ಬ್ರೇಕಿಂಗ್ ನ್ಯೂಸ್
10-02-25 02:13 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.10: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು ನೇತೃತ್ವದ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದೆ.
ಲಡ್ಡು ತಯಾರಿಕೆಯ ಗುತ್ತಿಗೆ ಪಡೆದಿದ್ದ ಮತ್ತು ತುಪ್ಪ ಪೂರೈಕೆ ಗುತ್ತಿಗೆ ಹೊಂದಿದ್ದ ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್ (ರೂರ್ಕಿ, ಉತ್ತರಾಖಂಡ), ವೈಷ್ಣವಿ ಡೈರಿಯ (ಪೂನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (ದಿಂಡಿಗಲ್) ಎಂಡಿ ರಾಜು ರಾಜಶೇಖರನ್ ಅವರನ್ನು ಲಡ್ಡು ಪ್ರಸಾದ ಕಲಬೆರಕೆ ಹಗರಣದಲ್ಲಿ ಬಂಧಿಸಲಾಗಿದೆ. ಎಸ್ಐಟಿ ಅಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿ ಪಡೆಯಲಿದ್ದಾರೆ.
ತನಿಖೆಯಲ್ಲಿ ತುಪ್ಪ ಪೂರೈಕೆಯಲ್ಲಿ ಪಾಲಿಸಬೇಕಾದ ನಿಯಮಗಳ ಉಲ್ಲಂಘನೆಯಾಗಿರುವುದು, ಟೆಂಡರ್ ಪಡೆಯಲು ನಕಲಿ ದಾಖಲೆಗಳು ಮತ್ತು ಸ್ಟ್ಯಾಂಪ್ಗಳನ್ನು ಬಳಸಿರುವುದು ಪತ್ತೆಯಾಗಿದೆ. ವೈಷ್ಣವಿ ಡೈರಿ ಮತ್ತು ಭೋಲೆ ಬಾಬಾ ಡೈರಿ ತುಪ್ಪ ಪೂರೈಕೆಯ ನಿಯಮಗಳನ್ನು ತಿರುಚಿರುವುದು ಬೆಳಕಿಗೆ ಬಂದಿದೆ. ವಿಚಾರಣೆಯಲ್ಲಿ ಸುಳ್ಳು ದಾಖಲೆಗಳನ್ನು ನೀಡಿರುವುದು ಕಂಡುಬಂದಿವೆ.
ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಮಿಶ್ರಣ ಮಾಡಲಾಗಿದೆ ಎಂಬ ಆಘಾತಕಾರಿ ಅಂಶ ದೇಶವನ್ನೇ ಬೆಚ್ಚಿಬೀಳಿಸಿತ್ತು. ಹಿಂದೂ ಧರ್ಮೀಯರ ನಂಬಿಕೆಗೆ ಅಪಮಾನ ಮಾಡಲಾಗಿದೆ ಎಂದು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಿಎಂ ಚಂದ್ರಬಾಬು ನಾಯ್ಡು ಅವರು ಈ ಹಿಂದಿನ ವೈಎಸ್ಆರ್ಸಿಪಿ ಸರ್ಕಾರ ತಿರುಮಲ ಲಡ್ಡುವಿನ ಗುಣಮಟ್ಟದ ಬಗ್ಗೆ ಕಾಳಜಿ ವಹಿಸಲಿಲ್ಲ ಎಂದು ಗಂಭೀರ ಆರೋಪ ಮಾಡಿದ್ದರು.
The CBI has arrested four people in connection with the Tirupati laddu adulteration case. Those arrested were Pomil Jain and Bipin Jain, former directors of Bhole Baba Dairy in Roorkee; Apoorva Vinay Kant Chawda, CEO of Vaishnavi Dairy, Poonambakkam; and Raju Rajasekharan, the MD of AR Dairy, Dundigal.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm