ಬ್ರೇಕಿಂಗ್ ನ್ಯೂಸ್
26-02-25 05:11 pm HK News Desk ದೇಶ - ವಿದೇಶ
ಕೊಯಮತ್ತೂರು, ಫೆ.26 : 2026ರಲ್ಲಿ ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ ನಂತರ ಜನಸಂಖ್ಯೆ ಲೆಕ್ಕದಲ್ಲಿ ತಮಿಳುನಾಡು ಲೋಕಸಭೆ ಕ್ಷೇತ್ರಗಳ ಸಂಖ್ಯೆ 39ರಿಂದ 31ಕ್ಕೆ ಇಳಿಕೆಯಾಗಲಿದೆ ಎಂದಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆ ಕುರಿತು ಸ್ಟಾಲಿನ್ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರ 2014-24ರ ಅವಧಿಯಲ್ಲಿ ತಮಿಳುನಾಡಿಗೆ 5,08,337 ಕೋಟಿ ರೂ. ಅನುದಾನ ನೀಡಿದೆ ಎಂದು ಗೃಹ ಸಚಿವ ಅಮಿತ್ ಷಾ ಹೇಳಿದರು.
ಕ್ಷೇತ್ರ ವಿಂಗಡಣೆ ಬಳಿಕ ತಮಿಳುನಾಡು ಸೇರಿದಂತೆ ಯಾವುದೇ ದಕ್ಷಿಣ ರಾಜ್ಯಗಳ ಸಂಸದರ ಸಂಖ್ಯೆ ಕಡಿಮೆಯಾಗುವುದಿಲ್ಲ. ಅಂತಹ ಭಯ ಬೇಡ ಎಂದು ಅಮಿತ್ ಶಾ ಹೇಳಿದ್ದಾರೆ. ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿಯನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅಮಿತ್ ಶಾ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ 'ವೈಫಲ್ಯ'ದ ಬಗ್ಗೆ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಟೀಕಿಸಿದರು. "ತಮಿಳುನಾಡಿನಲ್ಲಿ ರಾಷ್ಟ್ರ ವಿರೋಧಿ ಪ್ರವೃತ್ತಿ ಹೆಚ್ಚುತ್ತಿದ್ದು ಜನರು ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿಯಾಗಿದೆ" ಎಂದರು.
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ, ಮಾದಕ ದ್ರವ್ಯಗಳ ಮಾರಾಟಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ಅಕ್ರಮ ಗಣಿ ಮಾಫಿಯಾಗಳು ರಾಜಕೀಯ, ರಾಜಕಾರಣಿಗಳನ್ನು ಭ್ರಷ್ಟಗೊಳಿಸುತ್ತಿದೆ ಎಂದು ಆರೋಪಿಸಿದರು. ಆಡಳಿತ ನಡೆಸುತ್ತಿರುವ ಡಿಎಂಕೆ ಪಕ್ಷದ ಎಲ್ಲಾ ನಾಯಕರು ಭ್ರಷ್ಟಾಚಾರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ" ಎಂದು ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದರು.
Union Home Minister Amit Shah on Wednesday launched a scathing attack on the ruling DMK government in Tamil Nadu, accusing its leaders of corruption and misgovernance.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm