ್ಲಿ ಸುಳ್ಳು ದಾಖಲೆಗಳನ್ನು ನೀಡಿರುವುದು ಕಂಡುಬಂದಿವೆ.
ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಮಿಶ್ರಣ ಮಾಡಲಾಗಿದೆ ಎಂಬ ಆಘಾತಕಾರಿ ಅಂಶ ದೇಶವನ್ನೇ ಬೆಚ್ಚಿಬೀಳಿಸಿತ್ತು. ಹಿಂದೂ ಧರ್ಮೀಯರ ನಂಬಿಕೆಗೆ ಅಪಮಾನ ಮಾಡಲಾಗಿದೆ ಎಂದು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಿಎಂ ಚಂದ್ರಬಾಬು ನಾಯ್ಡು ಅವರು ಈ ಹಿಂದಿನ ವೈಎಸ್ಆರ್ಸಿಪಿ ಸರ್ಕಾರ ತಿರುಮಲ ಲಡ್ಡುವಿನ ಗುಣಮಟ್ಟದ ಬಗ್ಗೆ ಕಾಳಜಿ ವಹಿಸಲಿಲ್ಲ ಎಂದು ಗಂಭೀರ ಆರೋಪ ಮಾಡಿದ್ದರು.
The CBI has arrested four people in connection with the Tirupati laddu adulteration case. Those arrested were Pomil Jain and Bipin Jain, former directors of Bhole Baba Dairy in Roorkee; Apoorva Vinay Kant Chawda, CEO of Vaishnavi Dairy, Poonambakkam; and Raju Rajasekharan, the MD of AR Dairy, Dundigal.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm