ಬ್ರೇಕಿಂಗ್ ನ್ಯೂಸ್
16-12-20 10:28 pm Headline Karnataka News Network ದೇಶ - ವಿದೇಶ
ನವದೆಹಲಿ (ಡಿ.16): ದೆಹಲಿಯಲ್ಲಿ ಪ್ರತಿಭಟನಾನಿರತ ರೈತರ ಕಷ್ಟಗಳನ್ನು ನೋಡಲಾಗದೇ ಗುರುದ್ವಾರದ ಸಂತ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದೇ ವೇಳೆ ಡೆತ್ ನೋಟ್ ಬರೆದಿರುವ ಅವರು ಸರ್ಕಾರದ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 65 ವರ್ಷ ಬಾಬಾ ರಾಮ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಸಂತ.

ದೆಹಲಿ ಸೋನಿಪತ್ ಗಡಿಯಲ್ಲಿ ಪ್ರತಿಭಟನಾ ರೈತರಿಗೆ ಬೆಂಬಲವಾಗಿ ಹೋರಾಟದಲ್ಲಿ ಇವರು ಭಾಗಿಯಾಗಿದ್ದರು. ಕಳೆದ 21 ದಿನಗಳಿಂದ ದೇಶದ ರಾಜಧಾನಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆ ರೈತರಿಗಾಗಿ ಬಾಬಾ ರಾಮ್ ಸಿಂಗ್ ಪ್ರಾಣತ್ಯಾಗ ಮಾಡಿರುವುದಾಗಿ ತಿಳಿಸಿದ್ದಾರೆ. 'ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವುದು ನೋವು ತಂದಿದೆ. ನಾನು ಅವರ ನೋವನ್ನು ಹಂಚಿಕೊಂಡಿದ್ದೇನೆ. ಸರ್ಕಾರ ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿಲ್ಲ. ಅನ್ಯಾಯ ಮಾಡುವುದು ಕೂಡ ಪಾಪ, ಆದರೆ, ಅನ್ಯಾಯವನ್ನು ಸಹಿಸುವುದು ಕೂಡ ದೊಡ್ಡ ಪಾಪವಾಗಿದೆ. ರೈತರನ್ನು ಬೆಂಬಲಿಸಲು ಕೆಲವರು ಸರ್ಕಾರಕ್ಕೆ ಹಲವಾರು ಪ್ರಶಸ್ತಿಗಳನ್ನು ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣತ್ಯಾಗದ ಮೂಲಕ ಅವರಿಗೆ ಬೆಂಬಲಿಸುತ್ತಿದ್ದೇನೆ. ನನ್ನ ಆತ್ಮಹತ್ಯೆ ದಬ್ಬಾಳಿಕೆ ವಿರುದ್ಧದ ಧ್ವನಿಯಾಗಿದೆ' ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಅವರನ್ನು ತಕ್ಷಣಕ್ಕೆ ಪಾಣಿಪತ್ನ ಪಾರ್ಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಮಾರ್ಗಮಧ್ಯೆದಲ್ಲಿಯೇ ಅವರು ಸಾವನ್ನಪ್ಪಿದ್ದಾರೆ ಎಂದು ವೈದರು ತಿಳಿಸಿದರು ಎಂದು ಸೋನಿಪಾತ್ನ ಉಪ ಪೊಲೀಸ್ ಆಯುಕ್ತ ಶ್ಯಾಮ್ ಲಾಲ್ ಪೂನಿಯಾ ತಿಳಿಸಿದ್ದಾರೆ. ಅವರ ಮೃತದೇಹವನ್ನು ಸದ್ಯ ಕರ್ನಾಲ್ಗೆ ಸ್ಥಳಾಂತರಿಸಲಾಗುತ್ತಿದೆ.
A Sikh preacher supporting the farmers' agitation against the Centre's agriculture laws allegedly committed suicide near the Singhu border in Delhi on Wednesday, police said.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm