ಬ್ರೇಕಿಂಗ್ ನ್ಯೂಸ್
18-02-25 10:49 pm HK News Desk ದೇಶ - ವಿದೇಶ
ಪಾಟ್ನಾ, ಫೆ.19 : ಆತ ಇಬ್ಬರು ಹೆಂಡಿರ ಮುದ್ದಿನ ಪತಿರಾಯ. 25 ವರ್ಷಗಳ ಹಿಂದೆ ಮೊದಲ ಮದುವೆಯಾಗಿದ್ದ ಈ ವ್ಯಕ್ತಿ ಕಳೆದ 7 ವರ್ಷದ ಹಿಂದೆ ಮೊದಲ ಪತ್ನಿಗೆ ಗೊತ್ತಾಗದಂತೆ ಗುಟ್ಟಾಗಿ ಎರಡನೇ ಮದುವೆ ಆಗಿದ್ದ. ವಿಷಯ ತಿಳಿದು ಮೊದಲ ಹೆಂಡತಿ ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಇಕ್ಕಟ್ಟಿಗೆ ಸಿಲುಕಿದ್ದ.
ಹೌದು, ಬಿಹಾರದಲ್ಲಿ ಬೆಳಕಿಗೆ ಬಂದಿರುವ ಈ ವಿಚಿತ್ರ ಪ್ರಕರಣವೀಗ ದೇಶದ ಗಮನ ಸೆಳೆದಿದೆ. ಇದು ಒಬ್ಬನೇ ಗಂಡನನ್ನು ಇಬ್ಬರು ಪತ್ನಿಯರು ಹಂಚಿಕೊಂಡಿರುವ ಅಪರೂಪದ ಪ್ರಸಂಗ. ಪೊಲೀಸ್ ಕೌಟುಂಬಿಕ ಸಾಂತ್ವನ ಕೇಂದ್ರ ನೀಡಿರುವ ಒಪ್ಪಂದದ ಪ್ರಕಾರ, ಪತಿರಾಯ ಮೊದಲ ಹೆಂಡತಿ ಬಳಿ ವಾರದಲ್ಲಿ ನಾಲ್ಕು ದಿನ ಮತ್ತು ಎರಡನೇ ಹೆಂಡತಿ ಬಳಿ ಮೂರು ದಿನಗಳ ಕಾಲ ಸಂಸಾರ ನಡೆಸಬೇಕಾಗಿದೆ.
ಮೊದಲ ಪತ್ನಿ ಪೂರ್ಣಿಮಾ ಗಂಡನ ನಡೆಯಿಂದ ಬೇಸತ್ತು ಪೂರ್ನಿಯಾ ಪೊಲೀಸ್ ಠಾಣೆ ಕಚೇರಿಗೆ ತೆರಳಿ, ತನ್ನ ಪತಿ ಶಂಕರ್ ವಿರುದ್ಧ ದೂರು ನೀಡಿದ್ದರು. ತಾವಿಬ್ಬರು 2000ನೇ ಇಸ್ವಿಯಲ್ಲಿ ಮದುವೆಯಾಗಿದ್ದು, ಇಬ್ಬರು ಮಕ್ಕಳು ಸಹ ಇದ್ದಾರೆ. ನನಗೆ ಗೊತ್ತಾಗದಂತೆ ನನ್ನ ಗಂಡ ಉಷಾ ದೇವಿ ಎಂಬವಳನ್ನ ಎರಡನೇ ಮದುವೆಯಾಗಿದ್ದಾನೆ ಎಂದು ಎಸ್ಪಿ ಎದುರು ಅಳಲು ತೋಡಿಕೊಂಡಿದ್ದರು.
ಶಂಕರ್ ಅವರ ಮೊದಲ ಪತ್ನಿ ಪೂರ್ಣಿಮಾ, ತನ್ನ ಪತಿ ಕುಟುಂಬದ ನಿರ್ವಹಣೆಗೆ ಹಣ ನೀಡುತ್ತಿಲ್ಲ. ಮಕ್ಕಳ ಶಿಕ್ಷಣವನ್ನು ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು. ಅವರ ದೂರು ಆಲಿಸಿದ್ದು, ಈ ಕುರಿತಂತೆ ಪೊಲೀಸ್ ಕೌಟುಂಬಿಕ ಸಾಂತ್ವನ ಕೇಂದ್ರದಲ್ಲಿ ದೂರು ನೀಡುವಂತೆ ಸೂಚಿಸಿ, ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗಿತ್ತು ಎಂದು ಎಸ್ಪಿ ಕಾರ್ತಿಕೇಯಾ ಶರ್ಮಾ ಮಾಹಿತಿ ನೀಡಿದ್ದಾರೆ.
A beloved husband of two wives, husband now victim of the wives quarrel in patna.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm